AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸಿನಿಮಾದಲ್ಲಿ ಶಿವಣ್ಣ, ಪ್ರಭಾಸ್​, ಮೋಹನ್​ಲಾಲ್​, ವಿಷ್ಣು ಮಂಚು; ದೊಡ್ಡದಾಯ್ತು ‘ಕಣ್ಣಪ್ಪ’ ಪಾತ್ರವರ್ಗ

1988ರಲ್ಲಿ ಶಿವರಾಜ್‍ಕುಮಾರ್ ನಟನೆಯ ‘ಶಿವ ಮೆಚ್ಚಿದ ಕಣ್ಣಪ್ಪ’ ಸಿನಿಮಾ ಬಿಡುಗಡೆ ಆಗಿತ್ತು. ಆ ಸಿನಿಮಾದಲ್ಲಿ ಶಿವಣ್ಣ ಅವರು ಕಣ್ಣಪ್ಪನ ಪಾತ್ರ ಮಾಡಿದ್ದರು. ಈಗ ಅದೇ ಕಣ್ಣಪ್ಪನ ಕಥೆಯನ್ನು ಇಟ್ಟುಕೊಂಡು ತೆಲುಗಿನಲ್ಲಿ ವಿಷ್ಣು ಮಂಚು ಅವರು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರತಂಡಕ್ಕೆ ಶಿವರಾಜ್​ಕುಮಾರ್​ ಸೇರ್ಪಡೆ ಆಗಿದ್ದಾರೆ.

ಒಂದೇ ಸಿನಿಮಾದಲ್ಲಿ ಶಿವಣ್ಣ, ಪ್ರಭಾಸ್​, ಮೋಹನ್​ಲಾಲ್​, ವಿಷ್ಣು ಮಂಚು; ದೊಡ್ಡದಾಯ್ತು ‘ಕಣ್ಣಪ್ಪ’ ಪಾತ್ರವರ್ಗ
ಶಿವರಾಜ್​ಕುಮಾರ್​, ಪ್ರಭಾಸ್​, ಮೋಹನ್​ಲಾಲ್​, ವಿಷ್ಣು ಮಂಚು
ಮದನ್​ ಕುಮಾರ್​
|

Updated on: Oct 13, 2023 | 2:37 PM

Share

‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ (Shivarajkumar) ಅವರ ಖ್ಯಾತಿ ಕೇವಲ ಕನ್ನಡ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈಗಂತೂ ಶಿವರಾಜ್​ಕುಮಾರ್​ ಅವರಿಗೆ ಪರಭಾಷೆಯಿಂದ ಬರುವ ಆಫರ್​ಗಳು ಹೆಚ್ಚಾಗಿದೆ. ಈ ವರ್ಷ ಬಿಡುಗಡೆ ಆದ ‘ಜೈಲರ್​’ ಸಿನಿಮಾದಲ್ಲಿ ಅವರು ರಜನಿಕಾಂತ್​ ಜೊತೆ ನಟಿಸಿದ್ದರು. ಆ ಸಿನಿಮಾದಲ್ಲಿ ಶಿವಣ್ಣ ಮಾಡಿದ ಪಾತ್ರಕ್ಕೆ ಭರ್ಜರಿ ಶಿಳ್ಳೆ, ಚಪ್ಪಾಳೆ ಸಿಕ್ಕಿತು. ಈಗ ಮತ್ತೊಂದು ಪರಭಾಷೆಯ ಸಿನಿಮಾದಲ್ಲಿ ಅವರು ನಟಿಸುವುದು ಖಚಿತವಾಗಿದೆ. ಹೌದು, ತೆಲುಗಿನ ಖ್ಯಾತ ನಟ ವಿಷ್ಣು ಮಂಚು (Vishnu Manchu) ಅಭಿನಯಿಸುತ್ತಿರುವ ‘ಕಣ್ಣಪ್ಪ’ (Kannappa) ಸಿನಿಮಾದ ಪಾತ್ರವರ್ಗಕ್ಕೆ ಶಿವರಾಜ್​ಕುಮಾರ್​ ಅವರ ಎಂಟ್ರಿ ಆಗಿದೆ. ಈ ಬಗ್ಗೆ ಕೆಲವು ದಿನಗಳಿಂದ ಗುಸುಗುಸು ಕೇಳಿಬರುತ್ತಿತ್ತು. ಆಗ ಅಧಿಕೃತವಾಗಿ ಚಿತ್ರತಂಡದಿಂದಲೇ ಮಾಹಿತಿ ಹೊರಬಿದ್ದಿದೆ.

ನಟ ವಿಷ್ಣು ಮಂಚು ಮತ್ತು ಅವರ ಫ್ಯಾನ್ಸ್​ ಪಾಲಿಗೆ ‘ಕಣ್ಣಪ್ಪ’ ಸಿನಿಮಾ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್​ ಆಗಿದೆ. ಈ ಸಿನಿಮಾ ಬಗ್ಗೆ ಈಗಾಗಲೇ ಅಭಿಮಾನಿಗಳ ವಲಯದಲ್ಲಿ ಸಖತ್​ ಕುತೂಹಲ ಮನೆಮಾಡಿದೆ. ಈ ಪರಿ ಹೈಪ್​ ಹೆಚ್ಚಲು ಕಾರಣ ಆಗಿರುವುದೇ ಈ ಸಿನಿಮಾದ ಪಾತ್ರವರ್ಗ. ಟಾಲಿವುಡ್​ ಹೀರೋ ಪ್ರಭಾಸ್​, ಮಲಯಾಳಂ ಸ್ಟಾರ್​ ನಟ ಮೋಹನ್​ಲಾಲ್​ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಜೊತೆಗೆ ಈಗ ಶಿವರಾಜ್​ಕುಮಾರ್​ ಕೂಡ ಸೇರ್ಪಡೆ ಆಗಿರುವುದರಿಂದ ‘ಕಣ್ಣಪ್ಪ’ ಸಿನಿಮಾದ ಮೇಲಿನ ನಿರೀಕ್ಷೆ ಡಬಲ್​ ಆಗಿದೆ.

1988ರಲ್ಲಿ ಶಿವರಾಜ್‍ಕುಮಾರ್ ನಟನೆಯ ‘ಶಿವ ಮೆಚ್ಚಿದ ಕಣ್ಣಪ್ಪ’ ಸಿನಿಮಾ ಬಿಡುಗಡೆ ಆಗಿತ್ತು. ಆ ಸಿನಿಮಾದಲ್ಲಿ ಶಿವಣ್ಣ ಅವರು ಕಣ್ಣಪ್ಪನ ಪಾತ್ರ ಮಾಡಿದ್ದರು. ಈಗ ಅದೇ ಕಣ್ಣಪ್ಪನ ಕಥೆಯನ್ನು ಇಟ್ಟುಕೊಂಡು ತೆಲುಗಿನಲ್ಲಿ ವಿಷ್ಣು ಮಂಚು ಅವರು ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಅವರ ಪಾತ್ರ ಹೇಗಿರಲಿದೆ ಎಂಬುದು ಸದ್ಯಕ್ಕೆ ರಹಸ್ಯವಾಗಿದೆ. ಘಟಾನುಘಟಿ ಕಲಾವಿದರನ್ನು ಒಂದೇ ಸಿನಿಮಾದಲ್ಲಿ ನೋಡುವ ಅವಕಾಶ ಸಿಗಲಿರುವುದರಿಂದ ಸಿನಿಪ್ರಿಯರಿಗೆ ಈ ಪ್ರಾಜೆಕ್ಟ್​​ ಬಗ್ಗೆ ಕಾತರ ಹೆಚ್ಚಾಗಿದೆ.

ಇದನ್ನೂ ಓದಿ: ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​

‘ಕಣ್ಣಪ್ಪ’ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಅವರ ಪಾತ್ರ ಹೈಲೈಟ್​ ಆಗಲಿದೆ ಎಂದು ಹೇಳಲಾಗುತ್ತಿದೆ. ‘ಸ್ಟಾರ್ ಪ್ಲಸ್‍’ ಚಾನೆಲ್​ನಲ್ಲಿ ಪ್ರಸಾರವಾದ ‘ಮಹಾಭಾರತ’ ಸೀರಿಯಲ್​ಗೆ ನಿರ್ದೇಶನ ಮಾಡಿದ್ದ ಮುಕೇಶ್‍ ಕುಮಾರ್ ಸಿಂಗ್‍ ಅವರು ಈಗ ‘ಕಣ್ಣಪ್ಪ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಮೋಹನ್‍ ಬಾಬು ಅವರು ನಿರ್ಮಾಣ ಮಾಡುತ್ತಿದ್ದಾರೆ. ಪೌರಾಣಿಕ ಕಥಾಹಂದರ ಇರುವ ಈ ಸಿನಿಮಾದ ಶೂಟಿಂಗ್​ ಈಗಾಗಲೇ ನ್ಯೂಜಿಲ್ಯಾಂಡ್‍ನಲ್ಲಿ ಆರಂಭ ಆಗಿದೆ. ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಸಿನಿಮಾ ಅಕ್ಟೋಬರ್​ 19ರಂದು ಬಿಡುಗಡೆ ಆಗಲಿದೆ. ಇದಲ್ಲದೇ, ಧನುಷ್ ನಟನೆಯ ‘ಕ್ಯಾಪ್ಟನ್​ ಮಿಲ್ಲರ್​’ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಅವರಿಗೆ ಒಂದು ಮುಖ್ಯವಾದ ಪಾತ್ರವಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ