AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಿಟ್ಟು ಈ ಊರಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವಣ್ಣ; ಮಾರ್ಚ್​​ನಿಂದ ಸಿನಿಮಾ ಕೆಲಸ  

ಶಿವರಾಜ್ ಕುಮಾರ್ ಅವರು ಅಮೆರಿಕದಿಂದ ಭಾರತಕ್ಕೆ ಮರಳಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಮುಕ್ತರಾಗಿದ್ದಾರೆ. ಅವರು ಬೆಂಗಳೂರಿನಿಂದ ಹೊರಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಮತ್ತು ಮಾರ್ಚ್​ನಿಂದ ಚಲನಚಿತ್ರ ಕೆಲಸಗಳನ್ನು ಪ್ರಾರಂಭಿಸಲಿದ್ದಾರೆ. ಶಿವರಾಜ್​ ಕುಮಾರ್ ಅವರು '45' ಚಿತ್ರದ ಪ್ರಚಾರದಲ್ಲೂ ಭಾಗವಹಿಸಲಿದ್ದಾರೆ ಅನ್ನೋದು ವಿಶೇಷ.

ಬೆಂಗಳೂರು ಬಿಟ್ಟು ಈ ಊರಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವಣ್ಣ; ಮಾರ್ಚ್​​ನಿಂದ ಸಿನಿಮಾ ಕೆಲಸ  
ಶಿವರಾಜ್​​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Feb 04, 2025 | 8:20 AM

Share

ನಟ ಶಿವರಾಜ್​ಕುಮಾರ್ ಅವರು ಜನವರಿ 26ಕ್ಕೆ ಅಮೆರಿಕದಿಂದ ಭಾರತಕ್ಕೆ ಮರಳಿದರು. ಅವರು ಬರುತ್ತಿದ್ದಂತೆ ಅನೇಕ ಸೆಲೆಬ್ರಿಟಿಗಳು ತೆರಳಿ ಶಿವಣ್ಣನ ಆರೋಗ್ಯ ವಿಚಾರಿಸಿದರು. ಈಗ ಅವರು ಸಂಪೂರ್ಣ ಕ್ಯಾನ್ಸರ್ ಮುಕ್ತ ಆಗಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗ ಶಿವರಾಜ್​ಕುಮಾರ್ ಅವರು ಬೆಂಗಳೂರಿನಲ್ಲಿ ಇಲ್ಲ! ಹೌದು, ಅವರು ಶಿರಸಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಾರ್ಚ್​​ನಿಂದ ಅವರು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇತ್ತೀಚೆಗೆ ಶಿವರಾಜ್​ಕುಮಾರ್ ಅವರು ಯಾಣಕ್ಕೆ ತೆರಳಿದ್ದರು. ‘ನಮ್ಮೂರ ಮಂದಾರ ಹೂವೆ’ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಶಿವಣ್ಣ ಅಲ್ಲಿಗೆ ತೆರಳಿದ್ದರು. ಇದಾದ 29 ವರ್ಷಗಳ ಬಳಿಕ ಅವರು ಮತ್ತೆ ಈ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಈಗ ಶಿವರಾಜ್​ಕುಮಾರ್ ತಮ್ಮ ಸಂಬಂಧಿ, ಶಾಸಕ ಭೀಮಣ್ಣ ಒಡೆತನದಲ್ಲಿ ಇರುವ ಶಿರಸಿಯ ಹೋಟೆಲ್​ನಲ್ಲಿ ಉಳಿದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಇದ್ದರೆ ಒಬ್ಬರಾದ ಬಳಿಕ ಒಬ್ಬರು ಅವರ ಮನೆಗೆ ಭೇಟಿ ನೀಡುತ್ತಾ ಇರುತ್ತಾರೆ. ಹೀಗಾಗಿ, ವಿಶ್ರಾಂತಿ ಪಡೆಯಲು ಆಗೋದಿಲ್ಲ. ಈ ಕಾರಣಕ್ಕೆ ಅವರು ಶಿರಸಿಗೆ ಶಿಫ್ಟ್ ಆಗಿದ್ದಾರೆ. ಇಲ್ಲಿ ಅವರು ಗೀತಾ ಜೊತೆ ಉಳಿದುಕೊಂಡಿದ್ದಾರೆ. ಅವರು ಭೇಟಿ ಮಾಡಲು ಯಾರಿಗೂ ಅವಕಾಶ ಇಲ್ಲ.

ಸಿನಿಮಾ ಕೆಲಸ

ಶಿವರಾಜ್​ಕುಮಾರ್ ಅವರು ಸಿನಿಮಾ ಕೆಲಸ ಆರಂಭಿಸೋದು ಯಾವಾಗ ಎಂಬುದನ್ನು ‘ಬಿ. ಗಣಪತಿ’ ಅವರ ಯೂಟ್ಯೂಬ್​ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ‘ಮಾರ್ಚ್ ತಿಂಗಳಿಂದ ಸಿನಿಮಾ ಕೆಲಸ ಆರಂಭಿಸುತ್ತೇನೆ. ರಾಮ್ ಚರಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ತಮಿಳಿನ ನಿರ್ದೇಶಕನೋರ್ವ ಚಿತ್ರ ಮಾಡುತ್ತಿದ್ದು ಅವರ ಜೊತೆ ಮಾಡುತ್ತಿದ್ದೇನೆ. ಸದ್ಯ ಇದೆರಡು ಸಿನಿಮಾಗಳು ಇವೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 29 ವರ್ಷಗಳ ಬಳಿಕ ಯಾಣಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಇಲ್ಲಿವೆ ಫೋಟೋಸ್

‘45’ ಸಿನಿಮಾ

ಅರ್ಜುನ್ ಜನ್ಯ ನಿರ್ದೇಶನದ ‘45’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಶಿವಣ್ಣ, ಉಪೇಂದ್ರ ಹಾಗೂ ರಾಜ್​ ಬಿ. ಶೆಟ್ಟಿ ನಟಿಸಿದ್ದಾರೆ. ಈ ಚಿತ್ರವ ಈ ವರ್ಷವೇ ತೆರೆಗೆ ಬರಲಿದೆ. ಇದರ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:27 am, Tue, 4 February 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!