AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಿಟ್ಟು ಈ ಊರಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವಣ್ಣ; ಮಾರ್ಚ್​​ನಿಂದ ಸಿನಿಮಾ ಕೆಲಸ  

ಶಿವರಾಜ್ ಕುಮಾರ್ ಅವರು ಅಮೆರಿಕದಿಂದ ಭಾರತಕ್ಕೆ ಮರಳಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಮುಕ್ತರಾಗಿದ್ದಾರೆ. ಅವರು ಬೆಂಗಳೂರಿನಿಂದ ಹೊರಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಮತ್ತು ಮಾರ್ಚ್​ನಿಂದ ಚಲನಚಿತ್ರ ಕೆಲಸಗಳನ್ನು ಪ್ರಾರಂಭಿಸಲಿದ್ದಾರೆ. ಶಿವರಾಜ್​ ಕುಮಾರ್ ಅವರು '45' ಚಿತ್ರದ ಪ್ರಚಾರದಲ್ಲೂ ಭಾಗವಹಿಸಲಿದ್ದಾರೆ ಅನ್ನೋದು ವಿಶೇಷ.

ಬೆಂಗಳೂರು ಬಿಟ್ಟು ಈ ಊರಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವಣ್ಣ; ಮಾರ್ಚ್​​ನಿಂದ ಸಿನಿಮಾ ಕೆಲಸ  
ಶಿವರಾಜ್​​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Feb 04, 2025 | 8:20 AM

Share

ನಟ ಶಿವರಾಜ್​ಕುಮಾರ್ ಅವರು ಜನವರಿ 26ಕ್ಕೆ ಅಮೆರಿಕದಿಂದ ಭಾರತಕ್ಕೆ ಮರಳಿದರು. ಅವರು ಬರುತ್ತಿದ್ದಂತೆ ಅನೇಕ ಸೆಲೆಬ್ರಿಟಿಗಳು ತೆರಳಿ ಶಿವಣ್ಣನ ಆರೋಗ್ಯ ವಿಚಾರಿಸಿದರು. ಈಗ ಅವರು ಸಂಪೂರ್ಣ ಕ್ಯಾನ್ಸರ್ ಮುಕ್ತ ಆಗಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗ ಶಿವರಾಜ್​ಕುಮಾರ್ ಅವರು ಬೆಂಗಳೂರಿನಲ್ಲಿ ಇಲ್ಲ! ಹೌದು, ಅವರು ಶಿರಸಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಾರ್ಚ್​​ನಿಂದ ಅವರು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇತ್ತೀಚೆಗೆ ಶಿವರಾಜ್​ಕುಮಾರ್ ಅವರು ಯಾಣಕ್ಕೆ ತೆರಳಿದ್ದರು. ‘ನಮ್ಮೂರ ಮಂದಾರ ಹೂವೆ’ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಶಿವಣ್ಣ ಅಲ್ಲಿಗೆ ತೆರಳಿದ್ದರು. ಇದಾದ 29 ವರ್ಷಗಳ ಬಳಿಕ ಅವರು ಮತ್ತೆ ಈ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಈಗ ಶಿವರಾಜ್​ಕುಮಾರ್ ತಮ್ಮ ಸಂಬಂಧಿ, ಶಾಸಕ ಭೀಮಣ್ಣ ಒಡೆತನದಲ್ಲಿ ಇರುವ ಶಿರಸಿಯ ಹೋಟೆಲ್​ನಲ್ಲಿ ಉಳಿದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಇದ್ದರೆ ಒಬ್ಬರಾದ ಬಳಿಕ ಒಬ್ಬರು ಅವರ ಮನೆಗೆ ಭೇಟಿ ನೀಡುತ್ತಾ ಇರುತ್ತಾರೆ. ಹೀಗಾಗಿ, ವಿಶ್ರಾಂತಿ ಪಡೆಯಲು ಆಗೋದಿಲ್ಲ. ಈ ಕಾರಣಕ್ಕೆ ಅವರು ಶಿರಸಿಗೆ ಶಿಫ್ಟ್ ಆಗಿದ್ದಾರೆ. ಇಲ್ಲಿ ಅವರು ಗೀತಾ ಜೊತೆ ಉಳಿದುಕೊಂಡಿದ್ದಾರೆ. ಅವರು ಭೇಟಿ ಮಾಡಲು ಯಾರಿಗೂ ಅವಕಾಶ ಇಲ್ಲ.

ಸಿನಿಮಾ ಕೆಲಸ

ಶಿವರಾಜ್​ಕುಮಾರ್ ಅವರು ಸಿನಿಮಾ ಕೆಲಸ ಆರಂಭಿಸೋದು ಯಾವಾಗ ಎಂಬುದನ್ನು ‘ಬಿ. ಗಣಪತಿ’ ಅವರ ಯೂಟ್ಯೂಬ್​ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ‘ಮಾರ್ಚ್ ತಿಂಗಳಿಂದ ಸಿನಿಮಾ ಕೆಲಸ ಆರಂಭಿಸುತ್ತೇನೆ. ರಾಮ್ ಚರಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ತಮಿಳಿನ ನಿರ್ದೇಶಕನೋರ್ವ ಚಿತ್ರ ಮಾಡುತ್ತಿದ್ದು ಅವರ ಜೊತೆ ಮಾಡುತ್ತಿದ್ದೇನೆ. ಸದ್ಯ ಇದೆರಡು ಸಿನಿಮಾಗಳು ಇವೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 29 ವರ್ಷಗಳ ಬಳಿಕ ಯಾಣಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಇಲ್ಲಿವೆ ಫೋಟೋಸ್

‘45’ ಸಿನಿಮಾ

ಅರ್ಜುನ್ ಜನ್ಯ ನಿರ್ದೇಶನದ ‘45’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಶಿವಣ್ಣ, ಉಪೇಂದ್ರ ಹಾಗೂ ರಾಜ್​ ಬಿ. ಶೆಟ್ಟಿ ನಟಿಸಿದ್ದಾರೆ. ಈ ಚಿತ್ರವ ಈ ವರ್ಷವೇ ತೆರೆಗೆ ಬರಲಿದೆ. ಇದರ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:27 am, Tue, 4 February 25

ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್