AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್ ಅಮೆರಿಕ ಹೋಗೋದು ಎಂದು? ಸರ್ಜರಿ ಯಾವಾಗ?; ಮಾಹಿತಿ ನೀಡಿದ ಗೀತಕ್ಕ

ಶಿವರಾಜ್ ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಆಗಿದೆ. ಇದಕ್ಕಾಗಿ ಅವರು ಅಮೆರಿಕಕ್ಕೆ ಹೋಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ‘ಭೈರತಿ ರಣಗಲ್’ಸಿನಿಮಾ ಪ್ರಚಾರದ ವೇಳೆ ಅವರು ತಮ್ಮ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಶಸ್ತ್ರಚಿಕಿತ್ಸೆಯ ನಂತರ ಕೆಲವು ತಿಂಗಳು ವಿಶ್ರಾಂತಿ ಪಡೆಯುವ ಯೋಜನೆಯಿದೆ. ಆ ಬಗ್ಗೆ ಈ ಸ್ಟೋರಿಯಲ್ಲಿ ಇದೆ ವಿವರ.

ಶಿವರಾಜ್​ಕುಮಾರ್ ಅಮೆರಿಕ ಹೋಗೋದು ಎಂದು? ಸರ್ಜರಿ ಯಾವಾಗ?; ಮಾಹಿತಿ ನೀಡಿದ ಗೀತಕ್ಕ
ಶಿವಣ್ಣ-ಗೀತಕ್ಕ
ರಾಜೇಶ್ ದುಗ್ಗುಮನೆ
| Edited By: |

Updated on:Dec 10, 2024 | 1:06 PM

Share

ಶಿವರಾಜ್​ಕುಮಾರ್ ಅವರಿಗೆ ಆರೋಗ್ಯ ಕೈಕೊಟ್ಟ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಇತ್ತೀಚೆಗೆ ಅವರೇ ಈ ವಿಚಾರವನ್ನು ಖಚಿಪಡಿಸಿದ್ದರು. ತಮಗೆ ಅನಾರೋಗ್ಯ ಆಗಿದೆ ಎಂಬುದನ್ನು ಹೇಳಿದ್ದರು ಶಿವಣ್ಣ. ಆದರೆ, ಏನಾಗಿದೆ ಎಂಬ ವಿಚಾರವನ್ನು ರಿವೀಲ್ ಮಾಡಿರಲಿಲ್ಲ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕ ಹೋಗುವ ದಿನ ಹತ್ತಿರ ಬಂದೇ ಬಿಟ್ಟಿದೆ. ಅಲ್ಲಿ ಅವರು ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ. ಇದಕ್ಕೆ ದಿನಾಂಕ ಕೂಡ ನಿಗದಿ ಆಗಿದೆ.

ಅನಾರೋಗ್ಯ ಉಂಟಾಗಿದೆ ಎಂಬ ವಿಚಾರವನ್ನು ಶಿವರಾಜ್​ಕುಮಾರ್ ಅವರೇ ಒಪ್ಪಿಕೊಂಡಿದ್ದರು. ‘ಭೈರತಿ ರಣಗಲ್’ ಸಿನಿಮಾದ ಪ್ರಚಾರದ ವೇಳೆ ಈ ವಿಚಾರವನ್ನು ಅವರು ಖಚಿತಪಡಿಸಿದ್ದರು. ‘ಎಲ್ಲರಂತೆ ನಾನೂ ಮನುಷ್ಯ. ನನಗೂ ತೊಂದರೆ ಆಗಿದೆ. ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಆರಂಭದಲ್ಲಿ ಭಯ ಆಯ್ತು. ಈಗ ಧೈರ್ಯ ತೆಗೆದುಕೊಂಡಿದ್ದೇನೆ. ಚಿಕಿತ್ಸೆಗೆ ಅಮೆರಿಕಕ್ಕೆ ಹೋಗಬೇಕು’ ಎಂದು ಶಿವಣ್ಣ ಹೇಳಿದ್ದರು.

ಈಗ ಶಿವರಾಜ್​ಕುಮಾರ್ ಅವರು ಅಮೆರಿಕಕ್ಕೆ ತೆರಳುವ ದಿನಾಂಕ ಹತ್ತಿರ ಆಗಿದೆ. ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿಯಲ್ಲಿ ಶಿವರಾಜ್​ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಡಿಸೆಂಬರ್ 18ಕ್ಕೆ ಅವರು ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಡಿಸೆಂಬರ್ 24ರಂದು ಸರ್ಜರಿ ನಡೆಯಲಿದೆ.

ಶಿವರಾಜ್​ಕುಮಾರ್ ಅವರೇ ಹೇಳಿರುವ ಪ್ರಕಾರ ಶಸ್ತ್ರಚಿಕಿತ್ಸೆ ಬಳಿಕ ಕೆಲ ತಿಂಗಳು ವಿಶ್ರಾಂತಿ ಪಡೆಯಲಿದ್ದಾರಂತೆ. ಅವರು ತಮ್ಮ ವೃತ್ತಿ ಜೀವನ ಆರಂಭಿಸಿದಾಗಿನಿಂದಲೂ ನಿರಂತರವಾಗಿ ಶೂಟಿಂಗ್​ನಲ್ಲಿ ತೊಡಗಿಕೊಳ್ಳುತ್ತಾ ಬಂದಿದ್ದಾರೆ. ಅಪ್ಪು ನಿಧನ ಹೊಂದಿದಾಗಲೂ ಸಣ್ಣ ಗ್ಯಾಪ್ ಪಡೆದು ಅವರು ನಟನೆಗೆ ಮರಳಿದರು. ಆದರೆ, ಈ ಬಾರಿ ಆರೋಗ್ಯದ ವಿಚಾರ ಆಗಿರುವುದರಿಂದ ಅವರು ಕೊಂಚ ದೀರ್ಘ ಬ್ರೇಕ್ ಪಡೆಯಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ತಿರುಪತಿ ಸನ್ನಿಧಾನಕ್ಕೆ ತೆರಳಿ ಮುಡಿ ಕೊಟ್ಟ ಶಿವರಾಜ್​ಕುಮಾರ್-ಗೀತಾ

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಯಶಸ್ಸು ಕಂಡಿತು. ಈ ಸಿನಿಮಾ ‘ಮಫ್ತಿ’ ಚಿತ್ರದ ಪ್ರೀಕ್ವೆಲ್. ಇದಲ್ಲದೆ, ಅವರ ನಟನೆಯ ‘45’ ಚಿತ್ರದ ಕೆಲಸಗಳು ಪೂರ್ಣಗೊಂಡಿವೆ. ಈ ಸಿನಿಮಾ ಕೂಡ ಶೀಘ್ರವೇ ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಜೊತೆ ಉಪೇಂದ್ರ, ರಾಜ್ ಬಿ ಶೆಟ್ಟಿ ಕೂಡ ನಟಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ನಿರ್ದೇಶನ ಇದೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:58 pm, Tue, 10 December 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ