AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ 2’ ಅಲ್ಲ, ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಲಿದ್ದಾರೆ ಆರ್​. ಚಂದ್ರು

ಶಿವರಾಜ್‌ಕುಮಾರ್ ಅವರು ಬಿಡುವಿಲ್ಲದ ನಟರಾಗಿದ್ದು, ಕನ್ನಡ ಹಾಗೂ ಪರಭಾಷೆಗಳಲ್ಲಿ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಆರ್. ಚಂದ್ರು ನಿರ್ದೇಶನದ ಹೊಸ ಚಿತ್ರಕ್ಕೆ ಸಹಿ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದ್ದಾರೆ. ಕಬ್ಜ ಬಳಿಕ ಚಂದ್ರು ನಿರ್ದೇಶನಕ್ಕೆ ಇಳಿದಿರಲಿಲ್ಲ. ಶಿವಣ್ಣನ ಇತರ ಮುಂಬರುವ ಚಿತ್ರಗಳಾದ ಪೆದ್ದಿ, ಜೈಲರ್ 2, ಗುಮ್ಮಡಿ ನರಸಯ್ಯ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

‘ಕಬ್ಜ 2’ ಅಲ್ಲ, ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಲಿದ್ದಾರೆ ಆರ್​. ಚಂದ್ರು
ಶಿವಣ್ಣ-ಚಂದ್ರು
ರಾಜೇಶ್ ದುಗ್ಗುಮನೆ
|

Updated on: May 28, 2026 | 2:57 PM

Share

ಶಿವರಾಜ್​ಕುಮಾರ್ ಅವರು (Shivarajkumar) ಕನ್ನಡದ ಬ್ಯುಸಿ ಹೀರೋಗಳಲ್ಲಿ ಒಬ್ಬರು. ಅವರು ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಬ್ಯುಸಿ ಆಗಿದ್ದಾರೆ. ಈಗ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಇದಕ್ಕೆ ಈಗ ಹೊಸ ಸೇರ್ಪಡೆಯೊಂದು ಆಗುತ್ತಿದೆ. ಆರ್​. ಚಂದ್ರು ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ವಿಷಯ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಶಿವರಾಜ್​​ಕುಮಾರ್ ಹಾಗೂ ಆರ್​​. ಚಂದ್ರು ಬಾಂಧವ್ಯ ಹಳೆಯದು. 2010ರಲ್ಲಿ ರಿಲೀಸ್ ಆದ ಶಿವರಾಜ್​​ಕುಮಾರ್ ನಟನೆಯ ‘ಮೈಲಾರಿ’ ಚಿತ್ರವನ್ನು ಚಂದ್ರು ಅವರೇ ನಿರ್ದೇಶನ ಮಾಡಿದ್ದರು. 2023ರಲ್ಲಿ ‘ಕಬ್ಜ’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಬಣ್ಣ ಹಚ್ಚಿದ್ದರು. ಈಗ ಹೊಸ ಕಥೆಯೊಂದಿಗೆ ಶಿವಣ್ಣ ಅವರನ್ನು ಚಂದ್ರು ಅಪ್ರೋಚ್ ಮಾಡಿದ್ದಾರೆ ಎಂದು ‘ಸಿನಿಮಾ ಎಕ್ಸ್​​​ಪ್ರೆಸ್’ ವರದಿ ಮಾಡಿದೆ.

ರಾಮ್ ಚರಣ್ ನಟನೆಯ ತೆಲುಗಿನ‘ಪೆದ್ದಿ’ ಸಿನಿಮಾ ಜೂನ್ 4ರಂದು ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಶಿವಣ್ಣ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಜೈಲರ್ 2’ ಚಿತ್ರದಲ್ಲೂ ಶಿವಣ್ಣ ನಟಿಸುತ್ತಿದ್ದಾರೆ. ‘ಗುಮ್ಮಡಿ ನರಸಯ್ಯ’, ‘ಡ್ಯಾಡ್’, ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾಗಳು ಶಿವರಾಜ್​​ಕುಮಾರ್ ಬಳಿ ಇವೆ. ಇದರ ಜೊತೆಗೆ ಈಗ ಹೊಸದೊಂದು ಸೇರ್ಪಡೆ ಆಗಿದೆ. ಆರ್ ಚಂದ್ರು ನಿರ್ದೇಶನದ ಹೊಸ ಸಿನಿಮಾಗೆ ಇನ್ನಷ್ಟೇ ಟೈಟಲ್ ಫೈನಲ್ ಆಗಬೇಕಿದೆ.

‘ಕಬ್ಜ’ ಬಳಿಕ ಚಂದ್ರು ಅವರು ನಿರ್ದೇಶನಕ್ಕೆ ಇಳಿದಿಲ್ಲ. ಕಳೆದ ಕೆಲ ವರ್ಷಗಳಿಂದ ಅವರು ಕೆಲವು ಕಥೆಗಳ ಮೇಲೆ ಕೆಲಸ ಮಾಡುತ್ತಿದ್ದಾರೆ. ಶಿವಣ್ಣ ಕೈಯಲ್ಲೂ ಅನೇಕ ಚಿತ್ರಗಳಿದ್ದು, ಎಲ್ಲವನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಇಲ್ಲಿದೆ ಮೇಕಿಂಗ್ ವಿಡಿಯೋ

ಶಿವಣ್ಣ ಅವರು ಕನ್ನಡದ ಜೊತೆಗೆ ಪರಭಾಷೆಯಲ್ಲೂ ಶೂಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ, ಬೇರೆ ರಾಜ್ಯಗಳಿಗೆ ತೆರಳಿ ಅವರು ಶೂಟ್ ಮಾಡಬೇಕಾದ ಪರಿಸ್ಥಿತಿ ಎದುರಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More