AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಸೂರಿ..’ ಹಾಡಿನ ರಿಮೇಕ್ ಕೇಳಿ ಸಿಟ್ಟಾದ ಶೋಯೆಬ್ ಅಖ್ತರ್; ಏನು ಹೇಳಿದ್ರು ನೋಡಿ..

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅವರ ಮಾತುಗಳಲ್ಲಿ ಅಸಮಾಧಾನ ಎದ್ದು ಕಾಣುತ್ತಿದೆ.  

‘ಪಸೂರಿ..’ ಹಾಡಿನ ರಿಮೇಕ್ ಕೇಳಿ ಸಿಟ್ಟಾದ ಶೋಯೆಬ್ ಅಖ್ತರ್; ಏನು ಹೇಳಿದ್ರು ನೋಡಿ..
ಶೋಯೆಬ್-ಕಾರ್ತಿಕ್-ಕಿಯಾರಾ
ರಾಜೇಶ್ ದುಗ್ಗುಮನೆ
|

Updated on:Jun 28, 2023 | 1:15 PM

Share

ಕಾರ್ತಿಕ್ ಆರ್ಯನ್ ಹಾಗೂ ಕಿಯಾರಾ ಅಡ್ವಾಣಿ (Kiara Advani) ಅವರು ‘ಸತ್ಯ ಪ್ರೇಮ್​ ಕಿ ಕಹಾನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಜನಪ್ರಿಯ ‘ಪಸೂರಿ..’ ಹಾಡನ್ನು ರಿಮೇಕ್ ಮಾಡಲಾಗಿದೆ. ಇದಕ್ಕೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇವಲ ಭಾರತೀಯರು ಮಾತ್ರವಲ್ಲ ಪಾಕಿಸ್ತಾನದ ಮಂದಿಯೂ ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ (Shoaib Akhtar) ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅವರ ಮಾತುಗಳಲ್ಲಿ ಅಸಮಾಧಾನ ಎದ್ದು ಕಾಣುತ್ತಿದೆ.

ಇತ್ತೀಚೆಗೆ ಹಾಡುಗಳನ್ನು ರಿಮೇಕ್ ಮಾಡುವ ಟ್ರೆಂಡ್ ಜೋರಾಗಿದೆ. ಆದರೆ, ಎಲ್ಲಾ ಸಂದರ್ಭದಲ್ಲೂ ಪರಿಸ್ಥಿತಿ ಹೀಗೆಯೇ ಇರುವುದಿಲ್ಲ. ಜನಪ್ರಿಯ ಹಾಡುಗಳನ್ನು ರಿಮೇಕ್ ಮಾಡಲಾಗುತ್ತದೆ ಎಂದರೆ ಅಲ್ಲಿ ಸಾಕಷ್ಟು ಎಚ್ಚರಿಕೆ ಬೇಕು. ಸ್ವಲ್ಪ ಹೆಚ್ಚುಕಡಿಮೆ ಆದರೂ ಟೀಕೆ ಪಕ್ಕಾ. ಈಗ ‘ಸತ್ಯ ಪ್ರೇಮ್ ಕಿ ಕಹಾನಿ’ ಸಿನಿಮಾದ ಕಥೆಯೂ ಹಾಗೆಯೇ ಆಗಿದೆ.

‘ಹಾಡಿನ ರಿಮೇಕ್ ಬಗ್ಗೆ ಟ್ವೀಟ್ ಮಾಡಿರುವ ಶೋಯೆಬ್ ಅಖ್ತರ್​, ‘ಏನಿದು ಅನಾಹುತ’ ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್ ಸಾವಿರಾರು ಲೈಕ್ಸ್ ಪಡೆದುಕೊಂಡಿದೆ. ‘ಅವರು ಇದನ್ನು ಹಾಳು ಮಾಡಿದರು’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಟಿ ಸೀರಿಸ್​ನವರು ಎಂದಿನಂತೆ ಪಸೂರಿ ಹಾಡನ್ನು ಹಾಳು ಮಾಡಿದರು’ ಎಂದು ಕೆಲವರು ಹೇಳಿದ್ದಾರೆ. ‘ಟಿ ಸೀರಿಸ್​ಗೆ ಹೊಸ ದಿನ ಹೊಸ ಅವಮಾನ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಅಲಿ ಸೇಥಿ ಅವರ ‘ಪಸೂರಿ’ ಹಾಡು ಕಳೆದ ವರ್ಷ ರಿಲೀಸ್ ಆಗಿ ಹಿಟ್ ಎನಿಸಿಕೊಂಡಿತು. ಇದನ್ನು ರಿಮೇಕ್ ಮಾಡುವ ಮೂಲಕ ‘ಸತ್ಯ ಪ್ರೇಮ್ ಕಿ ಕಥಾ’ ತಂಡ ಜನಪ್ರಿಯತೆ ಪಡೆಯಲು ಹೋಯಿತು. ಆದರೆ, ಈ ಪ್ರಯತ್ನ ಕೈ ಕೊಟ್ಟಿದೆ.

‘ಸತ್ಯ ಪ್ರೇಮ್ ಕಿ ಕಥಾ’ ಸಿನಿಮಾಗೆ ದೊಡ್ಡ ಮಟ್ಟದ ಪ್ರಚಾರ ನೀಡಲಾಗುತ್ತಿದೆ. ಇತ್ತೀಚೆಗೆ ಈ ತಂಡ ಮುಂಬೈನಲ್ಲಿ ಸಾಂಗ್ ರಿಲೀಸ್ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಈ ವೇಳೆ ಕಿಯಾರಾಗೆ ಚಪ್ಪಲಿ ಹಾಕಿಕೊಳ್ಳಲು ಕಾರ್ತಿಕ್ ಆರ್ಯನ್ ಸಹಾಯ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:14 pm, Wed, 28 June 23

ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ