AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಭಮೇಳಕ್ಕೆ ಹೋಗಿದ್ದೇ ತಪ್ಪಾಯ್ತು; ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಸಾವಿನ ನಿಜವಾದ ಕಾರಣ ಬಯಲು

ಕುಂಭಮೇಳಕ್ಕೆ ಹೋಗಿದ್ದ ಅನೇಕರಿಗೆ ಕೊರೊನಾ ವೈರಸ್​ ತಗುಲಿತ್ತು. ಶ್ರವಣ್​ ರಾಥೋಡ್​ ಹಾಗೂ ಅವರ ಪತ್ನಿ ಕೂಡ ಕುಂಭಮೇಳಕ್ಕೆ ತೆರಳಿದ್ದರಂತೆ. ಕುಂಭಮೇಳ ಮುಗಿಸಿ ಬಂದ ಬೆನ್ನಲ್ಲೇ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.

ಕುಂಭಮೇಳಕ್ಕೆ ಹೋಗಿದ್ದೇ ತಪ್ಪಾಯ್ತು; ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಸಾವಿನ ನಿಜವಾದ ಕಾರಣ ಬಯಲು
ಶ್ರವಣ್​ ರಾಥೋಡ್​
ರಾಜೇಶ್ ದುಗ್ಗುಮನೆ
|

Updated on: Apr 23, 2021 | 5:22 PM

Share

ಕೊರೊನಾ ವೈರಸ್​ ಪಾಸಿಟಿವ್​ ಬಂದಿದ್ದ ಬಾಲಿವುಡ್​ನ ಜನಪ್ರಿಯ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ಗುರುವಾರ (ಏ.22) ಮೃತಪಟ್ಟಿದ್ದಾರೆ. ಕೊರೊನಾ ವೈರಸ್​ ಅಂಟಿದ ನಂತರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಅವರನ್ನು ಆಸ್ಪತ್ರೆಗೂ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸಿಲ್ಲ. ಕೊರೊನಾ ಬರುವುದಕ್ಕೂ ಮೊದಲು ಅವರು ಕುಂಭಮೇಳಕ್ಕೆ ತೆರಳಿದ್ದರು ಎನ್ನುವ ವಿಚಾರ ಈಗ ಗೊತ್ತಾಗಿದೆ.

ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ಕುಂಭಮೇಳ ಆರಂಭವಾಗಿತ್ತು. ಲಕ್ಷಾಂತರ ಜನರು ಇದರಲ್ಲಿ ಪಾಲ್ಗೊಂಡು ಪುಣ್ಯಸ್ನಾನ ಮಾಡಿದ್ದರು. ಕೊರೊನಾ ಹರಡುತ್ತಿರುವ ಮಧ್ಯೆಯೂ ಲಕ್ಷಾಂತರ ಜನ ಸೇರಿದ್ದು ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ಕುಂಭಮೇಳವನ್ನು ಸಾಂಕೇತಿಕವಾಗಿ ಮಾಡುವಂತೆ ಕೋರಿದ್ದರು. ಈ ಮನವಿಗೆ ಬೆಲೆಕೊಟ್ಟು ಕುಂಭಮೇಳವನ್ನು ಸಾಂಕೇತಿಕವಾಗಿ ನೆರವೇರಿಸಲು ನಿರ್ಧರಿಸಲಾಯಿತು.

ಕುಂಭಮೇಳಕ್ಕೆ ಹೋಗಿದ್ದ ಅನೇಕರಿಗೆ ಕೊರೊನಾ ವೈರಸ್​ ತಗುಲಿತ್ತು. ಶ್ರವಣ್​ ರಾಥೋಡ್​ ಹಾಗೂ ಅವರ ಪತ್ನಿ ಕೂಡ ಕುಂಭಮೇಳಕ್ಕೆ ತೆರಳಿದ್ದರಂತೆ. ಕುಂಭಮೇಳ ಮುಗಿಸಿ ಬಂದ ಬೆನ್ನಲ್ಲೇ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಕೊರೊನಾ ಲಕ್ಷಣ ಇದ್ದಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಈ ವೇಳೆ ಅವರಿಗೆ ಕೊರೊನಾ ಇರುವ ವಿಚಾರ ಅಧಿಕೃತವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.

ಸಂಗೀತ ನಿರ್ದೇಶಕ ನದೀಮ್​ ಸೈಫಿ ಜೊತೆ ಸೇರಿ ಶ್ರವಣ್ ಅವರು ಅನೇಕ ಸೂಪರ್​ ಹಿಟ್​ ಗೀತೆಗಳನ್ನು ನೀಡಿದ್ದರು. ಈ ಜೋಡಿ ನದೀಮ್​-ಶ್ರವಣ್​ ಎಂದೇ ಫೇಮಸ್​ ಆಗಿತ್ತು. 1975ರಿಂದಲೇ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರಿಗೆ 1990ರ ದಶಕದಲ್ಲಿ ಹೆಚ್ಚು ಯಶಸ್ಸು ಸಿಕ್ಕಿತು. ಆಶಿಕಿ, ಸಾಜನ್​, ಹಮ್​ ಹೈ ರಾಹಿ ಪ್ಯಾರ್​ ಕಿ, ಪರ್ದೇಸ್​, ರಾಜಾ ಹಿಂದೂಸ್ತಾನಿ ಸಿನಿಮಾಗಳ ಮೂಲಕ ನದೀಮ್​ ಶ್ರವಣ್​ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು.

ಇದನ್ನೂ ಓದಿ: Shravan Rathod: ಖ್ಯಾತ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ಕೊರೊನಾ ವೈರಸ್​ನಿಂದ ನಿಧನ; ಚಿತ್ರರಂಗಕ್ಕೆ ಆಘಾತ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?