ಕುಂಭಮೇಳಕ್ಕೆ ಹೋಗಿದ್ದೇ ತಪ್ಪಾಯ್ತು; ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಸಾವಿನ ನಿಜವಾದ ಕಾರಣ ಬಯಲು

ಕುಂಭಮೇಳಕ್ಕೆ ಹೋಗಿದ್ದ ಅನೇಕರಿಗೆ ಕೊರೊನಾ ವೈರಸ್​ ತಗುಲಿತ್ತು. ಶ್ರವಣ್​ ರಾಥೋಡ್​ ಹಾಗೂ ಅವರ ಪತ್ನಿ ಕೂಡ ಕುಂಭಮೇಳಕ್ಕೆ ತೆರಳಿದ್ದರಂತೆ. ಕುಂಭಮೇಳ ಮುಗಿಸಿ ಬಂದ ಬೆನ್ನಲ್ಲೇ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.

ಕುಂಭಮೇಳಕ್ಕೆ ಹೋಗಿದ್ದೇ ತಪ್ಪಾಯ್ತು; ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಸಾವಿನ ನಿಜವಾದ ಕಾರಣ ಬಯಲು
ಶ್ರವಣ್​ ರಾಥೋಡ್​

Updated on: Apr 23, 2021 | 5:22 PM

ಕೊರೊನಾ ವೈರಸ್​ ಪಾಸಿಟಿವ್​ ಬಂದಿದ್ದ ಬಾಲಿವುಡ್​ನ ಜನಪ್ರಿಯ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ಗುರುವಾರ (ಏ.22) ಮೃತಪಟ್ಟಿದ್ದಾರೆ. ಕೊರೊನಾ ವೈರಸ್​ ಅಂಟಿದ ನಂತರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಅವರನ್ನು ಆಸ್ಪತ್ರೆಗೂ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸಿಲ್ಲ. ಕೊರೊನಾ ಬರುವುದಕ್ಕೂ ಮೊದಲು ಅವರು ಕುಂಭಮೇಳಕ್ಕೆ ತೆರಳಿದ್ದರು ಎನ್ನುವ ವಿಚಾರ ಈಗ ಗೊತ್ತಾಗಿದೆ.

ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ಕುಂಭಮೇಳ ಆರಂಭವಾಗಿತ್ತು. ಲಕ್ಷಾಂತರ ಜನರು ಇದರಲ್ಲಿ ಪಾಲ್ಗೊಂಡು ಪುಣ್ಯಸ್ನಾನ ಮಾಡಿದ್ದರು. ಕೊರೊನಾ ಹರಡುತ್ತಿರುವ ಮಧ್ಯೆಯೂ ಲಕ್ಷಾಂತರ ಜನ ಸೇರಿದ್ದು ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ಕುಂಭಮೇಳವನ್ನು ಸಾಂಕೇತಿಕವಾಗಿ ಮಾಡುವಂತೆ ಕೋರಿದ್ದರು. ಈ ಮನವಿಗೆ ಬೆಲೆಕೊಟ್ಟು ಕುಂಭಮೇಳವನ್ನು ಸಾಂಕೇತಿಕವಾಗಿ ನೆರವೇರಿಸಲು ನಿರ್ಧರಿಸಲಾಯಿತು.

ಕುಂಭಮೇಳಕ್ಕೆ ಹೋಗಿದ್ದ ಅನೇಕರಿಗೆ ಕೊರೊನಾ ವೈರಸ್​ ತಗುಲಿತ್ತು. ಶ್ರವಣ್​ ರಾಥೋಡ್​ ಹಾಗೂ ಅವರ ಪತ್ನಿ ಕೂಡ ಕುಂಭಮೇಳಕ್ಕೆ ತೆರಳಿದ್ದರಂತೆ. ಕುಂಭಮೇಳ ಮುಗಿಸಿ ಬಂದ ಬೆನ್ನಲ್ಲೇ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಕೊರೊನಾ ಲಕ್ಷಣ ಇದ್ದಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಈ ವೇಳೆ ಅವರಿಗೆ ಕೊರೊನಾ ಇರುವ ವಿಚಾರ ಅಧಿಕೃತವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.

ಸಂಗೀತ ನಿರ್ದೇಶಕ ನದೀಮ್​ ಸೈಫಿ ಜೊತೆ ಸೇರಿ ಶ್ರವಣ್ ಅವರು ಅನೇಕ ಸೂಪರ್​ ಹಿಟ್​ ಗೀತೆಗಳನ್ನು ನೀಡಿದ್ದರು. ಈ ಜೋಡಿ ನದೀಮ್​-ಶ್ರವಣ್​ ಎಂದೇ ಫೇಮಸ್​ ಆಗಿತ್ತು. 1975ರಿಂದಲೇ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರಿಗೆ 1990ರ ದಶಕದಲ್ಲಿ ಹೆಚ್ಚು ಯಶಸ್ಸು ಸಿಕ್ಕಿತು. ಆಶಿಕಿ, ಸಾಜನ್​, ಹಮ್​ ಹೈ ರಾಹಿ ಪ್ಯಾರ್​ ಕಿ, ಪರ್ದೇಸ್​, ರಾಜಾ ಹಿಂದೂಸ್ತಾನಿ ಸಿನಿಮಾಗಳ ಮೂಲಕ ನದೀಮ್​ ಶ್ರವಣ್​ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು.

ಇದನ್ನೂ ಓದಿ: Shravan Rathod: ಖ್ಯಾತ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ಕೊರೊನಾ ವೈರಸ್​ನಿಂದ ನಿಧನ; ಚಿತ್ರರಂಗಕ್ಕೆ ಆಘಾತ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us