AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಜನಿಸಿದ ವಿಚಾರವನ್ನೇ ಎರಡು ವರ್ಷ ಮುಚ್ಚಿಟ್ಟಿದ್ದ ಖ್ಯಾತ ನಟಿ; ಇದರ ಹಿಂದಿತ್ತು ಈ ದುರುದ್ದೇಶ?

2001ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಶ್ರಿಯಾ ಶರಣ್​ ಈ ರೀತಿಯ ಘೋಷಣೆ ಒಂದನ್ನು ಮಾಡಿದ್ದಾರೆ. ಶ್ರಿಯಾಗೆ 2020ರ ಲಾಕ್​ಡೌನ್​ ಸಂದರ್ಭದಲ್ಲಿಯೇ ಮಗು ಜನಿಸಿತ್ತು. ಆದರೆ, ಈ ವಿಚಾರವನ್ನು ಅವರು ಎಲ್ಲಿಯೂ ಹೇಳಿಕೊಂಡಿರಲಿಲ್ಲ.

ಮಗು ಜನಿಸಿದ ವಿಚಾರವನ್ನೇ ಎರಡು ವರ್ಷ ಮುಚ್ಚಿಟ್ಟಿದ್ದ ಖ್ಯಾತ ನಟಿ; ಇದರ ಹಿಂದಿತ್ತು ಈ ದುರುದ್ದೇಶ?
ಶ್ರಿಯಾ
Follow us
ರಾಜೇಶ್ ದುಗ್ಗುಮನೆ
|

Updated on: Oct 11, 2021 | 8:32 PM

ಚಿತ್ರರಂಗಕ್ಕೆ ಕಾಲಿಟ್ಟ ಸಾಕಷ್ಟು ಹೀರೋಯಿನ್​ಗಳು ತಮ್ಮ ಗ್ಲಾಮರ್​ ಕಡಿಮೆ ಆಗದಂತೆ ನೋಡಿಕೊಳ್ಳಲು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಾರೆ. ಇದಕ್ಕೆ ಧಕ್ಕೆ ಆಗದಂತೆ ನೋಡಿಕೊಳ್ಳಲು ಏನು ಮಾಡೋಕೂ ರೆಡಿ ಇರುತ್ತಾರೆ ಕೆಲವರು. ಮದುವೆ ಹಾಗೂ ಮಕ್ಕಳನ್ನು ಪಡೆಯಲು ವಿಳಂಬ ಮಾಡೋಕೂ ಗ್ಲಾಮರ್​ ಕಡಿಮೆ ಆಗಬಹುದು ಎನ್ನುವುದು ಪ್ರಮುಖ ಕಾರಣ. ಚಿತ್ರರಂಗದಲ್ಲಿ ಆಫರ್​ ಕಡಿಮೆ ಆಗಬಾರದು ಎನ್ನುವ ಕಾರಣಕ್ಕೆ ಕೆಲವರು ಮದುವೆ ಆಗಿದ್ದನ್ನೇ ಮುಚ್ಚಿಟ್ಟ ಉದಾಹರಣೆ ಇದೆ. ದಕ್ಷಿಣ ಭಾರತದ ಖ್ಯಾತ ನಟಿ ಮಗುವಾದ ವಿಚಾರವನ್ನು ಮುಚ್ಚಿಟ್ಟಿದ್ದರು. ಈ ಬಗ್ಗೆ ಈಗ ಘೋಷಣೆ ಮಾಡಿದ್ದಾರೆ.

2001ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಶ್ರಿಯಾ ಶರಣ್​ ಈ ರೀತಿಯ ಘೋಷಣೆ ಒಂದನ್ನು ಮಾಡಿದ್ದಾರೆ. ಶ್ರಿಯಾಗೆ 2020ರ ಲಾಕ್​ಡೌನ್​ ಸಂದರ್ಭದಲ್ಲಿಯೇ ಮಗು ಜನಿಸಿತ್ತು. ಆದರೆ, ಈ ವಿಚಾರವನ್ನು ಅವರು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಮಗು ಜನಿಸಿ ಸುಮಾರು ಎರಡು ವರ್ಷ ಆಗುತ್ತಾ ಬಂದಿದೆ. ಈಗ ಶ್ರಿಯಾ ಈ ವಿಚಾರ ಬಿಚ್ಚಿಟ್ಟಿದ್ದಾರೆ.

‘2020ರ ಕ್ವಾರಂಟೈನ್​ ತುಂಬಾನೇ ಅದ್ಭುತವಾಗಿತ್ತು. ಇಡೀ ಪ್ರಪಂಚವು ಕಷ್ಟದಲ್ಲಿ ಸಾಗುತ್ತಿರುವಾಗ, ನಮ್ಮ ಪ್ರಪಂಚವು ಬದಲಾಯಿತು. ನಮಗೆ ಆ ಸಂದರ್ಭದಲ್ಲಿ ಹೆಣ್ಣುಮಗುವಾಗಿದೆ’ ಎಂದಿದ್ದಾರೆ ಅವರು. ಈ ವಿಚಾರ ಕೇಳಿ ಅಭಿಮಾನಿಗಳು ನಿಜಕ್ಕೂ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದರ ಹಿಂದೆ ದುರುದ್ದೇಶವಿದೆ ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ. ಇದಕ್ಕೂ ಕಾರಣವಿದೆ. ಯಾವುದೇ ನಟಿಗೆ ಮಗು ಜನಿಸಿದೆ ಎಂದರೆ ಅವರನ್ನು ನೋಡುವ ರೀತಿಯೇ ಬದಲಾಗುತ್ತದೆ. ಬೇಡಿಕೆ ಕುಗ್ಗುವ ಸಾಧ್ಯತೆ ಇರುತ್ತದೆ. ಈ ಕಾರಣಕ್ಕೆ ಅವರು ಮಗುವಾಗಿರುವ ವಿಚಾರವನ್ನು ಮುಚ್ಚಿಟ್ಟಿದ್ದರು ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ‘ಇದು ಅವರ ವೈಯಕ್ತಿಕ ವಿಚಾರ. ಅವರಿಗೆ ಇಷ್ಟಬಂದಾಗ ಘೋಷಣೆ ಮಾಡುತ್ತಾರೆ ಎಂದು ಹೇಳುವ ಮೂಲಕ ನಟಿ ಪರ ಬ್ಯಾಟ್​ ಬೀಸಿದ್ದಾರೆ.

ಶ್ರಿಯಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಇದಲ್ಲದೆ, ಶ್ರಿಯಾ ತೆಲುಗು, ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಶ್ರಿಯಾ ‘ಅರಸು’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಂತರ ರೂಪಾ ಅಯ್ಯರ್​ ನಿರ್ದೇಶನದ ‘ಚಂದ್ರ’ ಸಿನಿಮಾದಲ್ಲಿ ನಟಿಸಿದ್ದರು. 2018ರ ಮಾರ್ಚ್ ರಂದು ಶ್ರಿಯಾ ರಷ್ಯಾದ ಗೆಳೆಯ ಆಂಡ್ರೇ ಕೊಶ್ಚೀವ್ ಅವರನ್ನು ಲೋಖಂಡ್ ವಾಲಾ ನಿವಾಸದಲ್ಲಿ ಮದುವೆ ಆಗಿದ್ದರು.

ಇದನ್ನೂ ಓದಿ:‘ತಾಯಿ ಆಗಲು ಬಯಸಿದ್ರು ಸಮಂತಾ, ಆದರೆ..’; ನಾಗ ಚೈತನ್ಯ ಜತೆಗಿನ ಡಿವೋರ್ಸ್​ ಬಳಿಕ ನಿರ್ಮಾಪಕಿ ಅಚ್ಚರಿ ಹೇಳಿಕೆ

ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು