AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮೋಷನ್​​ಗೆ ಚಕ್ಕರ್​, ಬಾಯ್​ಫ್ರೆಂಡ್ ಜತೆ ಸುತ್ತಾಟಕ್ಕೆ ಹಾಜರ್​; ಶ್ರುತಿ ಹಾಸನ್​ ನಡೆಗೆ ಅಸಮಾಧಾನ

ಶ್ರುತಿ ಹಾಸನ್ ಅವರು ‘ವಾಲ್ತೇರು​​ ವೀರಯ್ಯ’ ಚಿತ್ರದ ಪ್ರೀ-ರಿಲೀಸ್ ಇವೆಂಟ್​ನಲ್ಲಿ ಭಾಗಿ ಆಗಿರಲಿಲ್ಲ. ಶ್ರುತಿಗೆ ಮಾನಸಿಕ ಆರೋಗ್ಯ ಕೆಟ್ಟಿದೆ, ಹೀಗಾಗಿ ಅವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿಲ್ಲ ಎಂದು ಕೆಲವು ಕಡೆಗಳಲ್ಲಿ ವರದಿ ಆಗಿತ್ತು.

ಪ್ರಮೋಷನ್​​ಗೆ ಚಕ್ಕರ್​, ಬಾಯ್​ಫ್ರೆಂಡ್ ಜತೆ ಸುತ್ತಾಟಕ್ಕೆ ಹಾಜರ್​; ಶ್ರುತಿ ಹಾಸನ್​ ನಡೆಗೆ ಅಸಮಾಧಾನ
ಬಾಯ್​ಫ್ರೆಂಡ್ ಜತೆ ಶ್ರುತಿ ಹಾಸನ್
TV9 Web
| Edited By: |

Updated on: Jan 14, 2023 | 6:49 PM

Share

ನಟಿ ಶ್ರುತಿ ಹಾಸನ್ (Shruti Haasan) ಅವರಿಗೆ ಈವಾರ ತುಂಬಾನೇ ವಿಶೇಷವಾಗಿತ್ತು. ಇದಕ್ಕೆ ಕಾರಣ ಅವರ ನಟನೆಯ ಎರಡು ಸಿನಿಮಾಗಳು ಒಂದೇ ವಾರ ರಿಲೀಸ್ ಆಗಿವೆ. ನಂದಮೂರಿ ಬಾಲಕೃಷ್ಣ ನಟನೆಯ ‘ವೀರ ಸಿಂಹ ರೆಡ್ಡಿ’ ಹಾಗೂ ಚಿರಂಜೀವಿ ಅಭಿನಯದ ‘ವಾಲ್ತೇರು ವೀರಯ್ಯ’ (Waltair Veerayya) ಸಿನಿಮಾಗಳು ಒಂದು ದಿನ ಗ್ಯಾಪ್​​ನಲ್ಲಿ ತೆರೆಗೆ ಬಂದಿವೆ. ಈ ಎರಡೂ ಚಿತ್ರಕ್ಕೆ ಶ್ರುತಿ ಹಾಸನ್ ನಾಯಕಿ. ಈ ಸಿನಿಮಾದ ಪ್ರಮೋಷನ್​ನಲ್ಲಿ ಶ್ರುತಿ ಭಾಗಿ ಆಗಿಲ್ಲ. ಬದಲಿಗೆ ಮುಂಬೈನಲ್ಲಿ ಬಾಯ್​​ಫ್ರೆಂಡ್ ಜತೆ ಸುತ್ತಾಟ ನಡೆಸಿದ್ದಾರೆ.

ಶ್ರುತಿ ಹಾಸನ್ ಅವರು ‘ವಾಲ್ತೇರು​​ ವೀರಯ್ಯ’ ಚಿತ್ರದ ಪ್ರೀ-ರಿಲೀಸ್ ಇವೆಂಟ್​ನಲ್ಲಿ ಭಾಗಿ ಆಗಿರಲಿಲ್ಲ. ಶ್ರುತಿಗೆ ಮಾನಸಿಕ ಆರೋಗ್ಯ ಕೆಟ್ಟಿದೆ, ಹೀಗಾಗಿ ಅವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿಲ್ಲ ಎಂದು ಕೆಲವು ಕಡೆಗಳಲ್ಲಿ ವರದಿ ಆಗಿತ್ತು. ಆದರೆ, ಇದನ್ನು ಶ್ರುತಿ ಅಲ್ಲಗಳೆದಿದ್ದರು. ಅನಾರೋಗ್ಯದ ಕಾರಣ ಈ ಕಾರ್ಯಕ್ರಮಕ್ಕೆ ಬಂದಿರಲಿಲ್ಲ ಎಂದು ಹೇಳಿದ್ದರು.

ಅಚ್ಚರಿ ಎಂದರೆ, ‘ವಾಲ್ತೇರು ವೀರಯ್ಯ’ ರಿಲೀಸ್ ದಿನ ಶ್ರುತಿ ಹಾಸನ್ ಅವರು ಮುಂಬೈನಲ್ಲಿ ತಮ್ಮ ಬಾಯ್​ಫ್ರೆಂಡ್ ಶಾಂತನು ಜತೆ ಸುತ್ತಾಟ ನಡೆಸಿದ್ದಾರೆ. ಇದರ ಫೋಟೋಗಳನ್ನು ಅವರ ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ.

ಇದನ್ನೂ ಓದಿ
Image
Sanya Iyer: ಬೋಲ್ಡ್ ಫೋಟೋ ಮೂಲಕ ಮಿಂಚಿದ ನಟಿ ಸಾನ್ಯಾ ಐಯ್ಯರ್; ಇಲ್ಲಿದೆ ಗ್ಯಾಲರಿ
Image
ಶರವೇಗದಲ್ಲಿ ‘ಧೂಮಂ’ ಶೂಟಿಂಗ್ ಮುಗಿಸಿದ ಪವನ್ ಕುಮಾರ್​; ರಿಲೀಸ್ ಯಾವಾಗ?
Image
Varisu Movie Review: ಇವ ಎಂಟರ್​​ಟೇನರ್ ವಾರಸುದಾರ; ಎಳೆದಾಟವೇ ಪ್ರೇಕ್ಷಕನಿಗೆ ಭಾರ

‘ವಾಲ್ತರು ವೀರಯ್ಯ’ ಬಗ್ಗೆ ಆಗಲೀ ‘ವೀರ ಸಿಂಹ ರೆಡ್ಡಿ’ ಚಿತ್ರದ ಬಗ್ಗೆಯಾಗಲೀ ಶ್ರುತಿ ಹಾಸನ್ ಒಂದೇ ಒಂದು ಅಕ್ಷರ ಬರೆದುಕೊಂಡಿಲ್ಲ. ಅಭಿಮಾನಿಗಳ ಬಳಿ ಸಿನಿಮಾ ನೋಡಿ ಎಂದು ಕೋರಿಲ್ಲ. ಬದಲಿಗೆ ಬಾಯ್​ಫ್ರೆಂಡ್​ ಜತೆ ಸುತ್ತಾಟ ನಡೆಸಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ‘ತೆಲುಗು ಸಿನಿಮಾ ಎಂಬ ಕಾರಣಕ್ಕೆ ಶ್ರುತಿ ಈ ರೀತಿ ಮಾಡಿದ್ದಾರೆ. ತಮಿಳು ಸಿನಿಮಾ ಆದರೆ ಶ್ರುತಿ ಪ್ರಚಾರದಲ್ಲಿ ಭಾಗಿ ಆಗುತ್ತಿದ್ದರು’ ಎಂದು ಕೆಲವರು ಬರೆದುಕೊಂಡಿದ್ದಾರೆ. ಸದ್ಯ ಶ್ರುತಿ ನಡೆ ಬಗ್ಗೆ ಫ್ಯಾನ್ಸ್ ಕಡೆಯಿಂದ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: Shruti Haasan: ಶ್ರುತಿ ಹಾಸನ್​ ಆರೋಗ್ಯದ ಬಗ್ಗೆ ಅಪಪ್ರಚಾರ; ಮಾನಸಿಕ ಕಾಯಿಲೆ ಎಂದವರಿಗೆ ನಟಿ ತಿರುಗೇಟು

ಕಮಲ್ ಹಾಸನ್ ಮಗಳಾದರೂ ಶ್ರುತಿ ಹಾಸನ್ ತಾವಾಗೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಭಾಸ್ ನಟನೆಯ ‘ಸಲಾರ್​’ ಚಿತ್ರಕ್ಕೆ ಶ್ರುತಿ ನಾಯಕಿ ಆಗಿದ್ದಾರೆ. ಈ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು