AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shruti Haasan: ‘ಸಲಾರ್’ ಶೂಟಿಂಗ್ ಮುಗಿಸಿದ ಖುಷಿಯಲ್ಲಿ ನಟಿ ಶ್ರುತಿ ಹಾಸನ್ ಏನಂದ್ರು ನೋಡಿ

ಶ್ರುತಿ ಹಾಸನ್ ಅವರಿಗೆ 2023 ವಿಶೇಷ ಆಗಿರಲಿದೆ. ಅವರ ನಟನೆಯ ‘ವಾಲ್ತೇರು ವೀರಯ್ಯ’ ಹಾಗೂ ‘ವೀರ ಸಿಂಹ ರೆಡ್ಡಿ’ ಚಿತ್ರಗಳು ಬ್ಯಾಕ್​ ಟು ಬ್ಯಾಕ್ ರಿಲೀಸ್ ಆದವು. ಎರಡೂ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿತು. ಈ ವರ್ಷ ಅವರು ದೊಡ್ಡ ಯಶಸ್ಸು ಕಾಣುವ ನಿರೀಕ್ಷೆಯಲ್ಲಿದ್ದಾರೆ.

Shruti Haasan: ‘ಸಲಾರ್’ ಶೂಟಿಂಗ್ ಮುಗಿಸಿದ ಖುಷಿಯಲ್ಲಿ ನಟಿ ಶ್ರುತಿ ಹಾಸನ್ ಏನಂದ್ರು ನೋಡಿ
ಶ್ರುತಿ ಹಾಸನ್
ರಾಜೇಶ್ ದುಗ್ಗುಮನೆ
|

Updated on:Feb 24, 2023 | 8:09 AM

Share

ನಟಿ ಶ್ರುತಿ ಹಾಸನ್ (Shruti Haasan) ಅವರು ‘ಸಲಾರ್​’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರು. ಈಗ ಅವರು ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ನಟನೆಯ ಈ ಸಿನಿಮಾಗೆ ಶ್ರುತಿ ಹಾಸನ್ ನಾಯಕಿ ಆಗಿ ಕಾಣಿಸಿಕೊಂಡಿದ್ದಾರೆ. ತಮ್ಮ ಭಾಗದ ಶೂಟಿಂಗ್​ನ ಪೂರ್ಣಗೊಳಿಸಿರುವ ಬಗ್ಗೆ ಶ್ರುತಿ ಹಾಸನ್ ಮಾಹಿತಿ ನೀಡಿದ್ದಾರೆ. ಸೆಟ್​ನಲ್ಲಿರುವ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು, ಸಿನಿಮಾ ತಂಡಕ್ಕೆ ಧನ್ಯವಾದ ಹೇಳಿದ್ದಾರೆ.

ಶ್ರುತಿ ಹಾಸನ್ ಅವರಿಗೆ 2023 ವಿಶೇಷ ಆಗಿರಲಿದೆ. ಅವರ ನಟನೆಯ ‘ವಾಲ್ತೇರು ವೀರಯ್ಯ’ ಹಾಗೂ ‘ವೀರ ಸಿಂಹ ರೆಡ್ಡಿ’ ಚಿತ್ರಗಳು ಬ್ಯಾಕ್​ ಟು ಬ್ಯಾಕ್ ರಿಲೀಸ್ ಆದವು. ಎರಡೂ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿತು. ಈ ವರ್ಷ ಅವರು ದೊಡ್ಡ ಯಶಸ್ಸು ಕಾಣುವ ನಿರೀಕ್ಷೆಯಲ್ಲಿದ್ದಾರೆ. ಶೂಟಿಂಗ್ ಪೂರ್ಣಗೊಂಡಿರುವ ಬಗ್ಗೆ ಬರೆದುಕೊಂಡಿರುವ ಅವರು, ‘ನನ್ನ ಭಾಗದ ಸಲಾರ್ ಶೂಟಿಂಗ್ ಪೂರ್ಣಗೊಂಡಿದೆ. ನನ್ನನ್ನು ಆದ್ಯ ಮಾಡಿದ್ದಕ್ಕೆ ಪ್ರಶಾಂತ್ ನಿಮಗೆ ಧನ್ಯವಾದ. ನೀವು ಅಸಾಧಾರಣ ವ್ಯಕ್ತಿ. ಡಾರ್ಲಿಂಗ್ ರೀತಿ ಇದ್ದಿದ್ದಕ್ಕೆ ಪ್ರಭಾಸ್ ನಿಮಗೂ ಥ್ಯಾಂಕ್ಸ್. ಭುವನ್ ನಿಮಗೂ ಥ್ಯಾಂಕ್ಸ್. ಹೊಂಬಾಳೆ ಫಿಲ್ಮ್ಸ್ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿದೆ. ಕೊನೆಯಲ್ಲಿ ಇದು ಕುಟುಂಬದಂತೆ ಭಾಸವಾಗಿದೆ’ ಎಂದು ಶ್ರುತಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Sanya Iyer: ಬೋಲ್ಡ್ ಫೋಟೋ ಮೂಲಕ ಮಿಂಚಿದ ನಟಿ ಸಾನ್ಯಾ ಐಯ್ಯರ್; ಇಲ್ಲಿದೆ ಗ್ಯಾಲರಿ
Image
ಶರವೇಗದಲ್ಲಿ ‘ಧೂಮಂ’ ಶೂಟಿಂಗ್ ಮುಗಿಸಿದ ಪವನ್ ಕುಮಾರ್​; ರಿಲೀಸ್ ಯಾವಾಗ?
Image
Varisu Movie Review: ಇವ ಎಂಟರ್​​ಟೇನರ್ ವಾರಸುದಾರ; ಎಳೆದಾಟವೇ ಪ್ರೇಕ್ಷಕನಿಗೆ ಭಾರ

‘ಸಲಾರ್​​’ನಲ್ಲಿ ಶ್ರುತಿ ಹಾಸನ್ ಅವರು ಆದ್ಯ ಹೆಸರಿನ ಪಾತ್ರವನ್ನು ಮಾಡುತ್ತಿದ್ದಾರೆ. ಪ್ರಭಾಸ್ ಜೊತೆ ಅವರು ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಜಗಪತಿ ಬಾಬು ಹಾಗೂ ಪೃಥ್ವಿರಾಜ್​ ಸುಕುಮಾರನ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ಮೊದಲು ಸಿನಿಮಾ ಬಗ್ಗೆ ಮಾತನಾಡಿದ್ದ ಶ್ರುತಿ ಹಾಸನ್ ಅವರು, ‘ಸಲಾರ್ ದೊಡ್ಡ ಪ್ರಾಜೆಕ್ಟ್. ಈ ಸಿನಿಮಾ ಬಗ್ಗೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಬಹುದು. ಈ ಸಿನಿಮಾದ ಕಥೆಯಲ್ಲಿ ನನ್ನ ಪಾತ್ರಕ್ಕೆ ಪ್ರಾಮುಖ್ಯತೆ ಇದೆ’ ಎಂದು ಶ್ರುತಿ ಹಾಸನ್ ಹೇಳಿಕೊಂಡಿದ್ದರು. ಪ್ರಶಾಂತ್ ನೀಲ್ ಸಿನಿಮಾಗಳಲ್ಲಿ ಮಹಿಳಾ ಪಾತ್ರಕ್ಕೆ ಪ್ರಾಮುಖ್ಯತೆ ಇರುತ್ತದೆ. ಹೀಗಾಗಿ, ಶ್ರುತಿ ಹಾಸನ್ ಪಾತ್ರ ಕೂಡ ಈ ಸಿನಿಮಾದಲ್ಲಿ ಮುಖ್ಯವಾಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಸಲಾರ್​’ ಸಿನಿಮಾಗೆ ಸೀಕ್ವೆಲ್ ಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲಿದೆ ಈ ವಿಚಾರ

‘ಕೆಜಿಎಫ್ 2​’ ರಿಲೀಸ್ ಆದ ನಂತರದಲ್ಲಿ ಪ್ರಶಾಂತ್ ನೀಲ್ ಕೆಲಸದ ಬಗ್ಗೆ ಎಲ್ಲರಿಗೂ ನಂಬಿಕೆ ಬಂದಿದೆ. ಹೀಗಾಗಿ, ಸಹಜವಾಗಿಯೇ ‘ಸಲಾರ್​’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ‘ಸಲಾರ್​’ ಸಿನಿಮಾ ಕನ್ನಡದ ‘ಉಗ್ರಂ’ ಚಿತ್ರದ ರಿಮೇಕ್ ಎಂದು ಹೇಳಲಾಗಿತ್ತು. ಆದರೆ, ಇದನ್ನು ಪ್ರಶಾಂತ್ ನೀಲ್ ಒಪ್ಪಿಕೊಂಡಿಲ್ಲ. ಪ್ರಭಾಸ್ ಅವರು ‘ಸಲಾರ್​’ ಮಾತ್ರವಲ್ಲದೆ ಇನ್ನೂ ಹಲವು ಪ್ರಾಜೆಕ್ಟ್​​ಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Fri, 24 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ