‘ನಾನೇ ಮೊದಲು ಐ ಲವ್​ ಯೂ ಹೇಳಿದ್ದು’; ಬಾಯ್​ಫ್ರೆಂಡ್​ ವಿಚಾರದಲ್ಲಿ ಅಚ್ಚರಿಯ ಹೇಳಿಕೆ ನೀಡಿದ ಶ್ರುತಿ ಹಾಸನ್

ಸಾಮಾನ್ಯವಾಗಿ, ಹುಡುಗರು ಮೊದಲು ಪ್ರಪೋಸ್​ ಮಾಡುತ್ತಾರೆ. ಬಹುತೇಕ ಪ್ರೇಮ ಕಥೆಗಳಲ್ಲಿ ಇದೇ ಆಗಿರುತ್ತದೆ. ಆದರೆ, ಶ್ರುತಿ ಹಾಸನ್​ ಆ ರೀತಿ ಅಲ್ಲ. ಅವರೇ ಮೊದಲು ಐ ಲವ್​ ಯೂ ಹೇಳಿದ್ದಾರೆ.

‘ನಾನೇ ಮೊದಲು ಐ ಲವ್​ ಯೂ ಹೇಳಿದ್ದು’; ಬಾಯ್​ಫ್ರೆಂಡ್​ ವಿಚಾರದಲ್ಲಿ ಅಚ್ಚರಿಯ ಹೇಳಿಕೆ ನೀಡಿದ ಶ್ರುತಿ ಹಾಸನ್
ಶ್ರುತಿ-ಸಂತನು
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 09, 2022 | 5:02 PM

ನಟ, ರಾಜಕಾರಣಿ ಕಮಲ್​ ಹಾಸನ್​ ಮಗಳು ನಟಿ ಶ್ರುತಿ ಹಾಸನ್​ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ತಂದೆ ಹೆಸರಲ್ಲಿ ಅವಕಾಶ ಪಡೆದುಕೊಳ್ಳೋಕೆ ಅವರಿಗೆ ಇಷ್ಟವಿಲ್ಲ. ಹೀಗಾಗಿ, ಜೀವನದ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಸ್ವಂತವಾಗಿ ತೆಗೆದುಕೊಳ್ಳುತ್ತಾರೆ. ಬಾಯ್​ಫ್ರೆಂಡ್​ ವಿಚಾರದಲ್ಲೂ ಶ್ರುತಿ ಹಾಸನ್​ ಮುಚ್ಚು ಮರೆ ಮಾಡಿಲ್ಲ. ಸಾರ್ವಜನಿಕವಾಗಿ ಇಬ್ಬರೂ ಕಿಸ್ ಮಾಡಿದ ಸಾಕಷ್ಟು ಉದಾಹರಣೆ ಇದೆ. ಈಗ ಶ್ರುತಿ ಹಾಸನ್ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ಇಬ್ಬರಲ್ಲಿ  ಮೊದಲು ಐ ಲವ್​ ಯೂ ಹೇಳಿದ್ದು ​ಶ್ರುತಿ ಅನ್ನೋದು ವಿಶೇಷ.

ಶ್ರುತಿ ಹಾಸನ್​ ಸಮಯ ಸಿಕ್ಕಾಗೆಲ್ಲ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಾರೆ. ಶ್ರುತಿ ಹಾಸನ್​ ಅವರು ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಂತನು ​ ಜತೆ ತುಂಬ ಆಪ್ತವಾಗಿರುವ ಫೋಟೋಗಳನ್ನು ಅವರು ಅಪ್​ಲೋಡ್​ ಮಾಡುತ್ತಾರೆ. ಈಗ ಅವರು ಹಂಚಿಕೊಂಡ ರೀಲ್ಸ್​ನಲ್ಲಿ ಅಚ್ಚರಿಯ ವಿಚಾರ ಹೊರ ಬಿದ್ದಿದೆ.

ಸಾಮಾನ್ಯವಾಗಿ, ಹುಡುಗರು ಮೊದಲು ಪ್ರಪೋಸ್​ ಮಾಡುತ್ತಾರೆ. ಬಹುತೇಕ ಪ್ರೇಮ ಕಥೆಗಳಲ್ಲಿ ಇದೇ ಆಗಿರುತ್ತದೆ. ಆದರೆ, ಶ್ರುತಿ ಹಾಸನ್​ ಆ ರೀತಿ ಅಲ್ಲ. ಬಾಯ್​ಫ್ರೆಂಡ್​ ಸಂತನುಗೆ ಶ್ರುತಿ ಹಾಸನ್​ ಅವರೇ ಮೊದಲು ಐ ಲವ್​ ಯೂ ಹೇಳಿದ್ದರಂತೆ. ಹೊಸ ರೀಲ್ಸ್​ನಲ್ಲಿ ಈ ವಿಚಾರ ಹೇಳಿಕೊಂಡಿದ್ದಾರೆ.

ಶ್ರುತಿ ಹಾಸನ್​ಗೆ ಸದ್ಯ ಕೈ ತುಂಬ ಆಫರ್​ಗಳಿವೆ. ಸ್ಟಾರ್​ ನಟ ಕಮಲ್​ ಹಾಸನ್​ ಪುತ್ರಿ ಆಗಿದ್ದರೂ ಕೂಡ ಅವರು ತಂದೆ-ತಾಯಿ ಬಳಿ ಹಣ ಕೇಳುವುದಿಲ್ಲವಂತೆ. ‘ನಾನು ಇಂಡಿಪೆಂಡೆಂಟ್​ ಮಹಿಳೆ. ನನ್ನ ತಂದೆ ನಟ-ರಾಜಕಾರಣಿ ಹೌದು. ಆದರೆ, ನನ್ನ ಬಿಲ್​ಗಳನ್ನು ನಾನೇ ಪೇ ಮಾಡುತ್ತೇನೆ. ನನ್ನ ತಂದೆ ತಾಯಿ ಬಳಿ ಯಾವಾಗಲೂ ಆರ್ಥಿಕ ಸಹಾಯ ಕೇಳಿಲ್ಲ. ನನಗೆ ಹಣಕಾಸಿನ ತೊಂದರೆ ಇದೆ. ಹೀಗಾಗಿ, ಶೂಟಿಂಗ್​ನಲ್ಲಿ ಪಾಲ್ಗೊಳ್ಳಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಶೂಟಿಂಗ್​​ ಮಾಡುವಾಗ ಮಾಸ್ಕ್​ ಇಲ್ಲದೆ ಕಾಣಿಸಿಕೊಳ್ಳುವುದಕ್ಕೆ ತುಂಬಾನೇ ಭಯವಾಗುತ್ತದೆ. ಆದಾಗ್ಯೂ ಒಪ್ಪಿಕೊಂಡ ಪ್ರಾಜೆಕ್ಟ್​ಗಳನ್ನು ಮುಗಿಸಲೇಬೇಕಾದ ಅನಿವಾರ್ಯತೆ ಇದೆ. ಖರ್ಚುಗಳನ್ನು ನಿಭಾಯಿಸಲು ಕೆಲಸ ಮಾಡುವುದೊಂದೇ ಆಯ್ಕೆ’ ಎಂದು ಶ್ರುತಿ ಇತ್ತೀಚೆಗೆ ಹೇಳಿದ್ದರು.

ಇದನ್ನೂ ಓದಿ: Shruti Hassan: ಫೋಟೋಶೂಟ್​ಗಾಗಿ ಟಾಪ್​ಲೆಸ್​ ಆದ ಶ್ರುತಿ ಹಾಸನ್

ಶ್ರುತಿ ಹರಿಹರನ್​ ಮೀಟೂ ಕಾನೂನು ಸಮರ: ಅರ್ಜುನ್​ ಸರ್ಜಾಗೆ ಗೆಲುವು? ಸಾಕ್ಷಿ ಕೊರತೆಯಿಂದ ಬಿ ರಿಪೋರ್ಟ್​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ