AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬಾಯಿ ಬಚ್ಚಲು ಮನೆ ಇದ್ದಂಗೆ; ಮಂಜು ಪಾವಗಡ ಹೀಗೆ ಹೇಳಿದ್ದು ಯಾಕೆ?

ಸಾಮಾನ್ಯವಾಗಿ ಜಗಳ ಮಾಡುವಾಗ ಕೆಟ್ಟ ಶಬ್ದ ಪ್ರಯೋಗ ಮಾಡುವಾಗ ನನ್ನ ಬಾಯಿ ಬಚ್ಚಲ ಮನೆ ಇದ್ದಂತೆ ಎನ್ನುತ್ತಾರೆ. ಆದರೆ, ಮಂಜು ಬೇರೆಯದೇ ರೀತಿ ಬಳಸಿದ್ದಾರೆ.

ನನ್ನ ಬಾಯಿ ಬಚ್ಚಲು ಮನೆ ಇದ್ದಂಗೆ; ಮಂಜು ಪಾವಗಡ ಹೀಗೆ ಹೇಳಿದ್ದು ಯಾಕೆ?
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
|

Updated on: Mar 26, 2021 | 5:45 PM

Share

ಬಿಗ್​ ಬಾಸ್​ ಮನೆಯಲ್ಲಿ ಮಂಜು ಸದಾ ನಗುತ್ತಿರುತ್ತಾರೆ. ಅವರು ಮನೆಯಲ್ಲಿ ರೇಗಾಡಿದ್ದು ಕಡಿಮೆ. ಅವರು ಹೆಚ್ಚು ಜಗಳ ಮಾಡಿಕೊಂಡಿದ್ದು ಎಂದರೆ ಅದು ಪ್ರಶಾಂತ್​ ಸಂಬರಗಿ ಜತೆ ಮಾತ್ರ. ಈ ಮಧ್ಯೆ ಮಂಜು ನನ್ನ ಬಾಯಿ ಬಚ್ಚಲ ಮನೆ ಇದ್ದಂತೆ ಎಂದಿದ್ದಾರೆ. ಅಷ್ಟಕ್ಕೂ ಅವರು ಹೇಳಿದ್ದು ಯಾರಿಗೆ? ರೇಗಾಡಿ ಅವರು ಹೀಗೆ ಹೇಳಿದ್ದಾರಾ ಎನ್ನುವ ಪ್ರಶ್ನೆ ಮೂಡೋದು ಸಹಜ. ಅದಕ್ಕೆ ಉತ್ತರ ಈ ಸ್ಟೋರಿಯಲ್ಲಿದೆ. ಸಾಮಾನ್ಯವಾಗಿ ಜಗಳ ಮಾಡುವಾಗ ಕೆಟ್ಟ ಶಬ್ದ ಪ್ರಯೋಗ ಮಾಡುವಾಗ ನನ್ನ ಬಾಯಿ ಬಚ್ಚಲ ಮನೆ ಇದ್ದಂತೆ ಎನ್ನುತ್ತಾರೆ. ಬಚ್ಚಲಮನೆಯಲ್ಲಿ ಕೊಳೆ ಇರುವುದರಿಂದ ಈ ರೀತಿ ಪ್ರಯೋಗ ಮಾಡಲಾಗುತ್ತದೆ. ಆದರೆ, ಮಂಜು ಬಳಕೆ ಮಾಡಿದ್ದ ಅರ್ಥ ಬೇರೆ ರೀತಿಯಲ್ಲಿದೆ. ಅವರು ಬಯ್ಯುವಾಗ ಈ ಶಬ್ದ ಬಳಕೆ ಮಾಡಿಲ್ಲ. ಮಂಜು ಹೀಗೆ ಹೇಳುವುದಕ್ಕೆ ಬೆರೆಯದೇ ಕಾರಣ ಇದೆ.

ಬಿಗ್​ ಬಾಸ್​ ಮನೆಯಲ್ಲಿ ಶುಭಾ ಹಾಗೂ ನಿಧಿ ಸದಾ ಗಾಸಿಪ್​ ಮಾಡುತ್ತಿರುತ್ತಾರೆ. ರಾತ್ರಿ ವೇಳೆ ಮಲಗಿದ್ದಾಗ ಇಬ್ಬರೂ ಮನೆಯ ಎಲ್ಲಾ ಸದಸ್ಯರ ಬಗ್ಗೆ ತಮಗಿಷ್ಟ ಬಂದಂತೆ, ತಾವು ಕಂಡಂತೆ ಹೇಳುತ್ತಾರೆ. ಈಗ ಮಂಜು ಜತೆ ಸೇರಿ ಬಿಗ್​ ಬಾಸ್​ ಮನೆಯ ಗಾಸಿಪ್​ ಬಗ್ಗೆ ಶುಭಾ ಮಾತನಾಡಿದ್ದಾರೆ.

ಮಂಜು ಶುಭಾ ಇಬ್ಬರೂ ಕೂತಿದ್ದರು. ಈ ವೇಳೆ ಮಾತು ಆರಂಭಿಸಿದ ಮಂಜು, ಬೇರೆಯವರ ಬಾಯಿ ವಿಚಾರ ಹಾಗಿರಲಿ. ನನ್ನ ಬಾಯಿ ಗೊತ್ತಲ್ಲ ಬಚ್ಚಲ ಮನೆ ಇದ್ದಂತೆ. ಬಿಗ್​ ಬಾಸ್​ ಮನೆಯಲ್ಲಿ ಅವರ ಬಗ್ಗೆ ಇವರು, ಇವರ ಬಗ್ಗೆ ಅವರು ಮಾತನಾಡುತ್ತಾ ಇರುತ್ತಾರೆ. ಬಿಗ್​ ಬಾಸ್​ ಮನೆಯಲ್ಲಿ ಮಾತನಾಡೋಕೆ ಏನೂ ಇಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್ ಮನೆಯಲ್ಲಿ ಗಾಸಿಪ್​ ಹೇಗಾಗುತ್ತದೆ ಎಂಬುದನ್ನೂ ವಿವರಿಸಿದ್ದಾರೆ. ಇದೆಲ್ಲವುದಕ್ಕೂ ಶುಭಾ ತಲೆ ಆಡಿಸಿದ್ದಾರೆ.

ಇದನ್ನೂ ಓದಿ: BBK8: ’ಮಂಜುನ ಮದ್ವೆ ಆಗೋಕೆ ಚಾನ್ಸೇ ಇಲ್ಲ’: ಸಂಬರಗಿ ಬಳಿ ಎಲ್ಲವನ್ನೂ ಬಿಚ್ಚಿಟ್ಟ ದಿವ್ಯಾ ಸುರೇಶ್​

‘ಸ್ಕರ್ಟ್​ ಹಾಕ್ಕೊಂಡು ಮಲಗಿದ್ದಾಗ ನಮ್ಮ ತಂದೆಯೇ ಕೆಟ್ಟದಾಗಿ ನಡೆದುಕೊಂಡ್ರು’: ಬಿಗ್​ ಬಾಸ್​ ಚಂದ್ರಕಲಾ ಬದುಕಿನ ಕಹಿ ಘಟನೆ!

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!