AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಬಿಗ್​ ಬಾಸ್​ ಫೈನಲ್​ನಲ್ಲಿ ನಾಲ್ಕು ಜನ ಹೆಣ್ಮಕ್ಳು! ಮನೆಯಲ್ಲಿ ನಡೆದಿದೆ ಹೊಸ ಪ್ಲ್ಯಾನ್​

ನಾವು ಪ್ರತಿ ಬಾರಿ ರಾಜೀವ್​, ಮಂಜು, ಅರವಿಂದ್​ ಅವರ ಹೆಸರನ್ನು ಆಯ್ಕೆ ಮಾಡುತ್ತೇವೆ. ಆದರೆ, ಅವರು ಒಂದು ಬಾರಿಯಾದರೂ ನಮ್ಮ ಹೆಸರನ್ನು ಎತ್ತಿಕೊಂಡರಾ ಎಂದು ಶುಭಾ ಬೇಸರ ಹೊರ ಹಾಕಿದರು.

ಈ ಬಾರಿ ಬಿಗ್​ ಬಾಸ್​ ಫೈನಲ್​ನಲ್ಲಿ ನಾಲ್ಕು ಜನ ಹೆಣ್ಮಕ್ಳು! ಮನೆಯಲ್ಲಿ ನಡೆದಿದೆ ಹೊಸ ಪ್ಲ್ಯಾನ್​
ಶುಭಾ ಪೂಂಜಾ - ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Mar 22, 2021 | 3:45 PM

Share

ಕನ್ನಡ ಬಿಗ್​ ಬಾಸ್​​ನಲ್ಲಿ ಒಟ್ಟೂ 7 ಸೀಸನ್​ಗಳು ಪೂರ್ಣಗೊಂಡಿವೆ. ಆರು ಸೀಸನ್​ಗಳಲ್ಲಿ ಪುರುಷರೇ ವಿನ್​ ಆಗಿದ್ದಾರೆ. ಒಂದು ಸೀಸನ್​ನಲ್ಲಿ ಮಾತ್ರ ನಟಿ ಶ್ರುತಿ ಬಿಗ್​ ಬಾಸ್​ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಈಗ ಬಿಗ್​ ಬಾಸ್​ ಮನೆ ಸೇರಿರುವ ಮಹಿಳಾ ಸ್ಪರ್ಧಿಗಳಿಗೂ ಶ್ರುತಿ ಮಾದರಿ ಆಗಿದ್ದಾರೆ. ಅಷ್ಟೇ ಅಲ್ಲ, ಅವರಂತೆ ನಾವೂ ಈ ಬಾರಿ ಬಿಗ್​ ಬಾಸ್​ ಕಿರೀಟ ಗೆಲ್ಲಬೇಕು ಎನ್ನುವ ಕನಸನ್ನು ಕಾಣುತ್ತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಶುಭಾ ಪೂಂಜಾ ಹಾಗೂ ನಿಧಿ ಸುಬ್ಬಯ್ಯ ಮಾತನಾಡುತ್ತಿದ್ದರು. ಈ ವೇಳೆ ಹೆಣ್ಣುಮಕ್ಕಳು ಪುರುಷರನ್ನೇ ಫೇವರಿಟ್​ ಸ್ಪರ್ಧಿಗಳು ಎಂದು ಆಯ್ಕೆ ಮಾಡುತ್ತಿರುವುದಕ್ಕೆ ಇಬ್ಬರೂ ಬೇಸರ ಹೊರ ಹಾಕಿದರು.

ನಾವು ಪ್ರತಿ ಬಾರಿ ರಾಜೀವ್​, ಮಂಜು, ಅರವಿಂದ್​ ಅವರ ಹೆಸರನ್ನು ಆಯ್ಕೆ ಮಾಡುತ್ತೇವೆ. ಆದರೆ, ಅವರು ಒಂದು ಬಾರಿಯಾದರೂ ನಮ್ಮ ಹೆಸರನ್ನು ಎತ್ತಿಕೊಂಡರಾ? ಗಂಡುಮಕ್ಕಳು ಟಾಸ್ಕ್​ ಆಧಾರದಮೇಲೆ ದಿವ್ಯಾ ಉರುಡುಗ, ದಿವ್ಯಾ ಸುರೇಶ್​ ಅವರ ಹೆಸರನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ನಾವು ಬಕೆಟ್​ ಹಿಡ್ಯಲ್ಲ. ಇದ್ದಿದ್ದು ಇದ್ದಂಗೆ ಹೇಳ್ತೀವಿ ಎಂದರು ನಿಧಿ.

ಈ ಬಾರಿಯ ಸೀಸನ್​ ಹೇಗಿರಬೇಕು ಎಂದರೆ ಫಿನಾಲೆಗೆ ಐದರಲ್ಲಿ ನಾಲ್ಕು ಜನ ಹೆಣ್ಮಕ್ಳೇ ಇರಬೇಕು. ನಾಲ್ಕು ಅಲ್ಲದಿದ್ದರೆ ಮೂರಾದರೂ ಹೆಣ್ಮಕ್ಳು ಇರಬೇಕು. ಪ್ರತಿ ಬಾರಿ ಗಂಡಸರೇ ಏಕೆ ವಿನ್​ ಆಗುತ್ತಾರೆ ಎನ್ನುವ ಪ್ರಶ್ನೆ ನನಗೆ ಸದಾ ಕಾಡುತ್ತದೆ. ಶ್ರುತಿ ಅಮ್ಮ ಒಬ್ಬರೆ ಆಟವಾಡಿದ್ದರು. ಅವರು ನಮ್ಮ ತರ ಗುಂಪಲ್ಲಿ ಗೋವಿಂದ ಆಗಿರಲಿಲ್ಲ. ಅದಕ್ಕೆ ಅವರು ವಿನ್​ ಆಗಿದ್ದರು ಎಂದು ಹೇಳುವ ಮೂಲಕ ಇದೇ ತಂತ್ರವನ್ನು ಮನೆಯಲ್ಲಿ ಉಪಯೋಗಿಸಬೇಕು ಎಂದು ಪರೋಕ್ಷವಾಗಿ ಸೂಚಿಸಿದರು.

ಈಗಾಗಲೇ ಬಿಗ್​ ಬಾಸ್​ ಮನೆಯಿಂದ ಮೂರು ಸ್ಪರ್ಧಿಗಳು ಹೊರ ಬಿದ್ದಿದ್ದಾರೆ. ಈ ಮೂವರು ಹೆಣ್ಣುಮಕ್ಕಳೇ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ. ಬಿಗ್​ ಬಾಸ್​ ಮನೆಯಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿರುವ ವಿಚಾರ ಕೂಡ ಮನೆಯಲ್ಲಿರುವ ಮಹಿಳಾ ಸ್ಪರ್ಧಿಗಳ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: BBK8: ತನ್ನನ್ನೇ ತಾನು ನಂಬದ ಶಮಂತ್​ ಮೇಲೆ ಜನರಿಗೆ ಯಾಕಿಷ್ಟು ನಂಬಿಕೆ? ಇದು ಬಿಗ್​ ಬಾಸ್ ರಹಸ್ಯ!

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು