AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss 8: ಬಿಗ್​ ಬಾಸ್​ ಮನೆಯಿಂದ ಹೊರ ಬಂದಮೇಲೆ ಮಾಧ್ಯಮದವರಿಗೆ ಸಂದರ್ಶನ ಕೊಡಲ್ಲ; ಶುಭಾ ಹೀಗೆ ಹೇಳಿದ್ದೇಕೆ?

Shubha Poonja: ಧನುಶ್ರೀ, ನಿರ್ಮಲಾ ಚೆನ್ನಪ್ಪ ಮುಂತಾದವರು ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿ ಹೊರ ಬಂದ ನಂತರದಲ್ಲಿ ಮಾಧ್ಯಮಗಳು ಅವರ ಸಂದರ್ಶನ ಪಡೆದಿದ್ದವು.

Bigg Boss 8: ಬಿಗ್​ ಬಾಸ್​ ಮನೆಯಿಂದ ಹೊರ ಬಂದಮೇಲೆ ಮಾಧ್ಯಮದವರಿಗೆ ಸಂದರ್ಶನ ಕೊಡಲ್ಲ; ಶುಭಾ ಹೀಗೆ ಹೇಳಿದ್ದೇಕೆ?
ಶುಭಾ ಪೂಂಜಾ - ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:May 07, 2021 | 4:48 PM

Share

ಬಿಗ್​ ಬಾಸ್​ ಮನೆಯಲ್ಲಿ ಶುಭಾ ಮಾಡುವ ಚೇಷ್ಟೆಗಳು ಬಹುತೇಕರಿಗೆ ಇಷ್ಟವಾಗುತ್ತಿದೆ. ಸಣ್ಣ ಮಕ್ಕಳಂತೆ ಆಡುವುದು, ಬೇರೆಯವರ ಕಾಲೆಳೆಯುವುದನ್ನು ಅವರು ನಿರಂತರವಾಗಿ ಮಾಡುತ್ತಲೇ ಇರುತ್ತಾರೆ. ಮೊನ್ನೆ ಅರ್ಥವಾಗದ ಭಾಷೆಯಲ್ಲಿ ಶುಭಾ ಮಾತನಾಡಿದ್ದು ಭಾರೀ ವೈರಲ್​ ಆಗಿತ್ತು. ಈಗ ಅವರು ಬಿಗ್​ ಬಾಸ್​ ಮನೆಯಲ್ಲಿ ಶಪಥವೊಂದನ್ನು ಮಾಡಿದ್ದಾರೆ.

ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಸ್ಪರ್ಧಿಗಳು ಮಾಧ್ಯಮಗಳಿಗೆ ಸಂದರ್ಶನ ಕೊಡೋದು ವಾಡಿಕೆ. ಧನುಶ್ರೀ, ನಿರ್ಮಲಾ ಚೆನ್ನಪ್ಪ ಮುಂತಾದವರು ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿ ಹೊರ ಬಂದ ನಂತರದಲ್ಲಿ ಮಾಧ್ಯಮಗಳು ಅವರ ಸಂದರ್ಶನ ಪಡೆದಿದ್ದವು. ಆದರೆ, ಶುಭಾ ಮನೆಯಿಂದ ಹೊರ ಬಂದ ನಂತರ ಒಂದು ವಾರ ಯಾರಿಗೂ ಸಂದರ್ಶನ ನೀಡುವುದಿಲ್ಲವಂತೆ. ಅವರು ಹೀಗೆ ಹೇಳುವುದಕ್ಕೂ ಬಲವಾದ ಕಾರಣವಿದೆ.

ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಲ್ಲಿ ಹಾಯಾಗಿದ್ದಾರೆ. ಅವರ ಫಿಯಾನ್ಸಿ ಸುಮಂತ್​ ಅವರನ್ನು ನೆನಪು ಮಾಡಿಕೊಂಡು ಆಗಾಗ ಬೇಸರಗೊಂಡಿದ್ದಿದೆ. ಆದರೆ, ಉಳಿದಂತೆ ಅವರು ಸ್ಟ್ರಾಂಗ್​ ಆಗಿದ್ದಾರೆ. ಪ್ರತಿ ವಾರ ಉತ್ತಮ ಪ್ರದರ್ಶನ ನೀಡುವ ಮೂಲಕ ನಾಮಿನೇಷನ್​ನಿಂದ ಬಚಾವ್​ ಆಗುತ್ತಿದ್ದಾರೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಇರೋದು ಅವರಿಗೆ ಕಷ್ಟವಾಗುತ್ತಿದೆಯಂತೆ.

ಈ ಬಗ್ಗೆ ಮೇ 6ರ ಎಪಿಸೋಡ್​ನಲ್ಲಿ ಶುಭಾ ಮಾತನಾಡಿದ್ದಾರೆ. ನಾನು ಇಲ್ಲಿಂದ ಹೊರ ಹೋದಮೇಲೆ ಒಂದು ವಾರ ಹಾಯಾಗಿರಬೇಕು. ನಾನು ಮಾಧ್ಯಮದವರಿಗೆ ಒಂದು ವಾರ ನನ್ನ ಸುದ್ದಿಗೆ ಬರಬೇಡ್ರಪ್ಪ, ನಾನು ಯಾವ ಸಂದರ್ಶನವನ್ನೂ ಕೊಡಲ್ಲ ಎಂದು ಹೇಳಿಬಿಡ್ತೀನಿ ಎಂದಿದ್ದಾರೆ. ಈ ಮೂಲಕ ಮನೆಯಲ್ಲೇ ಅವರು ಹಾಯಾಗಿ ಕಾಲ ಕಳೆಯುವ ಆಲೋಚನೆಯಲ್ಲಿದ್ದಾರೆ.

ಕಳೆದ ಒಂದು ವಾರಗಳಿಂದ ಶುಭಾ ಸಣ್ಣಸಣ್ಣ ವಿಚಾರಕ್ಕೂ ಎಮೋಷನಲ್​​ ಆಗುತ್ತಿದ್ದಾರೆ. ಒಂದು ವಾರದಿಂದ ನಿಜವಾಗಲೂ ಎಮೋಷನಲಿ ಟಫ್​ ಆಗ್ತಿದೆ ಎಂದು ಅವರೇ ಹೇಳಿಕೊಂಡಿದ್ದರು. ದಿವ್ಯಾ ಉರುಡುಗ ಅನಾರೋಗ್ಯಕ್ಕೆ ತುತ್ತಾಗಿ ಮನೆಯಿಂದ ಹೊರ ಹೋಗಿರುವುದಕ್ಕೆ ಶುಭಾ ಅತ್ತಿದ್ದರು.

ಇದನ್ನೂ ಓದಿ: Shubha Poonja: ನನ್ನ ಹುಡುಗನಿಗೆ ಪ್ರಪೋಸ್​​ ಮಾಡಿದ್ದು ನಾನಲ್ಲ, ನನ್ನ ಅಮ್ಮ; ಶುಭಾ ಪೂಂಜಾ ಪ್ರೇಮಕಥೆ ಕೇಳಿ ಬಿಗ್​ ಬಾಸ್​ ಮಂದಿ ಶಾಕ್

Shubha Poonja: ಕೆಲವೊಮ್ಮೆ ಸೈಕ್​ ಮಾಡಿ ಬಿಡುತ್ತದೆ; ಬಿಗ್​ ಬಾಸ್​ ಮನೆ ಅನುಭವ ಹಂಚಿಕೊಂಡ ಶುಭಾ ಪೂಂಜಾ

Published On - 4:45 pm, Fri, 7 May 21

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು