AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss 8: ಬಿಗ್​ ಬಾಸ್​ ಮನೆಯಿಂದ ಹೊರ ಬಂದಮೇಲೆ ಮಾಧ್ಯಮದವರಿಗೆ ಸಂದರ್ಶನ ಕೊಡಲ್ಲ; ಶುಭಾ ಹೀಗೆ ಹೇಳಿದ್ದೇಕೆ?

Shubha Poonja: ಧನುಶ್ರೀ, ನಿರ್ಮಲಾ ಚೆನ್ನಪ್ಪ ಮುಂತಾದವರು ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿ ಹೊರ ಬಂದ ನಂತರದಲ್ಲಿ ಮಾಧ್ಯಮಗಳು ಅವರ ಸಂದರ್ಶನ ಪಡೆದಿದ್ದವು.

Bigg Boss 8: ಬಿಗ್​ ಬಾಸ್​ ಮನೆಯಿಂದ ಹೊರ ಬಂದಮೇಲೆ ಮಾಧ್ಯಮದವರಿಗೆ ಸಂದರ್ಶನ ಕೊಡಲ್ಲ; ಶುಭಾ ಹೀಗೆ ಹೇಳಿದ್ದೇಕೆ?
ಶುಭಾ ಪೂಂಜಾ - ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
| Edited By: |

Updated on:May 07, 2021 | 4:48 PM

Share

ಬಿಗ್​ ಬಾಸ್​ ಮನೆಯಲ್ಲಿ ಶುಭಾ ಮಾಡುವ ಚೇಷ್ಟೆಗಳು ಬಹುತೇಕರಿಗೆ ಇಷ್ಟವಾಗುತ್ತಿದೆ. ಸಣ್ಣ ಮಕ್ಕಳಂತೆ ಆಡುವುದು, ಬೇರೆಯವರ ಕಾಲೆಳೆಯುವುದನ್ನು ಅವರು ನಿರಂತರವಾಗಿ ಮಾಡುತ್ತಲೇ ಇರುತ್ತಾರೆ. ಮೊನ್ನೆ ಅರ್ಥವಾಗದ ಭಾಷೆಯಲ್ಲಿ ಶುಭಾ ಮಾತನಾಡಿದ್ದು ಭಾರೀ ವೈರಲ್​ ಆಗಿತ್ತು. ಈಗ ಅವರು ಬಿಗ್​ ಬಾಸ್​ ಮನೆಯಲ್ಲಿ ಶಪಥವೊಂದನ್ನು ಮಾಡಿದ್ದಾರೆ.

ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಸ್ಪರ್ಧಿಗಳು ಮಾಧ್ಯಮಗಳಿಗೆ ಸಂದರ್ಶನ ಕೊಡೋದು ವಾಡಿಕೆ. ಧನುಶ್ರೀ, ನಿರ್ಮಲಾ ಚೆನ್ನಪ್ಪ ಮುಂತಾದವರು ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿ ಹೊರ ಬಂದ ನಂತರದಲ್ಲಿ ಮಾಧ್ಯಮಗಳು ಅವರ ಸಂದರ್ಶನ ಪಡೆದಿದ್ದವು. ಆದರೆ, ಶುಭಾ ಮನೆಯಿಂದ ಹೊರ ಬಂದ ನಂತರ ಒಂದು ವಾರ ಯಾರಿಗೂ ಸಂದರ್ಶನ ನೀಡುವುದಿಲ್ಲವಂತೆ. ಅವರು ಹೀಗೆ ಹೇಳುವುದಕ್ಕೂ ಬಲವಾದ ಕಾರಣವಿದೆ.

ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಲ್ಲಿ ಹಾಯಾಗಿದ್ದಾರೆ. ಅವರ ಫಿಯಾನ್ಸಿ ಸುಮಂತ್​ ಅವರನ್ನು ನೆನಪು ಮಾಡಿಕೊಂಡು ಆಗಾಗ ಬೇಸರಗೊಂಡಿದ್ದಿದೆ. ಆದರೆ, ಉಳಿದಂತೆ ಅವರು ಸ್ಟ್ರಾಂಗ್​ ಆಗಿದ್ದಾರೆ. ಪ್ರತಿ ವಾರ ಉತ್ತಮ ಪ್ರದರ್ಶನ ನೀಡುವ ಮೂಲಕ ನಾಮಿನೇಷನ್​ನಿಂದ ಬಚಾವ್​ ಆಗುತ್ತಿದ್ದಾರೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಇರೋದು ಅವರಿಗೆ ಕಷ್ಟವಾಗುತ್ತಿದೆಯಂತೆ.

ಈ ಬಗ್ಗೆ ಮೇ 6ರ ಎಪಿಸೋಡ್​ನಲ್ಲಿ ಶುಭಾ ಮಾತನಾಡಿದ್ದಾರೆ. ನಾನು ಇಲ್ಲಿಂದ ಹೊರ ಹೋದಮೇಲೆ ಒಂದು ವಾರ ಹಾಯಾಗಿರಬೇಕು. ನಾನು ಮಾಧ್ಯಮದವರಿಗೆ ಒಂದು ವಾರ ನನ್ನ ಸುದ್ದಿಗೆ ಬರಬೇಡ್ರಪ್ಪ, ನಾನು ಯಾವ ಸಂದರ್ಶನವನ್ನೂ ಕೊಡಲ್ಲ ಎಂದು ಹೇಳಿಬಿಡ್ತೀನಿ ಎಂದಿದ್ದಾರೆ. ಈ ಮೂಲಕ ಮನೆಯಲ್ಲೇ ಅವರು ಹಾಯಾಗಿ ಕಾಲ ಕಳೆಯುವ ಆಲೋಚನೆಯಲ್ಲಿದ್ದಾರೆ.

ಕಳೆದ ಒಂದು ವಾರಗಳಿಂದ ಶುಭಾ ಸಣ್ಣಸಣ್ಣ ವಿಚಾರಕ್ಕೂ ಎಮೋಷನಲ್​​ ಆಗುತ್ತಿದ್ದಾರೆ. ಒಂದು ವಾರದಿಂದ ನಿಜವಾಗಲೂ ಎಮೋಷನಲಿ ಟಫ್​ ಆಗ್ತಿದೆ ಎಂದು ಅವರೇ ಹೇಳಿಕೊಂಡಿದ್ದರು. ದಿವ್ಯಾ ಉರುಡುಗ ಅನಾರೋಗ್ಯಕ್ಕೆ ತುತ್ತಾಗಿ ಮನೆಯಿಂದ ಹೊರ ಹೋಗಿರುವುದಕ್ಕೆ ಶುಭಾ ಅತ್ತಿದ್ದರು.

ಇದನ್ನೂ ಓದಿ: Shubha Poonja: ನನ್ನ ಹುಡುಗನಿಗೆ ಪ್ರಪೋಸ್​​ ಮಾಡಿದ್ದು ನಾನಲ್ಲ, ನನ್ನ ಅಮ್ಮ; ಶುಭಾ ಪೂಂಜಾ ಪ್ರೇಮಕಥೆ ಕೇಳಿ ಬಿಗ್​ ಬಾಸ್​ ಮಂದಿ ಶಾಕ್

Shubha Poonja: ಕೆಲವೊಮ್ಮೆ ಸೈಕ್​ ಮಾಡಿ ಬಿಡುತ್ತದೆ; ಬಿಗ್​ ಬಾಸ್​ ಮನೆ ಅನುಭವ ಹಂಚಿಕೊಂಡ ಶುಭಾ ಪೂಂಜಾ

Published On - 4:45 pm, Fri, 7 May 21

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!