AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವನೆಗಳ ಜತೆ ಆಡಬೇಡಿ; ಶುಭಾ ಮಾಡಿದ ಕಳ್ಳ ಕೆಲಸಕ್ಕೆ ಪುರುಷ ಸ್ಪರ್ಧಿಗಳು ಕಂಗಾಲು

ನೀವು ಸಿಗರೇಟ್​ ಜತೆ ಆಡ್ತಿಲ್ಲ. ನಮ್ಮ ಭಾವನೆಗಳ ಜತೆ ಆಟ ಆಡ್ತಾ ಇದೀರಾ. ಭಾವನೆಗಳ ಜತೆ ಆಟ ಆಡಬೇಡಿ ಎಂದು ನಗುತ್ತಲೇ ಶುಭಾ ಪೂಂಜಾಗೆ ರಘು ಎಚ್ಚರಿಕೆ ನೀಡಿದರು.

ಭಾವನೆಗಳ ಜತೆ ಆಡಬೇಡಿ; ಶುಭಾ ಮಾಡಿದ ಕಳ್ಳ ಕೆಲಸಕ್ಕೆ ಪುರುಷ ಸ್ಪರ್ಧಿಗಳು ಕಂಗಾಲು
ಶುಭಾ ಪೂಂಜಾ - ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Apr 25, 2021 | 2:44 PM

Share

ಬಿಗ್​ ಬಾಸ್​ ಮನೆಯಲ್ಲಿ ಶುಭಾ ಪೂಂಜಾ ತುಂಬಾನೇ ಚೈಲ್ಡಿಶ್​ ಆಗಿ ನಡೆದುಕೊಳ್ಳುತ್ತಾರೆ. ಮನೆಯಲ್ಲಿ ಅವರು ಮಾಡುವ ಕೀಟಲೆಗಳು ಒಂದೆರಡಲ್ಲ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟವಾಗುತ್ತಾರೆ. ಈಗ ಶುಭಾ ಮಾಡಿದ ಕಳ್ಳ ಕೆಲಸಕ್ಕೆ ಬಿಗ್​ ಬಾಸ್​ ಮನೆಯ ಪುರುಷ ಸ್ಪರ್ಧಿಗಳು ಒಂದು ಕ್ಷಣ ಕಂಗಾಲಾಗಿದ್ದಾರೆ. ಎಲ್ಲರೂ ಒಬ್ಬರ ಮೆಲೆ ಮತ್ತೊಬ್ಬರು ಆರೋಪ ಮಾಡಿಕೊಳ್ಳುತ್ತಿದ್ದಾರೆ.

ಶನಿವಾರದ (ಎಪ್ರಿಲ್​ 24) ಎಪಿಸೋಡ್​ನಲ್ಲಿ  ಮುಂಜಾನೆ ಬಿಗ್​ ಬಾಸ್​ ಸಿಗರೇಟ್​ ಕಳುಹಿಸಿದ್ದರು. ಇದನ್ನು ಸ್ಟೋರ್​​ ರೂಂನಲ್ಲಿ ಇಡಲಾಗಿತ್ತು. ಅರವಿಂದ್ ಅವರ ಸಿಗರೇಟ್​ ಪ್ಯಾಕ್​ ಒಂದನ್ನು ಹೊರತುಪಡಿಸಿ ಉಳಿದೆಲ್ಲ ಸಿಗರೇಟ್​ ಪ್ಯಾಕ್​ಗಳನ್ನು ಶುಭಾ ಅಡಗಿಸಿಟ್ಟರು. ಅರವಿಂದ್​ ತಮ್ಮ ಪಾಲಿಗೆ ಬಂದ ಸಿಗರೇಟ್​ ಅನ್ನು ತೆಗೆದುಕೊಂಡು ಬಂದರು.

ರಘು ಗೌಡ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​, ಪ್ರಶಾಂತ್​ ಸಂಬರಗಿ ಸ್ಟೋರ್​​ ರೂಂಗೆ ಹೋಗಿ ನೋಡಿದರೆ ಅಲ್ಲಿ ಸಿಗರೇಟ್​ ಇರಲಿಲ್ಲ. ಇದನ್ನು ಕಂಡು ಎಲ್ಲರೂ ಕಂಗಾಲಾಗಿದ್ದಾರೆ. ಅಲ್ಲದೆ, ನಮ್ಮ ಸಿಗರೇಟ್​ ಎಲ್ಲೋಯ್ತು ಎಂದು ಪ್ರಶ್ನೆ ಮಾಡಿದ್ದಾರೆ.

ಅರವಿಂದ್​ ಒಬ್ಬರಿಗೆ ಮಾತ್ರ ಸಿಗರೇಟ್​ ಕಳುಹಿಸಿ ನಮಗೆ ಸಿಗರೇಟ್​ ಕಳುಹಿಸಿಲ್ಲ ಅಂದರೆ ಏನರ್ಥ? ನಮಗೆ ಕೊಟ್ಟಿದ್ದ ಸಿಗರೇಟ್​ ಪ್ಯಾಕ್​ಅನ್ನು ಬೇರೆಯಾರೋ ಕದ್ದಿದ್ದಾರೆ ಎನಿಸುತ್ತದೆ ಎಂದು ಮಂಜು ಎಲ್ಲರ ಮೇಲೂ ಅನುಮಾನಪಟ್ಟರು. ಬಿಗ್​ ಬಾಸ್​ ನಮಗೆ ಇನ್ನೂ ಸಿಗರೇಟ್​ ಕಳಿಸಿರದೇ ಇರಬಹುದು. ಕಾಯೋಣ ಎನ್ನುವ ಉತ್ತರ ಕೆಲವರಿಂದ ಬಂತು.

ಈ ವೇಳೆ ರಘು, ನೀವು ಸಿಗರೇಟ್​ ಜತೆ ಆಡ್ತಿಲ್ಲ. ನಮ್ಮ ಭಾವನೆಗಳ ಜತೆ ಆಟ ಆಡ್ತಾ ಇದೀರಾ. ಭಾವನೆಗಳ ಜತೆ ಆಟ ಆಡಬೇಡಿ ಎಂದು ನಗುತ್ತಲೇ ಎಚ್ಚರಿಕೆ ನೀಡಿದರು. ಕೆಲ ಹೊತ್ತು ಒಬ್ಬರ ಮೇಲೆ ಒಬ್ಬರು ಆರೋಪ ಮಾಡಿಕೊಳ್ಳುವುದು ನಡೆದೇ ಇತ್ತು. ಕೊನೆಗೆ ಶುಭಾ ಪೂಂಜಾ ಅಡಗಿಸಿಟ್ಟ ಸಿಗರೇಟ್​ಗಳನ್ನು ನೀಡಿದರು. ಈ ವೇಳೆ ಪ್ರಶಾಂತ್​, ಇದೇ ಕೆಲಸ ನಾನು ಮಾಡಿದ್ದರೆ ಇಷ್ಟು ಹೊತ್ತಿಗೆ ಮುಗಿದೇ ಹೋಗಿರುತ್ತಿತ್ತು ಎಂದು ನಕ್ಕರು.

ಇದನ್ನೂ ಓದಿ:  Shubha Poonja: ಶುಭಾ ಪೂಂಜಾ ಇಲ್ಲದಿರುವ ಜೀವನ ನನಗೂ ಬೇಡ; ರಘು ಗೌಡ ಹೀಗ್ಯಾಕಾದ್ರು?

Bigg Boss Kannada Elimination: ಎಂಟನೇ ವಾರ ಈ ಸ್ಪರ್ಧಿಯ ಬಿಗ್​ ಬಾಸ್​ ಪಯಣ ಅಂತ್ಯ?

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?