AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​​ ಸುಮಂತ್​ ಮೇಲೆ ಶುಭಾ ಪೂಂಜಾಗೆ ಶುರುವಾಗಿದೆ ಅನುಮಾನ; ಡೌಟ್​ ಡಬಲ್​ ಮಾಡಿದ ಸುದೀಪ್​

ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಈ ವೇಳೆ ಮಾತನಾಡಿದ್ದ ಶುಭಾ, ಸುಮಂತ್​ ನನ್ನನ್ನು ತುಂಬಾನೇ ಮಿಸ್​ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನ್ನಿಸುತ್ತದೆ ಎಂದಿದ್ದರು. ಇದಕ್ಕೆ ಉತ್ತರಿಸಿದ್ದ ಸುದೀಪ್​, ಓ ಭ್ರಮ ಎಂದರು.

ಬಾಯ್​ಫ್ರೆಂಡ್​​ ಸುಮಂತ್​ ಮೇಲೆ ಶುಭಾ ಪೂಂಜಾಗೆ ಶುರುವಾಗಿದೆ ಅನುಮಾನ; ಡೌಟ್​ ಡಬಲ್​ ಮಾಡಿದ ಸುದೀಪ್​
ರಾಜೇಶ್ ದುಗ್ಗುಮನೆ
|

Updated on: Mar 21, 2021 | 9:33 PM

Share

ಶುಭಾ ಅವರು ಸುಮಂತ್​ ಎಂಬುವವರನ್ನು ವಿವಾಹವಾಗುತ್ತಿದ್ದಾರೆ. ಅವರು ಹೇಳಿದ್ದಕ್ಕೇ ಬಿಗ್​ ಬಾಸ್​ ಮನೆಗೆ ಬಂದಿರುವುದಾಗಿ ಶುಭಾ ಹೇಳಿಕೊಂಡಿದ್ದರು. ಈಗ ಶುಭಾಗೆ ಸುಮಂತ್​ ಮೇಲೆ ಒಂದು ಸಣ್ಣ ಅನುಮಾನ ಶುರುವಾಗಿದೆ. ಅಷ್ಟೇ ಅಲ್ಲ, ಈ ಅನುಮಾನವನ್ನು ಕಿಚ್ಚ ಸುದೀಪ್​ ಡಬಲ್​ ಮಾಡಿದ್ದಾರೆ. ಇತ್ತೀಚೆಗೆ ಶುಭಾ ಕನಸಲ್ಲಿ ಸುಮಂತ್​ ಬಂದಿದ್ದರು ಎನ್ನುವ ವಿಚಾರ ಹೇಳಿಕೊಂಡಿದ್ದರು. ಈ ಬಗ್ಗೆ ಮನೆ ಮಂದಿ ಜತೆ ಮಾತನಾಡಿದ್ದ ಶುಭಾ, ನನಗೆ ನಿನ್ನೆ ಒಂದು ಕನಸು ಬಿದ್ದಿತ್ತು. ಆ ಕನಸಲ್ಲಿ ಸುಮಂತ್​ ಬಂದಿದ್ದರು. ಅವರು ಬಿಗ್​ ಬಾಸ್​ ಮನೆಗೆ ಬಂದಿದ್ದರು. ಮನೆಯಲ್ಲಿ ಅವರನ್ನು ಸುತ್ತಾಡಿಸಿದ್ದೆ. ಆದರೆ, ನೋಡಿದ್ರೆ ಒಂದೇ ಕ್ಷಣಕ್ಕೆ ಅದು ಹಳ್ಳಿ ಮನೆಯಾಗಿಬಿಟ್ಟಿತ್ತು. ಎಲ್ಲಾ ಸ್ಪರ್ಧಿಗಳು ಸಣ್ಣ ಸಣ್ಣ ಗೂಡಲ್ಲಿ ಅಡಗಿ ಕೂತಿದ್ದರು ಎಂದು ಕನಸಿನ ಬಗ್ಗೆ ಹೇಳಿಕೊಂಡಿದ್ದಾರೆ. ಈ ವೇಳೆ ಮಂಜು ಪಾವಗಡ, ನಾವು ಯಾರನ್ನು ಹೆಚ್ಚು ನೆನಪಿಸಿಕೊಳ್ಳುತ್ತೇವೋ ಅವರೇ ಕನಸಲ್ಲಿ ಬರುತ್ತಾರೆ ಎಂದಿದ್ದರು.

ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಈ ವೇಳೆ ಮಾತನಾಡಿದ್ದ ಶುಭಾ, ಸುಮಂತ್​ ನನ್ನನ್ನು ತುಂಬಾನೇ ಮಿಸ್​ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನ್ನಿಸುತ್ತದೆ ಎಂದಿದ್ದರು. ಇದಕ್ಕೆ ಉತ್ತರಿಸಿದ್ದ ಸುದೀಪ್​, ಓ ಭ್ರಮ ಎಂದರು.

ನಾವು ಏನೆ ನಡೆದರೂ ನಿಮಗೆ ಹೇಳಲ್ಲ ಬಿಡಿ. ನಮಗೆ ನಿಮ್ಮ ನಂಬಿಕೆ ಮುರಿದು ಹೋಗಬಾರದು ಅಷ್ಟೇ ಎಂದು ಶುಭಾ ತಲೆಯಲ್ಲಿ ಹುಳ ಬಿಟ್ಟರು ಸುದೀಪ್​. ಅವನು ಬೈಕ್​ನಲ್ಲಿ ಯಾರನ್ನಾದರೂ ಕೂರಿಸಿಕೊಂಡು ಹೋಗುತ್ತಿದ್ದರೇ ಎಂದು ಪ್ರಶ್ನೆ ಮಾಡಿದರು ಶುಭಾ. ಈ ವಿಚಾರ ತುಂಬಾನೇ ಚರ್ಚೆ ಆಗಿದೆ. ನಂತರ ಕೊನೆಯಲ್ಲಿ ಶುಭಾ, ಅವನು ಹಾಗೆಲ್ಲ ಮಾಡುವನಲ್ಲ ಎಂದಿದ್ದಾರೆ.

ಇದನ್ನೂ ಓದಿ: Bigg Boss Kannada: ಮನೆಯೊಳಗಿನ ಕಷ್ಟ ತಾಳಲಾರದೆ ಬಿಕ್ಕಿ ಬಿಕ್ಕಿ ಅತ್ತ ನಿಧಿ ಸುಬ್ಬಯ್ಯ, ಶುಭಾ ಪೂಂಜಾ!

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!