ಬಾಯ್​ಫ್ರೆಂಡ್​​ ಸುಮಂತ್​ ಮೇಲೆ ಶುಭಾ ಪೂಂಜಾಗೆ ಶುರುವಾಗಿದೆ ಅನುಮಾನ; ಡೌಟ್​ ಡಬಲ್​ ಮಾಡಿದ ಸುದೀಪ್​

ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಈ ವೇಳೆ ಮಾತನಾಡಿದ್ದ ಶುಭಾ, ಸುಮಂತ್​ ನನ್ನನ್ನು ತುಂಬಾನೇ ಮಿಸ್​ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನ್ನಿಸುತ್ತದೆ ಎಂದಿದ್ದರು. ಇದಕ್ಕೆ ಉತ್ತರಿಸಿದ್ದ ಸುದೀಪ್​, ಓ ಭ್ರಮ ಎಂದರು.

ಬಾಯ್​ಫ್ರೆಂಡ್​​ ಸುಮಂತ್​ ಮೇಲೆ ಶುಭಾ ಪೂಂಜಾಗೆ ಶುರುವಾಗಿದೆ ಅನುಮಾನ; ಡೌಟ್​ ಡಬಲ್​ ಮಾಡಿದ ಸುದೀಪ್​
Follow us
|

Updated on: Mar 21, 2021 | 9:33 PM

ಶುಭಾ ಅವರು ಸುಮಂತ್​ ಎಂಬುವವರನ್ನು ವಿವಾಹವಾಗುತ್ತಿದ್ದಾರೆ. ಅವರು ಹೇಳಿದ್ದಕ್ಕೇ ಬಿಗ್​ ಬಾಸ್​ ಮನೆಗೆ ಬಂದಿರುವುದಾಗಿ ಶುಭಾ ಹೇಳಿಕೊಂಡಿದ್ದರು. ಈಗ ಶುಭಾಗೆ ಸುಮಂತ್​ ಮೇಲೆ ಒಂದು ಸಣ್ಣ ಅನುಮಾನ ಶುರುವಾಗಿದೆ. ಅಷ್ಟೇ ಅಲ್ಲ, ಈ ಅನುಮಾನವನ್ನು ಕಿಚ್ಚ ಸುದೀಪ್​ ಡಬಲ್​ ಮಾಡಿದ್ದಾರೆ. ಇತ್ತೀಚೆಗೆ ಶುಭಾ ಕನಸಲ್ಲಿ ಸುಮಂತ್​ ಬಂದಿದ್ದರು ಎನ್ನುವ ವಿಚಾರ ಹೇಳಿಕೊಂಡಿದ್ದರು. ಈ ಬಗ್ಗೆ ಮನೆ ಮಂದಿ ಜತೆ ಮಾತನಾಡಿದ್ದ ಶುಭಾ, ನನಗೆ ನಿನ್ನೆ ಒಂದು ಕನಸು ಬಿದ್ದಿತ್ತು. ಆ ಕನಸಲ್ಲಿ ಸುಮಂತ್​ ಬಂದಿದ್ದರು. ಅವರು ಬಿಗ್​ ಬಾಸ್​ ಮನೆಗೆ ಬಂದಿದ್ದರು. ಮನೆಯಲ್ಲಿ ಅವರನ್ನು ಸುತ್ತಾಡಿಸಿದ್ದೆ. ಆದರೆ, ನೋಡಿದ್ರೆ ಒಂದೇ ಕ್ಷಣಕ್ಕೆ ಅದು ಹಳ್ಳಿ ಮನೆಯಾಗಿಬಿಟ್ಟಿತ್ತು. ಎಲ್ಲಾ ಸ್ಪರ್ಧಿಗಳು ಸಣ್ಣ ಸಣ್ಣ ಗೂಡಲ್ಲಿ ಅಡಗಿ ಕೂತಿದ್ದರು ಎಂದು ಕನಸಿನ ಬಗ್ಗೆ ಹೇಳಿಕೊಂಡಿದ್ದಾರೆ. ಈ ವೇಳೆ ಮಂಜು ಪಾವಗಡ, ನಾವು ಯಾರನ್ನು ಹೆಚ್ಚು ನೆನಪಿಸಿಕೊಳ್ಳುತ್ತೇವೋ ಅವರೇ ಕನಸಲ್ಲಿ ಬರುತ್ತಾರೆ ಎಂದಿದ್ದರು.

ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಈ ವೇಳೆ ಮಾತನಾಡಿದ್ದ ಶುಭಾ, ಸುಮಂತ್​ ನನ್ನನ್ನು ತುಂಬಾನೇ ಮಿಸ್​ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನ್ನಿಸುತ್ತದೆ ಎಂದಿದ್ದರು. ಇದಕ್ಕೆ ಉತ್ತರಿಸಿದ್ದ ಸುದೀಪ್​, ಓ ಭ್ರಮ ಎಂದರು.

ನಾವು ಏನೆ ನಡೆದರೂ ನಿಮಗೆ ಹೇಳಲ್ಲ ಬಿಡಿ. ನಮಗೆ ನಿಮ್ಮ ನಂಬಿಕೆ ಮುರಿದು ಹೋಗಬಾರದು ಅಷ್ಟೇ ಎಂದು ಶುಭಾ ತಲೆಯಲ್ಲಿ ಹುಳ ಬಿಟ್ಟರು ಸುದೀಪ್​. ಅವನು ಬೈಕ್​ನಲ್ಲಿ ಯಾರನ್ನಾದರೂ ಕೂರಿಸಿಕೊಂಡು ಹೋಗುತ್ತಿದ್ದರೇ ಎಂದು ಪ್ರಶ್ನೆ ಮಾಡಿದರು ಶುಭಾ. ಈ ವಿಚಾರ ತುಂಬಾನೇ ಚರ್ಚೆ ಆಗಿದೆ. ನಂತರ ಕೊನೆಯಲ್ಲಿ ಶುಭಾ, ಅವನು ಹಾಗೆಲ್ಲ ಮಾಡುವನಲ್ಲ ಎಂದಿದ್ದಾರೆ.

ಇದನ್ನೂ ಓದಿ: Bigg Boss Kannada: ಮನೆಯೊಳಗಿನ ಕಷ್ಟ ತಾಳಲಾರದೆ ಬಿಕ್ಕಿ ಬಿಕ್ಕಿ ಅತ್ತ ನಿಧಿ ಸುಬ್ಬಯ್ಯ, ಶುಭಾ ಪೂಂಜಾ!

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ