AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​​ ಸುಮಂತ್​ ಮೇಲೆ ಶುಭಾ ಪೂಂಜಾಗೆ ಶುರುವಾಗಿದೆ ಅನುಮಾನ; ಡೌಟ್​ ಡಬಲ್​ ಮಾಡಿದ ಸುದೀಪ್​

ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಈ ವೇಳೆ ಮಾತನಾಡಿದ್ದ ಶುಭಾ, ಸುಮಂತ್​ ನನ್ನನ್ನು ತುಂಬಾನೇ ಮಿಸ್​ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನ್ನಿಸುತ್ತದೆ ಎಂದಿದ್ದರು. ಇದಕ್ಕೆ ಉತ್ತರಿಸಿದ್ದ ಸುದೀಪ್​, ಓ ಭ್ರಮ ಎಂದರು.

ಬಾಯ್​ಫ್ರೆಂಡ್​​ ಸುಮಂತ್​ ಮೇಲೆ ಶುಭಾ ಪೂಂಜಾಗೆ ಶುರುವಾಗಿದೆ ಅನುಮಾನ; ಡೌಟ್​ ಡಬಲ್​ ಮಾಡಿದ ಸುದೀಪ್​
ರಾಜೇಶ್ ದುಗ್ಗುಮನೆ
|

Updated on: Mar 21, 2021 | 9:33 PM

Share

ಶುಭಾ ಅವರು ಸುಮಂತ್​ ಎಂಬುವವರನ್ನು ವಿವಾಹವಾಗುತ್ತಿದ್ದಾರೆ. ಅವರು ಹೇಳಿದ್ದಕ್ಕೇ ಬಿಗ್​ ಬಾಸ್​ ಮನೆಗೆ ಬಂದಿರುವುದಾಗಿ ಶುಭಾ ಹೇಳಿಕೊಂಡಿದ್ದರು. ಈಗ ಶುಭಾಗೆ ಸುಮಂತ್​ ಮೇಲೆ ಒಂದು ಸಣ್ಣ ಅನುಮಾನ ಶುರುವಾಗಿದೆ. ಅಷ್ಟೇ ಅಲ್ಲ, ಈ ಅನುಮಾನವನ್ನು ಕಿಚ್ಚ ಸುದೀಪ್​ ಡಬಲ್​ ಮಾಡಿದ್ದಾರೆ. ಇತ್ತೀಚೆಗೆ ಶುಭಾ ಕನಸಲ್ಲಿ ಸುಮಂತ್​ ಬಂದಿದ್ದರು ಎನ್ನುವ ವಿಚಾರ ಹೇಳಿಕೊಂಡಿದ್ದರು. ಈ ಬಗ್ಗೆ ಮನೆ ಮಂದಿ ಜತೆ ಮಾತನಾಡಿದ್ದ ಶುಭಾ, ನನಗೆ ನಿನ್ನೆ ಒಂದು ಕನಸು ಬಿದ್ದಿತ್ತು. ಆ ಕನಸಲ್ಲಿ ಸುಮಂತ್​ ಬಂದಿದ್ದರು. ಅವರು ಬಿಗ್​ ಬಾಸ್​ ಮನೆಗೆ ಬಂದಿದ್ದರು. ಮನೆಯಲ್ಲಿ ಅವರನ್ನು ಸುತ್ತಾಡಿಸಿದ್ದೆ. ಆದರೆ, ನೋಡಿದ್ರೆ ಒಂದೇ ಕ್ಷಣಕ್ಕೆ ಅದು ಹಳ್ಳಿ ಮನೆಯಾಗಿಬಿಟ್ಟಿತ್ತು. ಎಲ್ಲಾ ಸ್ಪರ್ಧಿಗಳು ಸಣ್ಣ ಸಣ್ಣ ಗೂಡಲ್ಲಿ ಅಡಗಿ ಕೂತಿದ್ದರು ಎಂದು ಕನಸಿನ ಬಗ್ಗೆ ಹೇಳಿಕೊಂಡಿದ್ದಾರೆ. ಈ ವೇಳೆ ಮಂಜು ಪಾವಗಡ, ನಾವು ಯಾರನ್ನು ಹೆಚ್ಚು ನೆನಪಿಸಿಕೊಳ್ಳುತ್ತೇವೋ ಅವರೇ ಕನಸಲ್ಲಿ ಬರುತ್ತಾರೆ ಎಂದಿದ್ದರು.

ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಈ ವೇಳೆ ಮಾತನಾಡಿದ್ದ ಶುಭಾ, ಸುಮಂತ್​ ನನ್ನನ್ನು ತುಂಬಾನೇ ಮಿಸ್​ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನ್ನಿಸುತ್ತದೆ ಎಂದಿದ್ದರು. ಇದಕ್ಕೆ ಉತ್ತರಿಸಿದ್ದ ಸುದೀಪ್​, ಓ ಭ್ರಮ ಎಂದರು.

ನಾವು ಏನೆ ನಡೆದರೂ ನಿಮಗೆ ಹೇಳಲ್ಲ ಬಿಡಿ. ನಮಗೆ ನಿಮ್ಮ ನಂಬಿಕೆ ಮುರಿದು ಹೋಗಬಾರದು ಅಷ್ಟೇ ಎಂದು ಶುಭಾ ತಲೆಯಲ್ಲಿ ಹುಳ ಬಿಟ್ಟರು ಸುದೀಪ್​. ಅವನು ಬೈಕ್​ನಲ್ಲಿ ಯಾರನ್ನಾದರೂ ಕೂರಿಸಿಕೊಂಡು ಹೋಗುತ್ತಿದ್ದರೇ ಎಂದು ಪ್ರಶ್ನೆ ಮಾಡಿದರು ಶುಭಾ. ಈ ವಿಚಾರ ತುಂಬಾನೇ ಚರ್ಚೆ ಆಗಿದೆ. ನಂತರ ಕೊನೆಯಲ್ಲಿ ಶುಭಾ, ಅವನು ಹಾಗೆಲ್ಲ ಮಾಡುವನಲ್ಲ ಎಂದಿದ್ದಾರೆ.

ಇದನ್ನೂ ಓದಿ: Bigg Boss Kannada: ಮನೆಯೊಳಗಿನ ಕಷ್ಟ ತಾಳಲಾರದೆ ಬಿಕ್ಕಿ ಬಿಕ್ಕಿ ಅತ್ತ ನಿಧಿ ಸುಬ್ಬಯ್ಯ, ಶುಭಾ ಪೂಂಜಾ!

ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ