AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಎದುರು ಶುಭಾ ಪೂಂಜಾ ಇಟ್ಟ ಬೇಡಿಕೆ ನೋಡಿ ಮನೆಯವರಿಗೆ ಅಳಬೇಕೋ ನಗಬೇಕೋ ಗೊತ್ತಾಗ್ತಿಲ್ಲ

ಬಿಗ್​ ಬಾಸ್​ ಮನೆ ಸೇರಿದಾಗಿನಿಂದಲೂ ಶುಭಾ ಪೂಂಜಾ ಒಂದಲ್ಲಾ ಒಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇದ್ದಾರೆ. ಅವರು ನಿತ್ಯ ಬಿಗ್​ ಬಾಸ್​ ಎದುರು ಹೊಸ ಹೊಸ ಬೇಡಿಕೆ ಇಡುತ್ತಿದ್ದಾರೆ.

ಬಿಗ್​ ಬಾಸ್​ ಎದುರು ಶುಭಾ ಪೂಂಜಾ ಇಟ್ಟ ಬೇಡಿಕೆ ನೋಡಿ ಮನೆಯವರಿಗೆ ಅಳಬೇಕೋ ನಗಬೇಕೋ ಗೊತ್ತಾಗ್ತಿಲ್ಲ
ಶುಭಾ ಫೂಂಜಾ
ರಾಜೇಶ್ ದುಗ್ಗುಮನೆ
|

Updated on: Apr 28, 2021 | 6:22 PM

Share

ಬಿಗ್​ ಬಾಸ್​ ಎಂಟನೇ ಸೀಸನ್​ ದಿನ ಕಳೆದಂತೆ ರಂಗೇರುತ್ತಿದೆ. ಮನೆಯಲ್ಲಿ ಸಾಕಷ್ಟು ಗುಂಪುಗಳು ಹುಟ್ಟಿಕೊಂಡಿವೆ. ಇದರಿಂದ ಸ್ಪರ್ಧಿಗಳ ನಡುವೆ ಜಗಳ ಹೆಚ್ಚುತ್ತಿದೆ ಎಂಬುದು ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ಆರೋಪ. ಮನೆಯಲ್ಲಿ ನಡೆಯುವ ಪ್ರತಿ ವಿಚಾರಗಳು ವೀಕ್ಷಕರ ಗಮನ ಸೆಳೆಯುತ್ತಲೇ ಇದೆ. ಈ ಮಧ್ಯೆ ಸ್ಪರ್ಧಿಗಳು ಇಡುವ ಚಿತ್ರ ವಿಚಿತ್ರ ಬೇಡಿಕೆಗಳು ವೀಕ್ಷಕರಿಗೆ ಮನರಂಜನೆ ನೀಡುತ್ತಿವೆ. ಬಿಗ್​ ಬಾಸ್ ಮನೆಯಲ್ಲಿ ಶುಭಾ ಪೂಂಜಾ ಇಟ್ಟ ಹೊಸ ಬೇಡಿಕೆ ಕೇಳಿ ಮನೆಯವರಿಗೆ ಅಳಬೇಕೋ ಅಥವಾ ನಗಬೇಕೋ ಎಂದು ಗೊತ್ತಾಗುತ್ತಿಲ್ಲ.

ಬಿಗ್​ ಬಾಸ್​ ಮನೆ ಸೇರಿದಾಗಿನಿಂದಲೂ ಶುಭಾ ಪೂಂಜಾ ಒಂದಲ್ಲಾ ಒಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇದ್ದಾರೆ. ಅವರು ನಿತ್ಯ ಬಿಗ್​ ಬಾಸ್​ ಎದುರು ಹೊಸ ಹೊಸ ಬೇಡಿಕೆ ಇಡುತ್ತಿದ್ದಾರೆ. ಬಿಗ್​ ಬಾಸ್​ ಎಲ್ಲಾ ಸವಲತ್ತುಗಳನ್ನು ಕಿತ್ತುಕೊಂಡಾಗ, ಬಿಗ್​ ಬಾಸ್​ ನನಗೆ ಪುರಿ-ಸಾಗೂ ಕಳುಹಿಸಿ, ಬ್ರಶ್​ ಕಳುಹಿಸಿ ಎಂದು ಚಿಕ್ಕ ಮಕ್ಕಳಂತೆ ಗೋಗರೆದಿದ್ದರು. ಇದನ್ನು ನೋಡಿದ ದಿವ್ಯಾ ಉರುಡುಗ ಚಿಕ್ಕ ಮಗುವಿನಂತೆ ಶುಭಾ ಅವರನ್ನು ಮುದ್ದಾಡಿದ್ದರು.

ಈಗ ಬಿಗ್​ ಬಾಸ್​ ಎದುರು ಶುಭಾ ಹೊಸ ಬೇಡಿಕೆ ಇಟ್ಟಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕಕ ಜಾಲತಾಣದಲ್ಲಿ ಅನ್​ ಸೀನ್​ ವಿಡಿಯೋ ಒಂದನ್ನು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಶುಭಾ ಕಡಲೇ ಕಾಯಿ ಬೇಕು ಎಂದು ಕೇಳಿದ್ದಾರೆ. ಶುಭಾ ಅವರ ವಿಚಿತ್ರ ಬೇಡಿಕೆ ಕೇಳಿ ಮನೆ ಮಂದಿ ಕಂಗಾಲಾಗಿದ್ದಾರೆ.

ಶುಭಾಗೆ ಆಗಾಗ ಹಸಿವಾಗುತ್ತದೆ. ಈ ಹಸಿವನ್ನು ನೀಗಿಸಿಕೊಳ್ಳೋಕೆ ಅವರು ಮಾರ್ಗ ಹುಡುಕುತ್ತಿದ್ದಾರೆ. ಈ ಕಾರಣಕ್ಕೆ ಅವರು, ಬಿಗ್ ಬಾಸ್​ ಮನೆಯಲ್ಲಿ ಕಡಲೆಕಾಯಿ ಇಡಬಹುದಿತ್ತು ಎಂದಿದ್ದಾರೆ. ಇದು ಮನೆಯವರಿಗೆ  ಸಿಲ್ಲಿ ಬೇಡಿಕೆ ಎನಿಸಿದೆ. ಈ ಬಗ್ಗೆ ಮಾತನಾಡಿದ ಅರವಿಂದ್ ಕೆ.ಪಿ., ಹೌದು ನಿನನಗೆ ಕಡಲೆಕಾಯಿ, ಚುರಮುರಿ ಎಲ್ಲವನ್ನೂ ಇಡುತ್ತಾರೆ ಎಂದು ನಕ್ಕಿದ್ದಾರೆ. ಆಗ ಶುಭಾ, ನಾವೇನೂ ಹೆಚ್ಚು ಕೇಳುತ್ತಿಲ್ಲ. ಚಿಕ್ಕ ಪೊಟ್ಟಣದಲ್ಲಿ ಕಡಲೆಕಾಯಿ ನೀಡಿದರೆ ಸಾಕಿತ್ತು. ಆದರೆ, ಬಿಗ್​ ಬಾಸ್​ ಅದನ್ನು ಕೊಡುತ್ತಿಲ್ಲ. ಇದನ್ನು ಕೇಳಿ ನನಗೆ ತುಂಬಾನೇ ಬೇಸರವಾಯಿತು ಎಂದು ಶುಭಾ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಶುಭಾ ಪೂಂಜಾ ಮೇಲೆ ಕಣ್ಣಿಟ್ಟ ಪ್ರಶಾಂತ್​ ಸಂಬರಗಿ; ವೀಕೆಂಡ್​ನಲ್ಲಿ ಕಾದಿದೆ ಟ್ವಿಸ್ಟ್​

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ