AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubha Poonja: ಈ ವಾರ ಸೇಫ್​ ಆದ ಶುಭಾ ಪೂಂಜಾಗೆ ಕಿಚ್ಚ ಸುದೀಪ್​ ಕಡೆಯಿಂದ ಸರ್​ಪ್ರೈಸ್​ ಗಿಫ್ಟ್

ಬಿಗ್​ ಬಾಸ್​ನ ಸೂಪರ್ ಸಂಡೆ ವಿತ್ ಸುದೀಪ ಕಾರ್ಯಕ್ರಮದಲ್ಲಿ ಸುದೀಪ್​ ಮಾತನಾಡಿದ್ದಾರೆ. ಈ ವಿಡಿಯೋವನ್ನು ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

Shubha Poonja: ಈ ವಾರ ಸೇಫ್​ ಆದ ಶುಭಾ ಪೂಂಜಾಗೆ ಕಿಚ್ಚ ಸುದೀಪ್​ ಕಡೆಯಿಂದ ಸರ್​ಪ್ರೈಸ್​ ಗಿಫ್ಟ್
ಶುಭಾ ಪೂಂಜಾ
ರಾಜೇಶ್ ದುಗ್ಗುಮನೆ
| Edited By: |

Updated on: Mar 14, 2021 | 6:50 PM

Share

ವೀಕೆಂಡ್​ ಬಂತೆಂದರೆ ಬಿಗ್​ ಬಾಸ್​ ಮನೆಗೆ ವಿಶೇಷ ಕಳೆ ಬರುತ್ತದೆ. ಕಿಚ್ಚ ಸುದೀಪ್​ ಬರೋದೇ ಇದಕ್ಕೆ ಕಾರಣ. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಎರಡನೇ ವಾರ ಪೂರ್ಣಗೊಳಿಸುತ್ತಿದೆ. ಈ ವಾರ ಬಿಗ್​ ಬಾಸ್​ ಮನೆಯಿಂದ ಯಾರು ಹೊರ ಹೋಗುತ್ತಾರೆ ಅನ್ನೋದು ಸದ್ಯದ ಕುತೂಹಲ. ಈ ಕುತೂಹಲಗಳ ಮಧ್ಯೆಯೇ ವಾರಾಂತ್ಯದಲ್ಲಿ ಕಿಚ್ಚ ಸುದೀಪ್​ ಶುಭಾ ಪೂಂಜಾ ಬೆನ್ನು ತಟ್ಟಿದ್ದಾರೆ. ಎರಡನೇ ವಾರ ನೇರವಾಗಿ ನಾಮಿನೇಟ್​ ಆದವರ ಸಾಲಿನಲ್ಲಿ ಪೂಜಾ ಇದ್ದರು. ಆದರೆ, ಅವರು ಮನೆಯಲ್ಲಿ ಸ್ಪರ್ಧಾತ್ಮಕವಾಗಿ ಆಡಿದ್ದು ಎಲ್ಲರ ಮೆಚ್ಚುಗೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ, ಟಾಸ್ಕ್​ ವಿಚಾರ ಬಂದಾಗಲೂ ಎಲ್ಲರನ್ನೂ ಒಂದೇ ರೀತಿ ಕಂಡಿದ್ದರು. ಎದುರಾಳಿಗಳಿಗೂ ಟಿಪ್ಸ್​ ನೀಡಿದ್ದರು ಶುಭಾ. ಇದು ಸುದೀಪ್​ಗೆ ಇಷ್ಟವಾಗಿದೆ. ಹೀಗಾಗಿ, ಶುಭಾಗೆ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿ ಚಪ್ಪಾಳೆ ತಟ್ಟಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಈ ವಾರ ಯಾರು ಸೇಫ್​ ಆಗುತ್ತಾರೆ ಎನ್ನುವ ವಿಚಾರವನ್ನು ಮನೆ ಸದಸ್ಯರಿಗೆ ಕೇಳಿದಾಗ ಬಹುತೇಕರು ಶುಭಾ ಅವರ ಹೆಸರನ್ನು ಹೇಳಿದ್ದರು. ಅಂತೆಯೇ ಶುಭಾ ಸೇಫ್​ ಆದರು. ಸೇಫ್​ ಆಗುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಶುಭಾ ಕುಣಿದು ಕುಪ್ಪಳಿಸಿದ್ದಾರೆ.

ಬಿಗ್​ ಬಾಸ್​ನ ಸೂಪರ್ ಸಂಡೆ ವಿತ್ ಸುದೀಪ ಕಾರ್ಯಕ್ರಮದಲ್ಲಿ ಸುದೀಪ್​ ಮಾತನಾಡಿದ್ದಾರೆ. ಈ ವಿಡಿಯೋವನ್ನು ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಈ ವಾರ ಒಬ್ಬರು ಆಲ್​ರೌಂಡರ್​ ಸಿಕ್ಕಿದ್ರು ಅಂತ ನನಗನ್ನಿಸಿತು. ಆಟ ಆಡುವಾಗ ಮನಸ್ಸಿಟ್ಟು ಆಡಿದರು. ತಪ್ಪು ಮಾಡಿದಾಗ ಒಪ್ಪಿಕೊಂಡರು. ಬೇರೆಯವರು ತಪ್ಪು ಮಾಡಿದಾಗ ನೇರವಾಗಿ ಹೇಳಿದರು. ಸೈಡ್​ಗೆ ಕರೆದು ತಿದ್ದಿದರು. ಚಿಕ್ಕ ಚಿಕ್ಕ ವಿಚಾರಗಳನ್ನು ದೊಡ್ಡದಾಗಿ ತೆಗೆದುಕೊಳ್ಳಲ್ಲ. ಅವರು ಬಹಳಾನೇ ಪ್ರಾಮಾಣಿಕ. ಅವರು ಬೇರಾರು ಅಲ್ಲ ನಮ್ಮ ಗಾಬರಿ ಗೋಪಾಲಮ್ಮ ಶುಭಾ ಪೂಂಜಾ ಎಂದರು ಸುದೀಪ್​. ಈ ಮೂಲಕ ಸುದೀಪ್ ಈ ವಾರದ ಚಪ್ಪಾಳೆಯನ್ನು​​ ಶುಭಾಗೆ ನೀಡಿದರು. ಇದು ಅವರಿಗೆ ಸರ್​ಪ್ರೈಸ್ ಗಿಫ್ಟ್​ ಸಿಕ್ಕಂತಾಗಿದೆ.

ಇದನ್ನೂ ಓದಿ: Bigg Boss Kannada 8: ಬಿಗ್​ ಬಾಸ್​​ನಲ್ಲಿರುವ ಶುಭಾ ಪೂಂಜಾಗೆ ಅಶ್ಲೀಲ ಕಮೆಂಟ್​; ನಿಮಗೂ ಅಕ್ಕ-ತಂಗಿ ಇದ್ದಾರೆ ಅಲ್ವೇ? ನಟಿ ಪ್ರಶ್ನೆ!

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?