AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubha Poonja: ಈ ವಾರ ಸೇಫ್​ ಆದ ಶುಭಾ ಪೂಂಜಾಗೆ ಕಿಚ್ಚ ಸುದೀಪ್​ ಕಡೆಯಿಂದ ಸರ್​ಪ್ರೈಸ್​ ಗಿಫ್ಟ್

ಬಿಗ್​ ಬಾಸ್​ನ ಸೂಪರ್ ಸಂಡೆ ವಿತ್ ಸುದೀಪ ಕಾರ್ಯಕ್ರಮದಲ್ಲಿ ಸುದೀಪ್​ ಮಾತನಾಡಿದ್ದಾರೆ. ಈ ವಿಡಿಯೋವನ್ನು ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

Shubha Poonja: ಈ ವಾರ ಸೇಫ್​ ಆದ ಶುಭಾ ಪೂಂಜಾಗೆ ಕಿಚ್ಚ ಸುದೀಪ್​ ಕಡೆಯಿಂದ ಸರ್​ಪ್ರೈಸ್​ ಗಿಫ್ಟ್
ಶುಭಾ ಪೂಂಜಾ
ರಾಜೇಶ್ ದುಗ್ಗುಮನೆ
| Edited By: |

Updated on: Mar 14, 2021 | 6:50 PM

Share

ವೀಕೆಂಡ್​ ಬಂತೆಂದರೆ ಬಿಗ್​ ಬಾಸ್​ ಮನೆಗೆ ವಿಶೇಷ ಕಳೆ ಬರುತ್ತದೆ. ಕಿಚ್ಚ ಸುದೀಪ್​ ಬರೋದೇ ಇದಕ್ಕೆ ಕಾರಣ. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಎರಡನೇ ವಾರ ಪೂರ್ಣಗೊಳಿಸುತ್ತಿದೆ. ಈ ವಾರ ಬಿಗ್​ ಬಾಸ್​ ಮನೆಯಿಂದ ಯಾರು ಹೊರ ಹೋಗುತ್ತಾರೆ ಅನ್ನೋದು ಸದ್ಯದ ಕುತೂಹಲ. ಈ ಕುತೂಹಲಗಳ ಮಧ್ಯೆಯೇ ವಾರಾಂತ್ಯದಲ್ಲಿ ಕಿಚ್ಚ ಸುದೀಪ್​ ಶುಭಾ ಪೂಂಜಾ ಬೆನ್ನು ತಟ್ಟಿದ್ದಾರೆ. ಎರಡನೇ ವಾರ ನೇರವಾಗಿ ನಾಮಿನೇಟ್​ ಆದವರ ಸಾಲಿನಲ್ಲಿ ಪೂಜಾ ಇದ್ದರು. ಆದರೆ, ಅವರು ಮನೆಯಲ್ಲಿ ಸ್ಪರ್ಧಾತ್ಮಕವಾಗಿ ಆಡಿದ್ದು ಎಲ್ಲರ ಮೆಚ್ಚುಗೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ, ಟಾಸ್ಕ್​ ವಿಚಾರ ಬಂದಾಗಲೂ ಎಲ್ಲರನ್ನೂ ಒಂದೇ ರೀತಿ ಕಂಡಿದ್ದರು. ಎದುರಾಳಿಗಳಿಗೂ ಟಿಪ್ಸ್​ ನೀಡಿದ್ದರು ಶುಭಾ. ಇದು ಸುದೀಪ್​ಗೆ ಇಷ್ಟವಾಗಿದೆ. ಹೀಗಾಗಿ, ಶುಭಾಗೆ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿ ಚಪ್ಪಾಳೆ ತಟ್ಟಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಈ ವಾರ ಯಾರು ಸೇಫ್​ ಆಗುತ್ತಾರೆ ಎನ್ನುವ ವಿಚಾರವನ್ನು ಮನೆ ಸದಸ್ಯರಿಗೆ ಕೇಳಿದಾಗ ಬಹುತೇಕರು ಶುಭಾ ಅವರ ಹೆಸರನ್ನು ಹೇಳಿದ್ದರು. ಅಂತೆಯೇ ಶುಭಾ ಸೇಫ್​ ಆದರು. ಸೇಫ್​ ಆಗುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಶುಭಾ ಕುಣಿದು ಕುಪ್ಪಳಿಸಿದ್ದಾರೆ.

ಬಿಗ್​ ಬಾಸ್​ನ ಸೂಪರ್ ಸಂಡೆ ವಿತ್ ಸುದೀಪ ಕಾರ್ಯಕ್ರಮದಲ್ಲಿ ಸುದೀಪ್​ ಮಾತನಾಡಿದ್ದಾರೆ. ಈ ವಿಡಿಯೋವನ್ನು ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಈ ವಾರ ಒಬ್ಬರು ಆಲ್​ರೌಂಡರ್​ ಸಿಕ್ಕಿದ್ರು ಅಂತ ನನಗನ್ನಿಸಿತು. ಆಟ ಆಡುವಾಗ ಮನಸ್ಸಿಟ್ಟು ಆಡಿದರು. ತಪ್ಪು ಮಾಡಿದಾಗ ಒಪ್ಪಿಕೊಂಡರು. ಬೇರೆಯವರು ತಪ್ಪು ಮಾಡಿದಾಗ ನೇರವಾಗಿ ಹೇಳಿದರು. ಸೈಡ್​ಗೆ ಕರೆದು ತಿದ್ದಿದರು. ಚಿಕ್ಕ ಚಿಕ್ಕ ವಿಚಾರಗಳನ್ನು ದೊಡ್ಡದಾಗಿ ತೆಗೆದುಕೊಳ್ಳಲ್ಲ. ಅವರು ಬಹಳಾನೇ ಪ್ರಾಮಾಣಿಕ. ಅವರು ಬೇರಾರು ಅಲ್ಲ ನಮ್ಮ ಗಾಬರಿ ಗೋಪಾಲಮ್ಮ ಶುಭಾ ಪೂಂಜಾ ಎಂದರು ಸುದೀಪ್​. ಈ ಮೂಲಕ ಸುದೀಪ್ ಈ ವಾರದ ಚಪ್ಪಾಳೆಯನ್ನು​​ ಶುಭಾಗೆ ನೀಡಿದರು. ಇದು ಅವರಿಗೆ ಸರ್​ಪ್ರೈಸ್ ಗಿಫ್ಟ್​ ಸಿಕ್ಕಂತಾಗಿದೆ.

ಇದನ್ನೂ ಓದಿ: Bigg Boss Kannada 8: ಬಿಗ್​ ಬಾಸ್​​ನಲ್ಲಿರುವ ಶುಭಾ ಪೂಂಜಾಗೆ ಅಶ್ಲೀಲ ಕಮೆಂಟ್​; ನಿಮಗೂ ಅಕ್ಕ-ತಂಗಿ ಇದ್ದಾರೆ ಅಲ್ವೇ? ನಟಿ ಪ್ರಶ್ನೆ!

Follow Us
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!