AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubha Poonja: ಈ ವಾರ ಸೇಫ್​ ಆದ ಶುಭಾ ಪೂಂಜಾಗೆ ಕಿಚ್ಚ ಸುದೀಪ್​ ಕಡೆಯಿಂದ ಸರ್​ಪ್ರೈಸ್​ ಗಿಫ್ಟ್

ಬಿಗ್​ ಬಾಸ್​ನ ಸೂಪರ್ ಸಂಡೆ ವಿತ್ ಸುದೀಪ ಕಾರ್ಯಕ್ರಮದಲ್ಲಿ ಸುದೀಪ್​ ಮಾತನಾಡಿದ್ದಾರೆ. ಈ ವಿಡಿಯೋವನ್ನು ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

Shubha Poonja: ಈ ವಾರ ಸೇಫ್​ ಆದ ಶುಭಾ ಪೂಂಜಾಗೆ ಕಿಚ್ಚ ಸುದೀಪ್​ ಕಡೆಯಿಂದ ಸರ್​ಪ್ರೈಸ್​ ಗಿಫ್ಟ್
ಶುಭಾ ಪೂಂಜಾ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Mar 14, 2021 | 6:50 PM

Share

ವೀಕೆಂಡ್​ ಬಂತೆಂದರೆ ಬಿಗ್​ ಬಾಸ್​ ಮನೆಗೆ ವಿಶೇಷ ಕಳೆ ಬರುತ್ತದೆ. ಕಿಚ್ಚ ಸುದೀಪ್​ ಬರೋದೇ ಇದಕ್ಕೆ ಕಾರಣ. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಎರಡನೇ ವಾರ ಪೂರ್ಣಗೊಳಿಸುತ್ತಿದೆ. ಈ ವಾರ ಬಿಗ್​ ಬಾಸ್​ ಮನೆಯಿಂದ ಯಾರು ಹೊರ ಹೋಗುತ್ತಾರೆ ಅನ್ನೋದು ಸದ್ಯದ ಕುತೂಹಲ. ಈ ಕುತೂಹಲಗಳ ಮಧ್ಯೆಯೇ ವಾರಾಂತ್ಯದಲ್ಲಿ ಕಿಚ್ಚ ಸುದೀಪ್​ ಶುಭಾ ಪೂಂಜಾ ಬೆನ್ನು ತಟ್ಟಿದ್ದಾರೆ. ಎರಡನೇ ವಾರ ನೇರವಾಗಿ ನಾಮಿನೇಟ್​ ಆದವರ ಸಾಲಿನಲ್ಲಿ ಪೂಜಾ ಇದ್ದರು. ಆದರೆ, ಅವರು ಮನೆಯಲ್ಲಿ ಸ್ಪರ್ಧಾತ್ಮಕವಾಗಿ ಆಡಿದ್ದು ಎಲ್ಲರ ಮೆಚ್ಚುಗೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ, ಟಾಸ್ಕ್​ ವಿಚಾರ ಬಂದಾಗಲೂ ಎಲ್ಲರನ್ನೂ ಒಂದೇ ರೀತಿ ಕಂಡಿದ್ದರು. ಎದುರಾಳಿಗಳಿಗೂ ಟಿಪ್ಸ್​ ನೀಡಿದ್ದರು ಶುಭಾ. ಇದು ಸುದೀಪ್​ಗೆ ಇಷ್ಟವಾಗಿದೆ. ಹೀಗಾಗಿ, ಶುಭಾಗೆ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿ ಚಪ್ಪಾಳೆ ತಟ್ಟಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಈ ವಾರ ಯಾರು ಸೇಫ್​ ಆಗುತ್ತಾರೆ ಎನ್ನುವ ವಿಚಾರವನ್ನು ಮನೆ ಸದಸ್ಯರಿಗೆ ಕೇಳಿದಾಗ ಬಹುತೇಕರು ಶುಭಾ ಅವರ ಹೆಸರನ್ನು ಹೇಳಿದ್ದರು. ಅಂತೆಯೇ ಶುಭಾ ಸೇಫ್​ ಆದರು. ಸೇಫ್​ ಆಗುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಶುಭಾ ಕುಣಿದು ಕುಪ್ಪಳಿಸಿದ್ದಾರೆ.

ಬಿಗ್​ ಬಾಸ್​ನ ಸೂಪರ್ ಸಂಡೆ ವಿತ್ ಸುದೀಪ ಕಾರ್ಯಕ್ರಮದಲ್ಲಿ ಸುದೀಪ್​ ಮಾತನಾಡಿದ್ದಾರೆ. ಈ ವಿಡಿಯೋವನ್ನು ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಈ ವಾರ ಒಬ್ಬರು ಆಲ್​ರೌಂಡರ್​ ಸಿಕ್ಕಿದ್ರು ಅಂತ ನನಗನ್ನಿಸಿತು. ಆಟ ಆಡುವಾಗ ಮನಸ್ಸಿಟ್ಟು ಆಡಿದರು. ತಪ್ಪು ಮಾಡಿದಾಗ ಒಪ್ಪಿಕೊಂಡರು. ಬೇರೆಯವರು ತಪ್ಪು ಮಾಡಿದಾಗ ನೇರವಾಗಿ ಹೇಳಿದರು. ಸೈಡ್​ಗೆ ಕರೆದು ತಿದ್ದಿದರು. ಚಿಕ್ಕ ಚಿಕ್ಕ ವಿಚಾರಗಳನ್ನು ದೊಡ್ಡದಾಗಿ ತೆಗೆದುಕೊಳ್ಳಲ್ಲ. ಅವರು ಬಹಳಾನೇ ಪ್ರಾಮಾಣಿಕ. ಅವರು ಬೇರಾರು ಅಲ್ಲ ನಮ್ಮ ಗಾಬರಿ ಗೋಪಾಲಮ್ಮ ಶುಭಾ ಪೂಂಜಾ ಎಂದರು ಸುದೀಪ್​. ಈ ಮೂಲಕ ಸುದೀಪ್ ಈ ವಾರದ ಚಪ್ಪಾಳೆಯನ್ನು​​ ಶುಭಾಗೆ ನೀಡಿದರು. ಇದು ಅವರಿಗೆ ಸರ್​ಪ್ರೈಸ್ ಗಿಫ್ಟ್​ ಸಿಕ್ಕಂತಾಗಿದೆ.

ಇದನ್ನೂ ಓದಿ: Bigg Boss Kannada 8: ಬಿಗ್​ ಬಾಸ್​​ನಲ್ಲಿರುವ ಶುಭಾ ಪೂಂಜಾಗೆ ಅಶ್ಲೀಲ ಕಮೆಂಟ್​; ನಿಮಗೂ ಅಕ್ಕ-ತಂಗಿ ಇದ್ದಾರೆ ಅಲ್ವೇ? ನಟಿ ಪ್ರಶ್ನೆ!

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ