AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಬಗ್ಗೆ ಆ ರೀತಿ ಮಾತಾಡಬೇಡಿ’- ರಘು ವಿಚಾರದಲ್ಲಿ ವೈಷ್ಣವಿಗೆ ಘಾಸಿ ಮಾಡಿದ ಶುಭಾ ಪೂಂಜಾ!

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಕಿಚನ್​ನಲ್ಲಿ ಕೆಲಸ ಮಾಡುತ್ತಿದ್ದರು. ರಘು ಗೌಡ ಕೂಡ ಅಲ್ಲಿಯೇ ಇದ್ದರು. ಅಲ್ಲಿಗೆ ಬಂದ ಶುಭಾ ಪೂಂಜಾ ಆ್ಯಂಡ್​ ಗ್ಯಾಂಗ್​, ವೈಷ್ಣವಿ ಕಾಲೆಳೆಯೋಕೆ ಪ್ರಯತ್ನಿಸಿದರು.

'ನಮ್ಮ ಬಗ್ಗೆ ಆ ರೀತಿ ಮಾತಾಡಬೇಡಿ'- ರಘು ವಿಚಾರದಲ್ಲಿ ವೈಷ್ಣವಿಗೆ ಘಾಸಿ ಮಾಡಿದ ಶುಭಾ ಪೂಂಜಾ!
ರಘು-ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on: May 08, 2021 | 9:12 AM

Share

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಹಾಗೂ ರಘು ತುಂಬಾನೇ ಕ್ಲೋಸ್​ ಆಗಿದ್ದಾರೆ. ಇಬ್ಬರ ನಡುವೆ ಒಳ್ಳೆಯ ಗೆಳೆತನವಿದೆ. ಇದು ಬಿಗ್​ ಬಾಸ್​ ಸ್ಪರ್ಧಿಗಳಿಗೂ ಗೊತ್ತಿದೆ. ಇದೇ ವಿಚಾರ ಇಟ್ಟುಕೊಂಡು ಅವರಿಗೆ ಕೆಲವರು ಟಾಂಟ್​ ಕೊಟ್ಟಿದ್ದಿದೆ. ಈಗ ಮನೆಯಲ್ಲಿ ಈ ವಿಚಾರ ತುಂಬಾನೇ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಕಿಚನ್​ನಲ್ಲಿ ಕೆಲಸ ಮಾಡುತ್ತಿದ್ದರು. ರಘು ಗೌಡ ಕೂಡ ಅಲ್ಲಿಯೇ ಇದ್ದರು. ಅಲ್ಲಿಗೆ ಬಂದ ಶುಭಾ ಪೂಂಜಾ ಆ್ಯಂಡ್​ ಗ್ಯಾಂಗ್​, ವೈಷ್ಣವಿ ಕಾಲೆಳೆಯೋಕೆ ಪ್ರಯತ್ನಿಸಿದರು. ಆದರೆ, ಇದು ರಾಂಗ್​ ಆಗಿದೆ. ಈ ವಿಚಾರ ತುಂಬಾನೇ ಗಂಭೀರ ಸ್ವರೂಪ ಪಡೆದುಕೊಂಡಿತು. ಅಲ್ಲದೆ, ಶುಭಾಗೆ ವೈಷ್ಣವಿ ಎಚ್ಚರಿಕೆ ಕೂಡ ನೀಡಿದರು.

ಅಲ್ವೋ ರಘು ಕಿಚನ್​ನಲ್ಲೂ ವೈಷ್ಣವಿ ಜತೆಯಲ್ಲೇ ಇರುತ್ತೀಯಲ್ಲ. ಅಡುಗೆ ಮಾಡುವಾಗಲೂ ಅವಳ ಹಿಂದೇ ಇರಬೇಕಾ? ನೀವಿಬ್ಬರೇ ಹೋಗಿ ಒಂದು ಬಿಗ್​ ಬಾಸ್​ ಮಾಡಿಕೊಳ್ಳಿ ಎಂದು ಕೊಂಕಾಗಿ ಶುಭಾ ಮಾತಿಗೆ ಇಳಿದರು. ಇದು ವೈಷ್ಣವಿಗೆ ಬೇಸರ ಮೂಡಿಸಿದೆ. ತಮ್ಮಿಬ್ಬರ ಗೆಳೆತನ ಬೇರೆ ರೀತಿಯಲ್ಲ ಅರ್ಥ ಮಾಡಿಕೊಳ್ಳುತ್ತಿದ್ದಾರಾ ಎಂದು ಅವರಿಗೆ ಭಯವಾಗಿದೆ.

ಹೀಗಾಗಿ, ವೈಷ್ಣವಿ ದಯವಿಟ್ಟು ಆ ರೀತಿ ಮಾತನಾಡಬೇಡಿ. ಚೆನ್ನಾಗಿ ಕಾಣಿಸುವುದಿಲ್ಲ. ಅವರಿಗೆ ಮದುವೆಯಾಗಿ ಮಗುವಿದೆ ಎಂದು ಎಚ್ಚರಿಸಿದರು. ಈ ಹೇಳಿಕೆ ನಂತರದಲ್ಲಿ ಶುಭಾ ಸುಮ್ಮನಾದರು.

ಇದೇ ವೇಳೆ ಮನೆಯಲ್ಲಿ ಅನ್ನ ಕಡಿಮೆ ಆಯಿತು. ಊಟಕ್ಕೆ ತಡವಾಗುತ್ತಿದೆ ಎನ್ನುವ ಮಾತು ಕೂಡ ಕೇಳಿ ಬಂತು. ಕಿಚನ್​ ಡಿಪಾರ್ಟ್​ಮೆಂಟ್​ನಲ್ಲಿದ್ದಿದ್ದು ವೈಷ್ಣವಿ. ಹೀಗಾಗಿ, ಅವರಿಗೆ ಈ ವಿಚಾರವೂ ಬೇಸರ ತರಿಸಿತ್ತು. ಹೀಗಾಗಿ ಒಮ್ಮೆಲೇ ಅವರು ಅಳೋಕೆ ಪ್ರಾರಂಭಿಸಿದರು.

ಇದನ್ನೂ ಓದಿ: Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

ಇದೇ ಮೊದಲ ಬಾರಿಗೆ ವೈಷ್ಣವಿ ವಿರುದ್ಧ ಒಟ್ಟಾಗಿ ತಿರುಗಿಬಿದ್ದ ಮನೆ ಮಂದಿ; ಬಿಕ್ಕಿ ಬಿಕ್ಕಿ ಅತ್ತ ಸನ್ನಿಧಿ

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!