AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶುಭಾ ಲೆಕ್ಕಕ್ಕಿಲ್ಲ, ಸುಮ್ಮನೆ ಕೌಂಟ್​ಗೆ ಇಟ್ಟಿದ್ದಾರೆ’; ಈ ಬಿಗ್​ ಬಾಸ್​ ಸ್ಪರ್ಧಿಯ ಮಾತನ್ನು ನೀವು ಒಪ್ತೀರಾ?

ಶುಭಾ ಪೂಂಜಾ ಬಂದ ದಿನದಿಂದಲೂ ತಮ್ಮದೇ ಸ್ಟೈಲ್​ನಲ್ಲಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಮಕ್ಕಳಂತೆ ವರ್ತಿಸಿದ್ದೂ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ದೊಡ್ಮನೆಯಲ್ಲಿ ಅವರಿಗೆ ವೈರಿಗಳಿಲ್ಲ.

‘ಶುಭಾ ಲೆಕ್ಕಕ್ಕಿಲ್ಲ, ಸುಮ್ಮನೆ ಕೌಂಟ್​ಗೆ ಇಟ್ಟಿದ್ದಾರೆ’; ಈ ಬಿಗ್​ ಬಾಸ್​ ಸ್ಪರ್ಧಿಯ ಮಾತನ್ನು ನೀವು ಒಪ್ತೀರಾ?
ನಟಿ ಶುಭಾ ಪೂಂಜಾ
TV9 Web
| Edited By: |

Updated on: Jul 02, 2021 | 4:52 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್ 8’ರ ಎರಡನೇ ಇನ್ನಿಂಗ್ಸ್​ ದಿನ ಕಳೆದಂತೆ ಕುತೂಹಲ ಹೆಚ್ಚಿಸಿಕೊಳ್ಳುತ್ತಿದೆ. ಸ್ಪರ್ಧಿಗಳ ನಡುವೆ ಟಫ್​ ಫೈಟ್​ ಏರ್ಪಡುತ್ತಿದ್ದು, ಎಲ್ಲರೂ ಗೆಲ್ಲಲೇ ಬೇಕು ಎನ್ನುವ ಛಲಕ್ಕೆ ಬಿದ್ದಿದ್ದಾರೆ. ಆದರೆ, ಬಿಗ್​ ಬಾಸ್​ ಮನೆಯಲ್ಲಿ ಶುಭಾ ಪೂಂಜಾ ಮಾತ್ರ ಏನನ್ನೂ ಮಾಡುತ್ತಿಲ್ಲವಂತೆ. ಅವರನ್ನು ಕೇವಲ ಕೌಂಟ್​ಗೆ ಇಡಲಾಗಿದೆ ಎನ್ನುವ ಮಾತು ಬಿಗ್​ ಬಾಸ್​ ಸ್ಪರ್ಧಿಯಿಂದಲೇ ಬಂದಿದೆ.

ಶುಭಾ ಪೂಂಜಾ ಬಂದ ದಿನದಿಂದಲೂ ತಮ್ಮದೇ ಸ್ಟೈಲ್​ನಲ್ಲಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಮಕ್ಕಳಂತೆ ವರ್ತಿಸಿದ್ದೂ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ದೊಡ್ಮನೆಯಲ್ಲಿ ಅವರಿಗೆ ವೈರಿಗಳಿಲ್ಲ. ಎಲ್ಲರ ಜತೆಯೂ ಅವರು ಹೊಂದಿಕೊಂಡು ಹೋಗುತ್ತಿದ್ದಾರೆ. ಇದು ಕೆಲವರ ಕಣ್ಣು ಕುಕ್ಕಿದೆ.

ಬಿಗ್​ ಬಾಸ್​ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಹಾಗೂ ಪ್ರಶಾಂತ್​ ಸಂಬರಗಿ ಕುಳಿತು ಮಾತನಾಡುತ್ತಿದ್ದರು. ಸದ್ಯ, ಮನೆಯ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಅವರು ಚರ್ಚೆ ಮಾಡುತ್ತಿದ್ದರು. ಮನೆಯಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಮಧ್ಯೆಯೂ ಶಮಂತ್​ ಬ್ರೋ ಗೌಡ, ರಘು ಗೌಡ ಹಾಗೂ ಶುಭಾ ಎಲ್ಲರ ಜತೆಗೂ ಬೆರೆಯುತ್ತಿದ್ದಾರೆ. ಆದರೆ, ಇಲ್ಲಿ ಶುಭಾ ಲೆಕ್ಕಕ್ಕೇ ಇಲ್ಲ!

‘ಮನೆಯಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗಲ್ಲ. ರಘು, ಶಮಂತ್​ ಮಾತ್ರ ಎಲ್ಲರ ಜತೆಗೂ ಚೆನ್ನಾಗಿದ್ದಾರೆ’ ಎಂದರು ಚಕ್ರವರ್ತಿ. ‘ಶುಭಾ ಕೂಡ ಎಲ್ಲರ ಜತೆಗೆ ಬರೆಯುತ್ತಿದ್ದಾರೆ’ ಎಂದರು ಪ್ರಶಾಂತ್​. ‘ಬಿಗ್​ ಬಾಸ್​ನಲ್ಲಿ ಶುಭಾ ಲೆಕ್ಕಕ್ಕಿಲ್ಲ, ಸುಮ್ಮನೆ ಕೌಂಟ್​ಗೆ ಇಟ್ಟಿದ್ದಾರೆ’ ಎಂದು ಚಕ್ರವರ್ತಿ ತಮ್ಮ ಅಭಿಪ್ರಾಯ ತಿಳಿಸಿದರು. ‘ಹಾಗನ್ನಬೇಡ’ ಎಂದು ಹೇಳುವ ಮೂಲಕ ಶುಭಾ ಕೂಡ ಪ್ರಬಲ ಕ್ಯಾಂಡಿಡೇಟ್​ ಎಂಬುದನ್ನು ಪ್ರಶಾಂತ್​ ಹೇಳೋಕೆ ಹೋದರು. ಆದರೆ, ಇದನ್ನು ಚಕ್ರವರ್ತಿ ಒಪ್ಪಲೇ ಇಲ್ಲ. ‘ನೀನೇ ಹೇಳು ಅವಳು (ಶುಭಾ) ಯಾವುದಕ್ಕೆ ಲೆಕ್ಕಕ್ಕೆ ಇದ್ದಾಳೆ? ಆಟಕ್ಕೂ ಇಲ್ಲ, ತರ್ಕಕ್ಕೂ ಇಲ್ಲ’ ಎಂದು ಚಕ್ರವರ್ತಿ ತಮ್ಮ ವಾದ ಮಂಡಿಸಿದರು.

ಇದನ್ನೂ ಓದಿ:

ಹೆಗಲಮೇಲೆ ಕೈ ಹಾಕಲು ಬಂದ ಪ್ರಶಾಂತ್​ರನ್ನು ಸಿಟ್ಟಿನಿಂದ ತಳ್ಳಿದ ಚಕ್ರವರ್ತಿ; ಇಬ್ಬರ ನಡುವೆ ಮೂಡಿತು ವೈಮನಸ್ಸು

ಜೀವನದಲ್ಲಿ ಶುಭಾ ಪೂಂಜಾ ಕಳೆದುಕೊಂಡಿದ್ದ ಅಮೂಲ್ಯ ವ್ಯಕ್ತಿಗಳನ್ನು ಮರಳಿ ಕೊಡಿಸಿದ ಬಿಗ್​ ಬಾಸ್​; ಯಾರವರು?

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ