AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶುಭಾ ಲೆಕ್ಕಕ್ಕಿಲ್ಲ, ಸುಮ್ಮನೆ ಕೌಂಟ್​ಗೆ ಇಟ್ಟಿದ್ದಾರೆ’; ಈ ಬಿಗ್​ ಬಾಸ್​ ಸ್ಪರ್ಧಿಯ ಮಾತನ್ನು ನೀವು ಒಪ್ತೀರಾ?

ಶುಭಾ ಪೂಂಜಾ ಬಂದ ದಿನದಿಂದಲೂ ತಮ್ಮದೇ ಸ್ಟೈಲ್​ನಲ್ಲಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಮಕ್ಕಳಂತೆ ವರ್ತಿಸಿದ್ದೂ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ದೊಡ್ಮನೆಯಲ್ಲಿ ಅವರಿಗೆ ವೈರಿಗಳಿಲ್ಲ.

‘ಶುಭಾ ಲೆಕ್ಕಕ್ಕಿಲ್ಲ, ಸುಮ್ಮನೆ ಕೌಂಟ್​ಗೆ ಇಟ್ಟಿದ್ದಾರೆ’; ಈ ಬಿಗ್​ ಬಾಸ್​ ಸ್ಪರ್ಧಿಯ ಮಾತನ್ನು ನೀವು ಒಪ್ತೀರಾ?
ನಟಿ ಶುಭಾ ಪೂಂಜಾ
TV9 Web
| Edited By: |

Updated on: Jul 02, 2021 | 4:52 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್ 8’ರ ಎರಡನೇ ಇನ್ನಿಂಗ್ಸ್​ ದಿನ ಕಳೆದಂತೆ ಕುತೂಹಲ ಹೆಚ್ಚಿಸಿಕೊಳ್ಳುತ್ತಿದೆ. ಸ್ಪರ್ಧಿಗಳ ನಡುವೆ ಟಫ್​ ಫೈಟ್​ ಏರ್ಪಡುತ್ತಿದ್ದು, ಎಲ್ಲರೂ ಗೆಲ್ಲಲೇ ಬೇಕು ಎನ್ನುವ ಛಲಕ್ಕೆ ಬಿದ್ದಿದ್ದಾರೆ. ಆದರೆ, ಬಿಗ್​ ಬಾಸ್​ ಮನೆಯಲ್ಲಿ ಶುಭಾ ಪೂಂಜಾ ಮಾತ್ರ ಏನನ್ನೂ ಮಾಡುತ್ತಿಲ್ಲವಂತೆ. ಅವರನ್ನು ಕೇವಲ ಕೌಂಟ್​ಗೆ ಇಡಲಾಗಿದೆ ಎನ್ನುವ ಮಾತು ಬಿಗ್​ ಬಾಸ್​ ಸ್ಪರ್ಧಿಯಿಂದಲೇ ಬಂದಿದೆ.

ಶುಭಾ ಪೂಂಜಾ ಬಂದ ದಿನದಿಂದಲೂ ತಮ್ಮದೇ ಸ್ಟೈಲ್​ನಲ್ಲಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಮಕ್ಕಳಂತೆ ವರ್ತಿಸಿದ್ದೂ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ದೊಡ್ಮನೆಯಲ್ಲಿ ಅವರಿಗೆ ವೈರಿಗಳಿಲ್ಲ. ಎಲ್ಲರ ಜತೆಯೂ ಅವರು ಹೊಂದಿಕೊಂಡು ಹೋಗುತ್ತಿದ್ದಾರೆ. ಇದು ಕೆಲವರ ಕಣ್ಣು ಕುಕ್ಕಿದೆ.

ಬಿಗ್​ ಬಾಸ್​ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಹಾಗೂ ಪ್ರಶಾಂತ್​ ಸಂಬರಗಿ ಕುಳಿತು ಮಾತನಾಡುತ್ತಿದ್ದರು. ಸದ್ಯ, ಮನೆಯ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಅವರು ಚರ್ಚೆ ಮಾಡುತ್ತಿದ್ದರು. ಮನೆಯಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಮಧ್ಯೆಯೂ ಶಮಂತ್​ ಬ್ರೋ ಗೌಡ, ರಘು ಗೌಡ ಹಾಗೂ ಶುಭಾ ಎಲ್ಲರ ಜತೆಗೂ ಬೆರೆಯುತ್ತಿದ್ದಾರೆ. ಆದರೆ, ಇಲ್ಲಿ ಶುಭಾ ಲೆಕ್ಕಕ್ಕೇ ಇಲ್ಲ!

‘ಮನೆಯಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗಲ್ಲ. ರಘು, ಶಮಂತ್​ ಮಾತ್ರ ಎಲ್ಲರ ಜತೆಗೂ ಚೆನ್ನಾಗಿದ್ದಾರೆ’ ಎಂದರು ಚಕ್ರವರ್ತಿ. ‘ಶುಭಾ ಕೂಡ ಎಲ್ಲರ ಜತೆಗೆ ಬರೆಯುತ್ತಿದ್ದಾರೆ’ ಎಂದರು ಪ್ರಶಾಂತ್​. ‘ಬಿಗ್​ ಬಾಸ್​ನಲ್ಲಿ ಶುಭಾ ಲೆಕ್ಕಕ್ಕಿಲ್ಲ, ಸುಮ್ಮನೆ ಕೌಂಟ್​ಗೆ ಇಟ್ಟಿದ್ದಾರೆ’ ಎಂದು ಚಕ್ರವರ್ತಿ ತಮ್ಮ ಅಭಿಪ್ರಾಯ ತಿಳಿಸಿದರು. ‘ಹಾಗನ್ನಬೇಡ’ ಎಂದು ಹೇಳುವ ಮೂಲಕ ಶುಭಾ ಕೂಡ ಪ್ರಬಲ ಕ್ಯಾಂಡಿಡೇಟ್​ ಎಂಬುದನ್ನು ಪ್ರಶಾಂತ್​ ಹೇಳೋಕೆ ಹೋದರು. ಆದರೆ, ಇದನ್ನು ಚಕ್ರವರ್ತಿ ಒಪ್ಪಲೇ ಇಲ್ಲ. ‘ನೀನೇ ಹೇಳು ಅವಳು (ಶುಭಾ) ಯಾವುದಕ್ಕೆ ಲೆಕ್ಕಕ್ಕೆ ಇದ್ದಾಳೆ? ಆಟಕ್ಕೂ ಇಲ್ಲ, ತರ್ಕಕ್ಕೂ ಇಲ್ಲ’ ಎಂದು ಚಕ್ರವರ್ತಿ ತಮ್ಮ ವಾದ ಮಂಡಿಸಿದರು.

ಇದನ್ನೂ ಓದಿ:

ಹೆಗಲಮೇಲೆ ಕೈ ಹಾಕಲು ಬಂದ ಪ್ರಶಾಂತ್​ರನ್ನು ಸಿಟ್ಟಿನಿಂದ ತಳ್ಳಿದ ಚಕ್ರವರ್ತಿ; ಇಬ್ಬರ ನಡುವೆ ಮೂಡಿತು ವೈಮನಸ್ಸು

ಜೀವನದಲ್ಲಿ ಶುಭಾ ಪೂಂಜಾ ಕಳೆದುಕೊಂಡಿದ್ದ ಅಮೂಲ್ಯ ವ್ಯಕ್ತಿಗಳನ್ನು ಮರಳಿ ಕೊಡಿಸಿದ ಬಿಗ್​ ಬಾಸ್​; ಯಾರವರು?

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?