AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶುಭಾ ಲೆಕ್ಕಕ್ಕಿಲ್ಲ, ಸುಮ್ಮನೆ ಕೌಂಟ್​ಗೆ ಇಟ್ಟಿದ್ದಾರೆ’; ಈ ಬಿಗ್​ ಬಾಸ್​ ಸ್ಪರ್ಧಿಯ ಮಾತನ್ನು ನೀವು ಒಪ್ತೀರಾ?

ಶುಭಾ ಪೂಂಜಾ ಬಂದ ದಿನದಿಂದಲೂ ತಮ್ಮದೇ ಸ್ಟೈಲ್​ನಲ್ಲಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಮಕ್ಕಳಂತೆ ವರ್ತಿಸಿದ್ದೂ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ದೊಡ್ಮನೆಯಲ್ಲಿ ಅವರಿಗೆ ವೈರಿಗಳಿಲ್ಲ.

‘ಶುಭಾ ಲೆಕ್ಕಕ್ಕಿಲ್ಲ, ಸುಮ್ಮನೆ ಕೌಂಟ್​ಗೆ ಇಟ್ಟಿದ್ದಾರೆ’; ಈ ಬಿಗ್​ ಬಾಸ್​ ಸ್ಪರ್ಧಿಯ ಮಾತನ್ನು ನೀವು ಒಪ್ತೀರಾ?
ನಟಿ ಶುಭಾ ಪೂಂಜಾ
TV9 Web
| Edited By: |

Updated on: Jul 02, 2021 | 4:52 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್ 8’ರ ಎರಡನೇ ಇನ್ನಿಂಗ್ಸ್​ ದಿನ ಕಳೆದಂತೆ ಕುತೂಹಲ ಹೆಚ್ಚಿಸಿಕೊಳ್ಳುತ್ತಿದೆ. ಸ್ಪರ್ಧಿಗಳ ನಡುವೆ ಟಫ್​ ಫೈಟ್​ ಏರ್ಪಡುತ್ತಿದ್ದು, ಎಲ್ಲರೂ ಗೆಲ್ಲಲೇ ಬೇಕು ಎನ್ನುವ ಛಲಕ್ಕೆ ಬಿದ್ದಿದ್ದಾರೆ. ಆದರೆ, ಬಿಗ್​ ಬಾಸ್​ ಮನೆಯಲ್ಲಿ ಶುಭಾ ಪೂಂಜಾ ಮಾತ್ರ ಏನನ್ನೂ ಮಾಡುತ್ತಿಲ್ಲವಂತೆ. ಅವರನ್ನು ಕೇವಲ ಕೌಂಟ್​ಗೆ ಇಡಲಾಗಿದೆ ಎನ್ನುವ ಮಾತು ಬಿಗ್​ ಬಾಸ್​ ಸ್ಪರ್ಧಿಯಿಂದಲೇ ಬಂದಿದೆ.

ಶುಭಾ ಪೂಂಜಾ ಬಂದ ದಿನದಿಂದಲೂ ತಮ್ಮದೇ ಸ್ಟೈಲ್​ನಲ್ಲಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಮಕ್ಕಳಂತೆ ವರ್ತಿಸಿದ್ದೂ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ದೊಡ್ಮನೆಯಲ್ಲಿ ಅವರಿಗೆ ವೈರಿಗಳಿಲ್ಲ. ಎಲ್ಲರ ಜತೆಯೂ ಅವರು ಹೊಂದಿಕೊಂಡು ಹೋಗುತ್ತಿದ್ದಾರೆ. ಇದು ಕೆಲವರ ಕಣ್ಣು ಕುಕ್ಕಿದೆ.

ಬಿಗ್​ ಬಾಸ್​ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಹಾಗೂ ಪ್ರಶಾಂತ್​ ಸಂಬರಗಿ ಕುಳಿತು ಮಾತನಾಡುತ್ತಿದ್ದರು. ಸದ್ಯ, ಮನೆಯ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಅವರು ಚರ್ಚೆ ಮಾಡುತ್ತಿದ್ದರು. ಮನೆಯಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಮಧ್ಯೆಯೂ ಶಮಂತ್​ ಬ್ರೋ ಗೌಡ, ರಘು ಗೌಡ ಹಾಗೂ ಶುಭಾ ಎಲ್ಲರ ಜತೆಗೂ ಬೆರೆಯುತ್ತಿದ್ದಾರೆ. ಆದರೆ, ಇಲ್ಲಿ ಶುಭಾ ಲೆಕ್ಕಕ್ಕೇ ಇಲ್ಲ!

‘ಮನೆಯಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗಲ್ಲ. ರಘು, ಶಮಂತ್​ ಮಾತ್ರ ಎಲ್ಲರ ಜತೆಗೂ ಚೆನ್ನಾಗಿದ್ದಾರೆ’ ಎಂದರು ಚಕ್ರವರ್ತಿ. ‘ಶುಭಾ ಕೂಡ ಎಲ್ಲರ ಜತೆಗೆ ಬರೆಯುತ್ತಿದ್ದಾರೆ’ ಎಂದರು ಪ್ರಶಾಂತ್​. ‘ಬಿಗ್​ ಬಾಸ್​ನಲ್ಲಿ ಶುಭಾ ಲೆಕ್ಕಕ್ಕಿಲ್ಲ, ಸುಮ್ಮನೆ ಕೌಂಟ್​ಗೆ ಇಟ್ಟಿದ್ದಾರೆ’ ಎಂದು ಚಕ್ರವರ್ತಿ ತಮ್ಮ ಅಭಿಪ್ರಾಯ ತಿಳಿಸಿದರು. ‘ಹಾಗನ್ನಬೇಡ’ ಎಂದು ಹೇಳುವ ಮೂಲಕ ಶುಭಾ ಕೂಡ ಪ್ರಬಲ ಕ್ಯಾಂಡಿಡೇಟ್​ ಎಂಬುದನ್ನು ಪ್ರಶಾಂತ್​ ಹೇಳೋಕೆ ಹೋದರು. ಆದರೆ, ಇದನ್ನು ಚಕ್ರವರ್ತಿ ಒಪ್ಪಲೇ ಇಲ್ಲ. ‘ನೀನೇ ಹೇಳು ಅವಳು (ಶುಭಾ) ಯಾವುದಕ್ಕೆ ಲೆಕ್ಕಕ್ಕೆ ಇದ್ದಾಳೆ? ಆಟಕ್ಕೂ ಇಲ್ಲ, ತರ್ಕಕ್ಕೂ ಇಲ್ಲ’ ಎಂದು ಚಕ್ರವರ್ತಿ ತಮ್ಮ ವಾದ ಮಂಡಿಸಿದರು.

ಇದನ್ನೂ ಓದಿ:

ಹೆಗಲಮೇಲೆ ಕೈ ಹಾಕಲು ಬಂದ ಪ್ರಶಾಂತ್​ರನ್ನು ಸಿಟ್ಟಿನಿಂದ ತಳ್ಳಿದ ಚಕ್ರವರ್ತಿ; ಇಬ್ಬರ ನಡುವೆ ಮೂಡಿತು ವೈಮನಸ್ಸು

ಜೀವನದಲ್ಲಿ ಶುಭಾ ಪೂಂಜಾ ಕಳೆದುಕೊಂಡಿದ್ದ ಅಮೂಲ್ಯ ವ್ಯಕ್ತಿಗಳನ್ನು ಮರಳಿ ಕೊಡಿಸಿದ ಬಿಗ್​ ಬಾಸ್​; ಯಾರವರು?

Follow Us
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ