AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

51ನೇ ವಯಸ್ಸಲ್ಲಿ ಅಶ್ಲೀಲ ಕಂಟೆಂಟ್​ನಲ್ಲಿ ನಟನೆ; ನಟಿಯ ವಿರುದ್ಧ್ ಕೇಸ್

ಬಹುಭಾಷಾ ನಟಿ ಶ್ವೇತಾ ಮೆನನ್ ಅವರ ಮೇಲೆ ಅಶ್ಲೀಲ ಚಿತ್ರಗಳಲ್ಲಿ ನಟಿಸಿದ ಆರೋಪ ಬಂದಿದೆ. ಸಾಮಾಜಿಕ ಹೋರಾಟಗಾರನೊಬ್ಬ ದೂರು ದಾಖಲಿಸಿದ್ದು, ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಆರೋಪದಿಂದ ಅವರ AMMA ಅಧ್ಯಕ್ಷ ಸ್ಥಾನದ ಆಕಾಂಕ್ಷೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

51ನೇ ವಯಸ್ಸಲ್ಲಿ ಅಶ್ಲೀಲ ಕಂಟೆಂಟ್​ನಲ್ಲಿ ನಟನೆ; ನಟಿಯ ವಿರುದ್ಧ್ ಕೇಸ್
ಶ್ವೇತಾ
ರಾಜೇಶ್ ದುಗ್ಗುಮನೆ
|

Updated on: Aug 07, 2025 | 12:59 PM

Share

ಕನ್ನಡ, ಮಲಯಾಳಂ, ಹಿಂದಿ ಮೊದಲಾದ ಭಾಷೆಗಳಲ್ಲಿ ನಟಿಸಿ ಫೇಮಸ್ ಆದ ಶ್ವೇತಾ ಮೆನನ್​ಗೆ ಈಗ ಸಂಕಷ್ಟ ಎದುರಾಗಿದೆ. ಅವರು 51ನೇ ವಯಸ್ಸಿನಲ್ಲಿ ಅಶ್ಲೀಲ ಸಿನಿಮಾಗಳಲ್ಲಿ ನಟಿಸುತ್ತಿರುವ ಆರೋಪ ಬಂದಿದೆ. ಅಲ್ಲದೆ, ಈ ವಿಡಿಯೋಗಳನ್ನು ಅವರು ವಿವಿಧ ವೆಬ್​ಸೈಟ್​ಗಳಿಗೆ ಮಾರಾಟ ಮಾಡಿ ಹಣ ಮಾಡುತ್ತಿರುವುದಾಗಿಯೂ ದೂರಲಾಗಿದೆ. ಈ ವಿಷಯವಾಗಿ ಮಾರ್ಟಿನ್ ಮೆನಶೆರಿ ಹೆಸರಿನ ಸಾಮಾಜಿಕ ಹೋರಾಟಗಾರ ಈ ಬಗ್ಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಎರ್ನಾಕುಲಂ ಸಿಜೆಎಂ ಕೋರ್ಟ್​ ಪೊಲೀಸರಿಗೆ ನಿರ್ದೇಶನ ನೀಡಿದೆ.

ಐಟಿ ಕಾಯ್ದೆ ಸೆಕ್ಷನ್ 67 (ಎ) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಶ್ವೇತಾ ಅವರು ಕೆಲವು ಅಶ್ಲೀಲ ಸಿನಿಮಾಗಳ ಭಾಗವಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ಕೆಲವು ಕಾಂಡೋಮ್ ಜಾಹೀರಾತಿನಲ್ಲೂ ಶ್ವೇತಾ ನಟಿಸಿದ್ದಾರಂತೆ. ಸಿನಿಮಾ ಹಾಗೂ ಜಾಹೀರಾತಿನಲ್ಲಿ ನಗ್ನತೆ ಇದೆ. ಅಲ್ಲದೆ, ಇದನ್ನು ಅವರು ಆರ್ಥಿಕ ಲಾಭ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ರಜನಿಕಾಂತ್ ಅಭಿಮಾನಿಗಳ ಬಳಿ ಎಷ್ಟು ಸ್ವೀಟ್ ಆಗಿ ನಡೆದುಕೊಳ್ತಾರೆ ನೋಡಿ; ಈ ವಿಡಿಯೋ ಉತ್ತಮ ಸಾಕ್ಷಿ

ಇದನ್ನೂ ಓದಿ
Image
ದಕ್ಷಿಣ ಚಿತ್ರರಂಗಲ್ಲಿ ಹೊಕ್ಕುಳದ ಗೀಳು ಜಾಸ್ತಿ ಎಂದು ಆರೋಪಿಸಿದ ಮಾಳವಿಕಾ
Image
50 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಸು ಫ್ರಮ್ ಸೋ’; ಎಲ್ಲಿಂದ ಎಷ್ಟು ಬಂತು?
Image
ಪತಿಗೆ ಎಂದೂ ಮರೆಯಲಾರದ ಉಡುಗೊರೆ ಕೊಟ್ಟ ಸೋನಲ್; ಭಾವುಕರಾಗಿ ಕೈ ಮುಗಿದ ತರುಣ್
Image
‘ನೀವು ಗ್ಯಾಂಗ್ ಮಾಡಿ ಬ್ರದರ್’; ‘ಶೆಟ್ಟಿ ಮಾಫಿಯಾ’ ಎಂದವರಿಗೆ ರಾಜ್ ಉತ್ತರ

ಶ್ವೇತಾ ಚಂಡೀಗಢದವರು. ಅವರು 1991ರಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಟಿಯಾಗಿ, ಮಾಡೆಲ್ ಆಗಿ ಹಾಗೂ ಟಿವಿ ಆ್ಯಂಕರ್ ಆಗಿ ಗುರುತಿಸಿಕೊಂಡಿದ್ದಾರೆ. ಅವರು ಮಲಯಾಳಂ ಚಿತ್ರರಂಗದಲ್ಲಿ ಹೆಚ್ಚು ಪರಿಚಿತರಾಗಿದ್ದಾರೆ. ಅವರು ಕನ್ನಡದಲ್ಲಿ ಉಪೇಂದ್ರ ಅಭಿನಯದ ‘ಓಂಕಾರ’ ಚಿತ್ರದ ಭಾಗ ಆಗಿದ್ದರು. ಶ್ವೇತಾ ಅವರು ಕಿರುತೆರೆ ಲೋಕದಲ್ಲೂ ಗಮನ ಸೆಳೆದಿದ್ದಾರೆ. ‘ಬಿಗ್ ಬಾಸ್ ಮಲಯಾಳಂ ಸೀಸನ್ 1’ರಲ್ಲಿ ಸ್ಪರ್ಧಿಸಿದ್ದರು. 2018ರಲ್ಲಿ ಶೋ ಪ್ರಸಾರ ಕಂಡಿತು. ಕೇವಲ ಒಂದು ತಿಂಗಳು ಮಾತ್ರ ಇವರು ದೊಡ್ಮನೆಯಲ್ಲಿ ಇದ್ದರು.

 ನಡೆಯಿತು ಹುನ್ನಾರ?

ಶ್ವೇತಾ ಮೆನನ್ ಅವರು ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (AMMA) ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ಒಬ್ಬರು. ಇವರ ವಿರುದ್ಧ ಕೇಸ್ ದಾಖಲಾದರೆ ನಟಿಯನ್ನು ರೇಸ್​ನಿಂದ ಹೊರಗೆ ಇಡಬಹುದು ಎಂದು ಯಾರಾದರೂ ಸಂಚು ರೂಪಿಸಿರಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಶ್ವೇತಾ ಮೆನನ್ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು