AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ತನ್ನವರನ್ನು ಕಳೆದುಕೊಂಡ ಯುವ ನಟ; ವಿಡಿಯೋ ನೋಡಿ ಸಿದ್ದರಾಮಯ್ಯ ಹೇಳಿದ್ದೇನು?

ಗಟ್ಟಿಮೇಳ ಧಾರಾವಾಹಿ ನಟ ಪವನ್​ ಕುಮಾರ್​ ಅವರು ಭಾವ ಮತ್ತು ಭಾವನ ತಂದೆಯನ್ನು ಕೊರೊನಾದಿಂದ ಕಳೆದುಕೊಂಡಿದ್ದಾರೆ. ಆ ನೋವಿನಲ್ಲೇ ಒಂದು ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕೊರೊನಾದಿಂದ ತನ್ನವರನ್ನು ಕಳೆದುಕೊಂಡ ಯುವ ನಟ; ವಿಡಿಯೋ ನೋಡಿ ಸಿದ್ದರಾಮಯ್ಯ ಹೇಳಿದ್ದೇನು?
ಪವನ್​ ಕುಮಾರ್​ - ಸಿದ್ದರಾಮಯ್ಯ
ಮದನ್​ ಕುಮಾರ್​
|

Updated on: Apr 24, 2021 | 1:44 PM

Share

ಕೊರೊನಾ ವೈರಸ್​ ಎರಡನೇ ಅಲೆ ಕಾಟಕ್ಕೆ ಇಡೀ ದೇಶವೇ ತತ್ತರಿಸುತ್ತಿದೆ. ಸೂಕ್ತ ಚಿಕಿತ್ಸೆ ಸಿಗದೇ ಜನರು ಪರದಾಡುತ್ತಿದ್ದಾರೆ. ಆಕ್ಸಿಜನ್​ ಕೊರತೆ ಮತ್ತು ಬೆಡ್​ಗಳ ಕೊರತೆಯಿಂದ ಪರಿಸ್ಥಿತಿ ಚಿಂತಾಜನಕ ಆಗುತ್ತಿದೆ. ಈ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ಕೂಡ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಗಟ್ಟಿಮೇಳ ಧಾರಾವಾಹಿ ನಟ ಪವನ್​ ಕುಮಾರ್​ ಅವರು ಭಾವ ಮತ್ತು ಭಾವನ ತಂದೆಯನ್ನು ಕೊರೊನಾದಿಂದ ಕಳೆದುಕೊಂಡಿದ್ದಾರೆ. ಆ ನೋವಿನಲ್ಲೇ ಒಂದು ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಎಲ್ಲೆಡೆ ವೈರಲ್​ ಆಗಿದ್ದು, ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿದ್ದಾರೆ.

‘ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ಸರ್ಕಾರದ ಭ್ರಷ್ಟಾಚಾರ, ಅಕ್ರಮ ಮತ್ತು ನಿಷ್ಕ್ರಿಯತೆಯಿಂದ ತನ್ನವರನ್ನು ಕಳೆದುಕೊಂಡ ಈ ದುಃಖತಪ್ತ ಯುವನಟನ ಹೃದಯವಿದ್ರಾವಕ ಮಾತುಗಳನ್ನೊಮ್ಮೆ ಕೇಳಿ. ರಾಜ್ಯ ಸರ್ಕಾರ ಸಾಮೂಹಿಕ ಹತ್ಯೆ ನಡೆಸುತ್ತಿದೆ ಎನ್ನುತ್ತಿದ್ದಾನೆ’ ಎಂದು ಪವನ್​ ಕುಮಾರ್​ ಅವರ ವಿಡಿಯೋವನ್ನು ಟ್ವಿಟರ್​ನಲ್ಲಿ ಸಿದ್ದರಾಮಯ್ಯ ಶೇರ್​ ಮಾಡಿಕೊಂಡಿದ್ದಾರೆ.

‘ದಯವಿಟ್ಟು ನಾನು ಹೇಳುತ್ತಿರುವನ್ನು ಸರಿಯಾಗಿ ಕೇಳಿಸಿಕೊಳ್ಳಿ. ಈವಾಗ ಆಗುತ್ತಿರುವ ಕೊರೊನಾ ಕಳೆದ ವರ್ಷದ ರೀತಿ ಇಲ್ಲ. ತುಂಬ ಕೆಟ್ಟದಾಗಿದೆ. ರಾಜಕಾರಣಿಗಳು ಸುಳ್ಳು ಹೇಳುತ್ತಿದ್ದಾರೆ. ಗ್ರೌಂಡ್​ ರಿಯಾಲಿಟಿ ಬೇರೆಯೇ ಇದೆ. ಸರ್ಕಾರದ ಅವ್ಯವಸ್ಥೆಗೆ ನಾವೇ ಬಲಿಪಶು ಆಗಿದ್ದೇವೆ. ನನ್ನ ಕುಟುಂಬದಿಂದ ನಾನು ಇಬ್ಬರನ್ನು ಕಳೆದುಕೊಂಡಿದ್ದೇನೆ. ಎರಡು ದಿನದ ಗ್ಯಾಪ್​ನಲ್ಲಿ ಭಾವ ಮತ್ತು ಅವರ ತಂದೆ ನಿಧನರಾಗಿದ್ದಾರೆ’ ಎಂದು ಪವನ್​ ಕುಮಾರ್​ ಹೇಳಿದ್ದಾರೆ.

‘ಸಾವಿನ ಸಂಖ್ಯೆ ತೋರಿಸುತ್ತಿರುವುದೆಲ್ಲ ಸುಳ್ಳು. ನಾನು ನಿಮಗೆ ಸರಿಯಾಗ ಲೆಕ್ಕ ಹೇಳುತ್ತೇನೆ. ನಿಮಗೆ ಕೊರೊನಾ ಬಂದಿದೆಯೋ ಇಲ್ಲವೋ ಎಂಬುದಕ್ಕೆ ಆರ್​ಟಿಪಿಸಿಆರ್​ ಮಾಡಿಸುತ್ತಾರೆ. ಅದರಲ್ಲಿ ನೆಗೆಟಿವ್​ ಬಂದರೆ ನಿಮಗೆ ಕೊರೊನಾ ಇಲ್ಲ. ಆಗ ನಿಮಗೆ ಬಿಯು ನಂಬರ್​ ಜನರೇಟ್​ ಆಗುವುದಿಲ್ಲ. ಪಾಸಿಟಿವ್​ ಆದವರಿಗೆ ಬಿಯು ನಂಬರ್​ ಬರುತ್ತದೆ. ಅದನ್ನು ಇಟ್ಟುಕೊಂಡು ಬಿಬಿಎಂಪಿಗೆ ಕರೆ ಮಾಡಿ ಆಸ್ಪತ್ರೆ ನಿಗದಿ ಮಾಡಿಕೊಳ್ಳಬೇಕು. ಆದರೆ ಆ ನಂಬರ್​ಗೆ ಕರೆ ಕನೆಕ್ಟ್​ ಆಗುವುದೇ ಇಲ್ಲ’ ಎಂದು ಪವನ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಿಮ್ಮ ಕುಟುಂಬದವರು ಆಕ್ಸಿಜನ್​ಗಾಗಿ ನಿಮ್ಮ ಕಣ್ಣೆದುರಿನಲ್ಲೇ ಒದ್ದಾಡುತ್ತ ಇರುತ್ತಾರೆ. ನೀವು ಕಂಗಾಲಾಗುತ್ತೀರಿ. ಬಿಯು ನಂಬರ್​ ಇಟ್ಟುಕೊಂಡು ಬಿಬಿಎಂಪಿಗೆ ಕರೆ ಮಾಡಿದರೆ ಯಾರೂ ಫೋನ್​ ಎತ್ತದೇ ಇದ್ದಾಗ ನಿಮಗೆ ಆಗುವ ಹತಾಶೆಯನ್ನು ತಿಳಿದುಕೊಳ್ಳಿ. ಆಸ್ಪತ್ರೆ ಬೆಡ್​ ಕೊಡಿಸಿ ದುಡ್ಡು ಹೊಡೆಯಲು ಇಲ್ಲಿ ಬ್ರೋಕರ್​ಗಳು ಇದ್ದಾರೆ. 10-20 ಸಾವಿರ ಕೊಟ್ಟರೆ ಎಲ್ಲೋ ಒಂದು ಕಡೆ ಬೆಡ್​ ವ್ಯವಸ್ತೆ ಮಾಡಿಸುತ್ತಾರೆ. ಅಲ್ಲಿ ಹೋದರೂ ಆಕ್ಸಿಜನ್​ ಇರುವುದಿಲ್ಲ. ನಿನ್ನೆ ನನ್ನ ಕಣ್ಣ ಎದುರಿನಲ್ಲಿಯೇ ಒಬ್ಬರು ಮಹಿಳೆ ಸತ್ತಿದನ್ನು ನೋಡಿದ್ದೇನೆ’ ಎಂದಿದ್ದಾರೆ ಪವನ್​ ಕುಮಾರ್​.

‘ಆಕ್ಸಿಜನ್​ಗೆ ಆಸ್ಪತ್ರೆಗಳಲ್ಲಿ ಹೆಚ್ಚವರಿ ದರ ನಿಗದಿ ಮಾಡಲಾಗಿದೆ. ಆಕ್ಸಿಜನ್​ ತುಂಬ ಬೇಸಿಕ್​. ಅದನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದರೆ ಇನ್ನೇನು ಕೊಡುತ್ತಾರೆ? ನಿನ್ನೆ ಆಸ್ಪತ್ರೆ ವಾರ್ಡ್​ನಲ್ಲಿ ಒಂದೇ ದಿನ ಆರು ಜನರ ಸಾವನ್ನು ನಾನು ನೋಡಿದ್ದೇನೆ. ನನ್ನ ಕುಟುಂಬದ ಇನ್ನೂ ಮೂರು ಜನರು ಆಸ್ಪತ್ರೆಯಲ್ಲಿ ಇದ್ದಾರೆ’ ಎಂದು ಪವನ್​ ಹೇಳಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಅಮ್ಮ, ಮಗನ ದೂರ ಮಾಡಿದ ಕೊರೊನಾ; ಮಗನಿಗೆ ತಾಯಿಯ ಸಾವಿನ ಸುದ್ದಿ ಹೇಳದೆ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು

ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ

(Siddaramaiah reacts to Gattimela actor Pawan Kumar angry video on Coronavirus mismanagement by government)

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ