AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್​’ ನಿರ್ದೇಶಕನಿಂದ ಮತ್ತೊಂದು ಮಲ್ಟಿ ಸ್ಟಾರರ್​ ಪ್ಲ್ಯಾನ್​; ಪ್ರಭಾಸ್ ಜತೆ ಹಿಂದಿ ಹೀರೋ

ಸಿದ್ದಾರ್ಥ್ ಆನಂದ್ ಅವರ ನಿರ್ದೇಶನದ ‘ವಾರ್​’ ಚಿತ್ರ ಹಿಟ್ ಆಯಿತು. ಈ ಚಿತ್ರ ಯಶಸ್ಸು ಕಂಡ ಬಳಿಕ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಸಿನಿಮಾ ಗೆದ್ದಿದೆ.

‘ಪಠಾಣ್​’ ನಿರ್ದೇಶಕನಿಂದ ಮತ್ತೊಂದು ಮಲ್ಟಿ ಸ್ಟಾರರ್​ ಪ್ಲ್ಯಾನ್​; ಪ್ರಭಾಸ್ ಜತೆ ಹಿಂದಿ ಹೀರೋ
Follow us
ರಾಜೇಶ್ ದುಗ್ಗುಮನೆ
|

Updated on: Jan 30, 2023 | 11:08 AM

‘ಪಠಾಣ್​’ ಸಿನಿಮಾ (Pathan Movie) ಸೂಪರ್ ಹಿಟ್ ಆಗಿದೆ. ಈ ಚಿತ್ರದಿಂದ ಶಾರುಖ್ ಖಾನ್ ಹಾಗೂ ಜಾನ್ ಅಬ್ರಾಹಂ ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಇವರ ವೃತ್ತಿಜೀವನದ ತೂಕ ಹೆಚ್ಚಿದೆ. ಈ ಚಿತ್ರದ ಮೂಲಕ ನಿರ್ದೇಶಕ ಸಿದ್ದಾರ್ಥ್ ಆನಂದ್ (Siddharth Anand) ಅವರು ಗೆದ್ದು ಬೀಗಿದ್ದಾರೆ. ಮಲ್ಟಿ ಸ್ಟಾರರ್ ಸಿನಿಮಾ ಮಾಡುವುದರಲ್ಲಿ ಸಿದ್ದಾರ್ಥ್​ ಎತ್ತಿದ ಕೈ. ಈಗ ಅವರ ಮುಂದಿನ ಸಿನಿಮಾ ಬಗ್ಗೆ ಜನರಿಗೆ ಕುತೂಹಲ ಇದೆ. ಅವರ ಮುಂದಿನ ಪ್ರಾಜೆಕ್ಟ್​​ನಲ್ಲೂ ಇಬ್ಬರು ಸ್ಟಾರ್ ಹೀರೋಗಳು ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಒಂದು ದೊಡ್ಡ ಹಿಟ್ ಕೊಟ್ಟ ನಂತರದಲ್ಲಿ ನಿರ್ದೇಶಕರ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗುತ್ತದೆ. ಸಿದ್ದಾರ್ಥ್ ಆನಂದ್ ಅವರ ನಿರ್ದೇಶನದ ‘ವಾರ್​’ ಚಿತ್ರ ಹಿಟ್ ಆಯಿತು. ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ಅವರು ಈ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡ ಬಳಿಕ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಸಿನಿಮಾ ಗೆದ್ದಿದೆ. ಈಗ ಸಿದ್ದಾರ್ಥ್ ಆನಂದ್ ಮುಂದಿನ ಪ್ರಾಜೆಕ್ಟ್​​ನಲ್ಲಿ ಹೃತಿಕ್​ ರೋಷನ್ ಹಾಗೂ ಪ್ರಭಾಸ್ ನಟಿಸಲಿದ್ದಾರೆ ಎನ್ನಲಾಗಿದೆ.

ಪ್ರಭಾಸ್ ಮುಂದಿನ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಸಿನಿಮಾ ಬಂಡವಾಳ ಹೂಡುತ್ತಿದೆ ಅನ್ನೋದು ಇತ್ತೀಚೆಗೆ ರಿವೀಲ್ ಆಗಿತ್ತು. ಈ ಚಿತ್ರಕ್ಕೆ ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡಲಿದ್ದಾರೆ ಅನ್ನೋದು ಕೂಡ ಗೊತ್ತಾಗಿತ್ತು. ವಿಶೇಷ ಎಂದರೆ ಪ್ರಭಾಸ್ ಜತೆ ಹೃತಿಕ್ ಕೂಡ ನಟಿಸಲಿದ್ದಾರೆ. ಈ ಮೊದಲು ಹೃತಿಕ್ ರೋಷನ್ ಜತೆ ಸಿದ್ದಾರ್ಥ್ ಆನಂದ್ ಕೆಲಸ ಮಾಡಿದ್ದರು. ಈಗ ಹೃತಿಕ್​ ಜತೆ ಮತ್ತೊಮ್ಮೆ ಕೈ ಜೋಡಿಸಲು ಅವರು ರೆಡಿ ಆಗಿದ್ದಾರೆ.

ಇದನ್ನೂ ಓದಿ
Image
ಐದು ದಿನಕ್ಕೆ 500 ಕೋಟಿ ರೂಪಾಯಿ ಬಾಚಿದ ‘ಪಠಾಣ್​’; ಭಾರತದಲ್ಲಿ ಎಷ್ಟು ಕಲೆಕ್ಷನ್​?
Image
ಕಂಬ್ಯಾಕ್​ಗೆ ಶಾರುಖ್ ಖಾನ್ ತಂತ್ರವನ್ನೇ ಬಳಸಲಿದ್ದಾರೆ ಆಮಿರ್ ಖಾನ್? ಕಾಯಬೇಕು ಇನ್ನಷ್ಟು ವರ್ಷ
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

ಇದನ್ನೂ ಓದಿ: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​

ಸಿದ್ದಾರ್ಥ್ ಆನಂದ್ ಅವರು ಚಿತ್ರರಂಗದಲ್ಲಿ ಗೆಲ್ಲುವ ಕುದುರೆ ಆಗಿದ್ದಾರೆ. ಅವರ ನಿರ್ದೇಶನದ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿವೆ. ಈ ಕಾರಣಕ್ಕೆ ನಿರ್ಮಾಪಕರು ದೊಡ್ಡ ಮೊತ್ತದ ಹಣ ಹೂಡಲು ಮುಂದೆ ಬರುತ್ತಿದ್ದಾರೆ. ಈಗ ಪ್ರಭಾಸ್ ಜತೆ ಅವರು ಮಾಡಲಿರುವ ಸಿನಿಮಾ ಹಲವು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!