AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್​’ ನಿರ್ದೇಶಕನಿಂದ ಮತ್ತೊಂದು ಮಲ್ಟಿ ಸ್ಟಾರರ್​ ಪ್ಲ್ಯಾನ್​; ಪ್ರಭಾಸ್ ಜತೆ ಹಿಂದಿ ಹೀರೋ

ಸಿದ್ದಾರ್ಥ್ ಆನಂದ್ ಅವರ ನಿರ್ದೇಶನದ ‘ವಾರ್​’ ಚಿತ್ರ ಹಿಟ್ ಆಯಿತು. ಈ ಚಿತ್ರ ಯಶಸ್ಸು ಕಂಡ ಬಳಿಕ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಸಿನಿಮಾ ಗೆದ್ದಿದೆ.

‘ಪಠಾಣ್​’ ನಿರ್ದೇಶಕನಿಂದ ಮತ್ತೊಂದು ಮಲ್ಟಿ ಸ್ಟಾರರ್​ ಪ್ಲ್ಯಾನ್​; ಪ್ರಭಾಸ್ ಜತೆ ಹಿಂದಿ ಹೀರೋ
ರಾಜೇಶ್ ದುಗ್ಗುಮನೆ
|

Updated on: Jan 30, 2023 | 11:08 AM

Share

‘ಪಠಾಣ್​’ ಸಿನಿಮಾ (Pathan Movie) ಸೂಪರ್ ಹಿಟ್ ಆಗಿದೆ. ಈ ಚಿತ್ರದಿಂದ ಶಾರುಖ್ ಖಾನ್ ಹಾಗೂ ಜಾನ್ ಅಬ್ರಾಹಂ ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಇವರ ವೃತ್ತಿಜೀವನದ ತೂಕ ಹೆಚ್ಚಿದೆ. ಈ ಚಿತ್ರದ ಮೂಲಕ ನಿರ್ದೇಶಕ ಸಿದ್ದಾರ್ಥ್ ಆನಂದ್ (Siddharth Anand) ಅವರು ಗೆದ್ದು ಬೀಗಿದ್ದಾರೆ. ಮಲ್ಟಿ ಸ್ಟಾರರ್ ಸಿನಿಮಾ ಮಾಡುವುದರಲ್ಲಿ ಸಿದ್ದಾರ್ಥ್​ ಎತ್ತಿದ ಕೈ. ಈಗ ಅವರ ಮುಂದಿನ ಸಿನಿಮಾ ಬಗ್ಗೆ ಜನರಿಗೆ ಕುತೂಹಲ ಇದೆ. ಅವರ ಮುಂದಿನ ಪ್ರಾಜೆಕ್ಟ್​​ನಲ್ಲೂ ಇಬ್ಬರು ಸ್ಟಾರ್ ಹೀರೋಗಳು ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಒಂದು ದೊಡ್ಡ ಹಿಟ್ ಕೊಟ್ಟ ನಂತರದಲ್ಲಿ ನಿರ್ದೇಶಕರ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗುತ್ತದೆ. ಸಿದ್ದಾರ್ಥ್ ಆನಂದ್ ಅವರ ನಿರ್ದೇಶನದ ‘ವಾರ್​’ ಚಿತ್ರ ಹಿಟ್ ಆಯಿತು. ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ಅವರು ಈ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡ ಬಳಿಕ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಸಿನಿಮಾ ಗೆದ್ದಿದೆ. ಈಗ ಸಿದ್ದಾರ್ಥ್ ಆನಂದ್ ಮುಂದಿನ ಪ್ರಾಜೆಕ್ಟ್​​ನಲ್ಲಿ ಹೃತಿಕ್​ ರೋಷನ್ ಹಾಗೂ ಪ್ರಭಾಸ್ ನಟಿಸಲಿದ್ದಾರೆ ಎನ್ನಲಾಗಿದೆ.

ಪ್ರಭಾಸ್ ಮುಂದಿನ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಸಿನಿಮಾ ಬಂಡವಾಳ ಹೂಡುತ್ತಿದೆ ಅನ್ನೋದು ಇತ್ತೀಚೆಗೆ ರಿವೀಲ್ ಆಗಿತ್ತು. ಈ ಚಿತ್ರಕ್ಕೆ ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡಲಿದ್ದಾರೆ ಅನ್ನೋದು ಕೂಡ ಗೊತ್ತಾಗಿತ್ತು. ವಿಶೇಷ ಎಂದರೆ ಪ್ರಭಾಸ್ ಜತೆ ಹೃತಿಕ್ ಕೂಡ ನಟಿಸಲಿದ್ದಾರೆ. ಈ ಮೊದಲು ಹೃತಿಕ್ ರೋಷನ್ ಜತೆ ಸಿದ್ದಾರ್ಥ್ ಆನಂದ್ ಕೆಲಸ ಮಾಡಿದ್ದರು. ಈಗ ಹೃತಿಕ್​ ಜತೆ ಮತ್ತೊಮ್ಮೆ ಕೈ ಜೋಡಿಸಲು ಅವರು ರೆಡಿ ಆಗಿದ್ದಾರೆ.

ಇದನ್ನೂ ಓದಿ
Image
ಐದು ದಿನಕ್ಕೆ 500 ಕೋಟಿ ರೂಪಾಯಿ ಬಾಚಿದ ‘ಪಠಾಣ್​’; ಭಾರತದಲ್ಲಿ ಎಷ್ಟು ಕಲೆಕ್ಷನ್​?
Image
ಕಂಬ್ಯಾಕ್​ಗೆ ಶಾರುಖ್ ಖಾನ್ ತಂತ್ರವನ್ನೇ ಬಳಸಲಿದ್ದಾರೆ ಆಮಿರ್ ಖಾನ್? ಕಾಯಬೇಕು ಇನ್ನಷ್ಟು ವರ್ಷ
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

ಇದನ್ನೂ ಓದಿ: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​

ಸಿದ್ದಾರ್ಥ್ ಆನಂದ್ ಅವರು ಚಿತ್ರರಂಗದಲ್ಲಿ ಗೆಲ್ಲುವ ಕುದುರೆ ಆಗಿದ್ದಾರೆ. ಅವರ ನಿರ್ದೇಶನದ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿವೆ. ಈ ಕಾರಣಕ್ಕೆ ನಿರ್ಮಾಪಕರು ದೊಡ್ಡ ಮೊತ್ತದ ಹಣ ಹೂಡಲು ಮುಂದೆ ಬರುತ್ತಿದ್ದಾರೆ. ಈಗ ಪ್ರಭಾಸ್ ಜತೆ ಅವರು ಮಾಡಲಿರುವ ಸಿನಿಮಾ ಹಲವು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!