AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್​’ ನಿರ್ದೇಶಕನಿಂದ ಮತ್ತೊಂದು ಮಲ್ಟಿ ಸ್ಟಾರರ್​ ಪ್ಲ್ಯಾನ್​; ಪ್ರಭಾಸ್ ಜತೆ ಹಿಂದಿ ಹೀರೋ

ಸಿದ್ದಾರ್ಥ್ ಆನಂದ್ ಅವರ ನಿರ್ದೇಶನದ ‘ವಾರ್​’ ಚಿತ್ರ ಹಿಟ್ ಆಯಿತು. ಈ ಚಿತ್ರ ಯಶಸ್ಸು ಕಂಡ ಬಳಿಕ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಸಿನಿಮಾ ಗೆದ್ದಿದೆ.

‘ಪಠಾಣ್​’ ನಿರ್ದೇಶಕನಿಂದ ಮತ್ತೊಂದು ಮಲ್ಟಿ ಸ್ಟಾರರ್​ ಪ್ಲ್ಯಾನ್​; ಪ್ರಭಾಸ್ ಜತೆ ಹಿಂದಿ ಹೀರೋ
ರಾಜೇಶ್ ದುಗ್ಗುಮನೆ
|

Updated on: Jan 30, 2023 | 11:08 AM

Share

‘ಪಠಾಣ್​’ ಸಿನಿಮಾ (Pathan Movie) ಸೂಪರ್ ಹಿಟ್ ಆಗಿದೆ. ಈ ಚಿತ್ರದಿಂದ ಶಾರುಖ್ ಖಾನ್ ಹಾಗೂ ಜಾನ್ ಅಬ್ರಾಹಂ ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಇವರ ವೃತ್ತಿಜೀವನದ ತೂಕ ಹೆಚ್ಚಿದೆ. ಈ ಚಿತ್ರದ ಮೂಲಕ ನಿರ್ದೇಶಕ ಸಿದ್ದಾರ್ಥ್ ಆನಂದ್ (Siddharth Anand) ಅವರು ಗೆದ್ದು ಬೀಗಿದ್ದಾರೆ. ಮಲ್ಟಿ ಸ್ಟಾರರ್ ಸಿನಿಮಾ ಮಾಡುವುದರಲ್ಲಿ ಸಿದ್ದಾರ್ಥ್​ ಎತ್ತಿದ ಕೈ. ಈಗ ಅವರ ಮುಂದಿನ ಸಿನಿಮಾ ಬಗ್ಗೆ ಜನರಿಗೆ ಕುತೂಹಲ ಇದೆ. ಅವರ ಮುಂದಿನ ಪ್ರಾಜೆಕ್ಟ್​​ನಲ್ಲೂ ಇಬ್ಬರು ಸ್ಟಾರ್ ಹೀರೋಗಳು ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಒಂದು ದೊಡ್ಡ ಹಿಟ್ ಕೊಟ್ಟ ನಂತರದಲ್ಲಿ ನಿರ್ದೇಶಕರ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗುತ್ತದೆ. ಸಿದ್ದಾರ್ಥ್ ಆನಂದ್ ಅವರ ನಿರ್ದೇಶನದ ‘ವಾರ್​’ ಚಿತ್ರ ಹಿಟ್ ಆಯಿತು. ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ಅವರು ಈ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡ ಬಳಿಕ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಸಿನಿಮಾ ಗೆದ್ದಿದೆ. ಈಗ ಸಿದ್ದಾರ್ಥ್ ಆನಂದ್ ಮುಂದಿನ ಪ್ರಾಜೆಕ್ಟ್​​ನಲ್ಲಿ ಹೃತಿಕ್​ ರೋಷನ್ ಹಾಗೂ ಪ್ರಭಾಸ್ ನಟಿಸಲಿದ್ದಾರೆ ಎನ್ನಲಾಗಿದೆ.

ಪ್ರಭಾಸ್ ಮುಂದಿನ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಸಿನಿಮಾ ಬಂಡವಾಳ ಹೂಡುತ್ತಿದೆ ಅನ್ನೋದು ಇತ್ತೀಚೆಗೆ ರಿವೀಲ್ ಆಗಿತ್ತು. ಈ ಚಿತ್ರಕ್ಕೆ ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡಲಿದ್ದಾರೆ ಅನ್ನೋದು ಕೂಡ ಗೊತ್ತಾಗಿತ್ತು. ವಿಶೇಷ ಎಂದರೆ ಪ್ರಭಾಸ್ ಜತೆ ಹೃತಿಕ್ ಕೂಡ ನಟಿಸಲಿದ್ದಾರೆ. ಈ ಮೊದಲು ಹೃತಿಕ್ ರೋಷನ್ ಜತೆ ಸಿದ್ದಾರ್ಥ್ ಆನಂದ್ ಕೆಲಸ ಮಾಡಿದ್ದರು. ಈಗ ಹೃತಿಕ್​ ಜತೆ ಮತ್ತೊಮ್ಮೆ ಕೈ ಜೋಡಿಸಲು ಅವರು ರೆಡಿ ಆಗಿದ್ದಾರೆ.

ಇದನ್ನೂ ಓದಿ
Image
ಐದು ದಿನಕ್ಕೆ 500 ಕೋಟಿ ರೂಪಾಯಿ ಬಾಚಿದ ‘ಪಠಾಣ್​’; ಭಾರತದಲ್ಲಿ ಎಷ್ಟು ಕಲೆಕ್ಷನ್​?
Image
ಕಂಬ್ಯಾಕ್​ಗೆ ಶಾರುಖ್ ಖಾನ್ ತಂತ್ರವನ್ನೇ ಬಳಸಲಿದ್ದಾರೆ ಆಮಿರ್ ಖಾನ್? ಕಾಯಬೇಕು ಇನ್ನಷ್ಟು ವರ್ಷ
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

ಇದನ್ನೂ ಓದಿ: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​

ಸಿದ್ದಾರ್ಥ್ ಆನಂದ್ ಅವರು ಚಿತ್ರರಂಗದಲ್ಲಿ ಗೆಲ್ಲುವ ಕುದುರೆ ಆಗಿದ್ದಾರೆ. ಅವರ ನಿರ್ದೇಶನದ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿವೆ. ಈ ಕಾರಣಕ್ಕೆ ನಿರ್ಮಾಪಕರು ದೊಡ್ಡ ಮೊತ್ತದ ಹಣ ಹೂಡಲು ಮುಂದೆ ಬರುತ್ತಿದ್ದಾರೆ. ಈಗ ಪ್ರಭಾಸ್ ಜತೆ ಅವರು ಮಾಡಲಿರುವ ಸಿನಿಮಾ ಹಲವು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ