ಪೊಲೀಸರಿಗೆ ವಿಡಿಯೋ ಕಾಲ್​ ಮಾಡಿ ಕ್ಷಮೆ ಕೇಳಿದ ನಟ ಸಿದ್ದಾರ್ಥ್​; ಈ ಬಾರಿ ಅವರು ಮಾಡಿದ ತಪ್ಪೇನು?

| Updated By: ರಾಜೇಶ್ ದುಗ್ಗುಮನೆ

Updated on: Feb 07, 2022 | 5:30 PM

ಪ್ರಧಾನಿ ನರೇಂದ್ರ ಮೋದಿ ಪಂಜಾಬ್​ಗೆ ಭೇಟಿ ನೀಡಿದ್ದಾಗ ಆದ ಭದ್ರತಾ ಲೋಪದ ಕುರಿತು ಕಳವಳ ವ್ಯಕ್ತಪಡಿಸಿ ಸೈನಾ ನೆಹ್ವಾಲ್​ ಅವರು ಟ್ವೀಟ್​ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದಾರ್ಥ್​ ಅವರು ಅವಹೇಳನಕಾರಿ ಪದಗಳನ್ನು ಬಳಸಿದ್ದರು.

ಪೊಲೀಸರಿಗೆ ವಿಡಿಯೋ ಕಾಲ್​ ಮಾಡಿ ಕ್ಷಮೆ ಕೇಳಿದ ನಟ ಸಿದ್ದಾರ್ಥ್​; ಈ ಬಾರಿ ಅವರು ಮಾಡಿದ ತಪ್ಪೇನು?
ಸಿದ್ಧಾರ್ಥ್​
Follow us on

ನಟ ಸಿದ್ದಾರ್ಥ್ (Siddharth )​ ಅವರು ಆಗಾಗ ಕಿರಿಕ್​ ಮಾಡಿಕೊಳ್ಳುತ್ತಲೇ ಇರುತ್ತಾರೆ. ತಮ್ಮ ಸಿದ್ಧಾಂತದ ವಿಚಾರವಾಗಿ ಅವರು ಅನೇಕ ಬಾರಿ ಜಗಳ ಆಡಿದ್ದಿದೆ. ಇತ್ತೀಚೆಗೆ ಅವರು ಬ್ಯಾಡ್ಮಿಂಟನ್​ ಆಟಗಾರ್ತಿ ಸೈನಾ ನೆಹ್ವಾಲ್ (Saina Nehwal)​ ಬಗ್ಗೆ ಆಕ್ಷೇಪಾರ್ಹವಾಗಿ ಟ್ವೀಟ್​ (Twitter) ಮಾಡಿದ್ದರು. ಅದಕ್ಕೆ ಅನೇಕರಿಂದ ಖಂಡನೆ ವ್ಯಕ್ತವಾಗಿತ್ತು. ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಈ ಟ್ವೀಟ್​ ಇದೆ ಎಂದು ಮಹಿಳಾ ಆಯೋಗ ಕೂಡ ವಿರೋಧ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿದ್ದಾರ್ಥ್​ ಅವರು ಸೈನಾ ಬಳಿ ಕ್ಷಮೆ ಕೇಳಿದ್ದರು. ಈಗ ಸಿದ್ದಾರ್ಥ್​ ಅವರು ಚೆನ್ನೈ ಪೊಲೀಸ್​​ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳಿಗೆ ಕರೆ ಮಾಡಿ ಕ್ಷಮೆ ಕೇಳಿದ್ದಾರೆ. ಇದಕ್ಕೆ ಕಾರಣ ಅದೇ ಹಳೆಯ ಸೈನಾ ನೆಹ್ವಾಲ್​ ಪ್ರಕರಣ.

ಪ್ರಧಾನಿ ನರೇಂದ್ರ ಮೋದಿ ಪಂಜಾಬ್​ಗೆ ಭೇಟಿ ನೀಡಿದ್ದಾಗ ಆದ ಭದ್ರತಾ ಲೋಪದ ಕುರಿತು ಕಳವಳ ವ್ಯಕ್ತಪಡಿಸಿ ಸೈನಾ ನೆಹ್ವಾಲ್​ ಅವರು ಟ್ವೀಟ್​ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದಾರ್ಥ್​ ಅವರು ಅವಹೇಳನಕಾರಿ ಪದಗಳನ್ನು ಬಳಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಈ ಬಗ್ಗೆ ಬಹಿರಂಗವಾಗಿ ಕ್ಷಮೆ ಕೇಳಿದ್ದ ಸಿದ್ದಾರ್ಥ್, ‘ಡಿಯರ್​ ಸೈನಾ.. ಕೆಲವೇ ದಿನಗಳ ಹಿಂದೆ ನಿಮ್ಮ ಟ್ವೀಟ್​ಗೆ ಪ್ರತಿಯಾಗಿ ನಾನು ಕೆಟ್ಟ ಜೋಕ್​ ಮಾಡಿದ್ದಕ್ಕಾಗಿ ಕ್ಷಮೆ ಕೇಳುತ್ತೇನೆ. ನಿಮ್ಮ ಹಲವು ವಿಚಾರಗಳನ್ನು ನಾನು ವಿರೋಧಿಸಬಹುದು. ಆದರೆ ನನ್ನ ವಿರೋಧ ಮತ್ತು ಸಿಟ್ಟು ಕೂಡ ನಾನು ಬಳಸಿದ ಪದಗಳು ಹಾಗೂ ಧಾಟಿಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಒಂದು ಜೋಕ್​ ಅನ್ನು ವಿವರಿಸಬೇಕಾದ ಸಂದರ್ಭ ಬರುತ್ತದೆ ಎಂದಾದರೆ ಅದು ಒಳ್ಳೆಯ ಜೋಕ್​ ಅಲ್ಲ. ಅದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ’ ಎಂದು ಸಿದ್ದಾರ್ಥ್​ ಟ್ವೀಟ್​ ಮಾಡಿದ್ದರು.

‘ಇದು ಮಹಿಳೆಯರ ಘನತೆಗೆ ಸಂಬಂಧಿಸಿದ ವಿಚಾರ. ಓರ್ವ ಮಹಿಳೆಯನ್ನು ಅವರು ಈ ರೀತಿ ಟಾರ್ಗೆಟ್​​ ಮಾಡಬಾರದು. ಆದರೆ ಇಂಥ ವಿಚಾರಗಳಿಂದ ನಾನು ವಿಚಲಿತ ಆಗಿಲ್ಲ. ನನ್ನ ಕ್ಷೇತ್ರದಲ್ಲಿ ನಾನು ಖುಷಿಯಾಗಿದ್ದೇನೆ. ಅವರಿಗೆ ದೇವರು ಒಳ್ಳೆಯದು ಮಾಡಲಿ’ ಎಂದು ಸೈನಾ ನೆಹ್ವಾಲ್​ ಉತ್ತರಿಸಿದ್ದರು. ಅಲ್ಲಿಗೆ ಈ ಪ್ರಕರಣ ಇತ್ಯರ್ಥವಾಗಿತ್ತು. ಆದರೆ, ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಲೇ ಇದ್ದಾರೆ.

ಇಂದು (ಫೆಬ್ರವರಿ 7) ಸಿದ್ದಾರ್ಥ್​ ವಿಡಿಯೋ ಕಾನ್ಫರೆನ್ಸ್​ ​ಲೈನ್​ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ‘ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಇದಾಗಿರಲಿಲ್ಲ. ಈ ಬಗ್ಗೆ ಕ್ಷಮೆ ಕೇಳುತ್ತೇನೆ’ ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ. ಸಿದ್ದಾರ್ಥ್​ ವಿಚಾರಣೆಗೆ ಸಂಪೂರ್ಣವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಗೆದ್ದಿದ್ದಕ್ಕೆ ಯೋಗಿ ಆದಿತ್ಯನಾಥ್​​​ರಿಗೆ ಅಭಿನಂದನೆ ಹೇಳಿದ ಸೈನಾ ನೆಹ್ವಾಲ್​; ಪ್ರತಿಪಕ್ಷಗಳಿಂದ ಕಟು ಟೀಕೆ

ಸೈನಾ ನೆಹ್ವಾಲ್ ಟ್ವೀಟ್​​ಗೆ ಕೆಟ್ಟದಾಗಿ ಪ್ರತಿಕ್ರಿಯಿಸಿದ ನಟ ಸಿದ್ಧಾರ್ಥ್ ಟ್ವಿಟರ್ ಖಾತೆ ಬ್ಲಾಕ್ ಮಾಡಿ: ಟ್ವಿಟರ್​​ಗೆ ಮಹಿಳಾ ಆಯೋಗ ಮನವಿ

 

Published On - 4:43 pm, Mon, 7 February 22