AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  

ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ. ನಾವು ಈ ರೀತಿ ಮಾಡಿಲ್ಲ. ಒಂದೊಮ್ಮೆ ನಮ್ಮ ಕಾರ್ಯಕರ್ತರು ಈ ರೀತಿ ಮಾಡಿದ್ದರೆ ನಾವು ಇದನ್ನು ಖಂಡಿಸುತ್ತೇವೆ ಎಂದು ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  
ರಾಜೇಶ್ ದುಗ್ಗುಮನೆ
|

Updated on: Apr 29, 2021 | 8:15 PM

Share

ಕಾಲಿವುಡ್​ ನಟ ಸಿದ್ಧಾರ್ಥ್​ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ಧಾರ್ಥ್​ ಹೇಳಿದ್ದರು. ಇದಾದ ಬೆನ್ನಲ್ಲೇ ಸಿದ್ಧಾರ್ಥ್​ ಅವರ ಮೊಬೈಲ್​ ಸಂಖ್ಯೆ ಲೀಕ್​ ಮಾಡಲಾಗಿದೆ. ಅಲ್ಲದೆ, ಅವರಿಗೆ ಸಾಕಷ್ಟು ಕೊಲೆ ಬೆದರಿಕೆ ಕೂಡ ಬರುತ್ತಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀರಿ ಹರಡುತ್ತಿದೆ. ನಿತ್ಯ ಸಾಕಷ್ಟು ಜನರು ಸಾಯುತ್ತಿದ್ದಾರೆ. ಅನೇಕರಿಗೆ ಬೆಡ್​ ಸಿಗುತ್ತಿಲ್ಲ. ಇದು ಕೂಡ ಹಲವರ ಸಾವಿಗೆ ಕಾರಣವಾಗುತ್ತಿದೆ. ಈ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಸಿದ್ಧಾರ್ಥ್​ ಹೇಳಿದ್ದರು. ಹೀಗಾಗಿ, ತಮಿಳು ನಾಡು ಬಿಜೆಪಿ ಘಟಕವು ತಮ್ಮ ​ ಮೊಬೈಲ್​ ಸಂಖ್ಯೆಯನ್ನು ಸೋರಿಕೆ ಮಾಡಿದೆ ಎಂಬುದು ಸಿದ್ಧಾರ್ಥ್​ ಆರೋಪ.

ಮೊಬೈಲ್​ ಸಂಖ್ಯೆ​ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಸಿದ್ಧಾರ್ಥ್​ ಟ್ವೀಟ್​ ಮಾಡಿದ್ದಾರೆ. ತಮಿಳುನಾಡು ಬಿಜೆಪಿ ಘಟಕ ನನ್ನ ಮೊಬೈಲ್​ ಸಂಖ್ಯೆಯನ್ನು ಹಂಚಿದೆ. ಕಳೆದ 24 ಗಂಟೆಗಳಲ್ಲಿ 500ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ. ಈ ಎಲ್ಲಾ ನಂಬರ್​ಗಳು ಬಿಜೆಪಿಗೆ ಸಂಬಂಧಿಸಿದ್ದಾಗಿವೆ. ನಾನು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಘಟಕಕ್ಕೆ ಸಂಬಂಧಿಸಿದ ಸಾಮಾಜಿಕ ಜಾಲತಾಣದಲ್ಲಿ ನನ್ನ ಸಂಖ್ಯೆಯನ್ನು ಹಂಚಿಕೊಳ್ಳಲಾಗಿದೆ. ಅಲ್ಲದೆ, ಇವರಿಗೆ ಕರೆ ಮಾಡಿ ಕಿರುಕುಳ ನೀಡಿ. ಅವರು ಮುಂದೆಂದೂ ಈ ಬಗ್ಗೆ ಮಾತನಾಡಬಾರದು ಎಂದು ನಿರ್ದೇಶನ ನೀಡಲಾಗಿದೆ. ನಾವು ಕೊವಿಡ್​ನಿಂದ ಬದುಕಬಹುದು. ಆದರೆ, ಇಂಥವರಿಂದ ನಾವು ಬದುಕಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ.

ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ. ನಾವು ಈ ರೀತಿ ಮಾಡಿಲ್ಲ. ಒಂದೊಮ್ಮೆ ನಮ್ಮ ಕಾರ್ಯಕರ್ತರು ಈ ರೀತಿ ಮಾಡಿದ್ದರೆ ನಾವು ಇದನ್ನು ಖಂಡಿಸುತ್ತೇವೆ ಎಂದು ಹೇಳಿದೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 35,024 ಮಂದಿಗೆ ಕೊರೊನಾ ಸೋಂಕು, 270 ಸಾವು

Follow Us
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್