AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  

ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ. ನಾವು ಈ ರೀತಿ ಮಾಡಿಲ್ಲ. ಒಂದೊಮ್ಮೆ ನಮ್ಮ ಕಾರ್ಯಕರ್ತರು ಈ ರೀತಿ ಮಾಡಿದ್ದರೆ ನಾವು ಇದನ್ನು ಖಂಡಿಸುತ್ತೇವೆ ಎಂದು ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  
ರಾಜೇಶ್ ದುಗ್ಗುಮನೆ
|

Updated on: Apr 29, 2021 | 8:15 PM

Share

ಕಾಲಿವುಡ್​ ನಟ ಸಿದ್ಧಾರ್ಥ್​ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ಧಾರ್ಥ್​ ಹೇಳಿದ್ದರು. ಇದಾದ ಬೆನ್ನಲ್ಲೇ ಸಿದ್ಧಾರ್ಥ್​ ಅವರ ಮೊಬೈಲ್​ ಸಂಖ್ಯೆ ಲೀಕ್​ ಮಾಡಲಾಗಿದೆ. ಅಲ್ಲದೆ, ಅವರಿಗೆ ಸಾಕಷ್ಟು ಕೊಲೆ ಬೆದರಿಕೆ ಕೂಡ ಬರುತ್ತಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀರಿ ಹರಡುತ್ತಿದೆ. ನಿತ್ಯ ಸಾಕಷ್ಟು ಜನರು ಸಾಯುತ್ತಿದ್ದಾರೆ. ಅನೇಕರಿಗೆ ಬೆಡ್​ ಸಿಗುತ್ತಿಲ್ಲ. ಇದು ಕೂಡ ಹಲವರ ಸಾವಿಗೆ ಕಾರಣವಾಗುತ್ತಿದೆ. ಈ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಸಿದ್ಧಾರ್ಥ್​ ಹೇಳಿದ್ದರು. ಹೀಗಾಗಿ, ತಮಿಳು ನಾಡು ಬಿಜೆಪಿ ಘಟಕವು ತಮ್ಮ ​ ಮೊಬೈಲ್​ ಸಂಖ್ಯೆಯನ್ನು ಸೋರಿಕೆ ಮಾಡಿದೆ ಎಂಬುದು ಸಿದ್ಧಾರ್ಥ್​ ಆರೋಪ.

ಮೊಬೈಲ್​ ಸಂಖ್ಯೆ​ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಸಿದ್ಧಾರ್ಥ್​ ಟ್ವೀಟ್​ ಮಾಡಿದ್ದಾರೆ. ತಮಿಳುನಾಡು ಬಿಜೆಪಿ ಘಟಕ ನನ್ನ ಮೊಬೈಲ್​ ಸಂಖ್ಯೆಯನ್ನು ಹಂಚಿದೆ. ಕಳೆದ 24 ಗಂಟೆಗಳಲ್ಲಿ 500ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ. ಈ ಎಲ್ಲಾ ನಂಬರ್​ಗಳು ಬಿಜೆಪಿಗೆ ಸಂಬಂಧಿಸಿದ್ದಾಗಿವೆ. ನಾನು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಘಟಕಕ್ಕೆ ಸಂಬಂಧಿಸಿದ ಸಾಮಾಜಿಕ ಜಾಲತಾಣದಲ್ಲಿ ನನ್ನ ಸಂಖ್ಯೆಯನ್ನು ಹಂಚಿಕೊಳ್ಳಲಾಗಿದೆ. ಅಲ್ಲದೆ, ಇವರಿಗೆ ಕರೆ ಮಾಡಿ ಕಿರುಕುಳ ನೀಡಿ. ಅವರು ಮುಂದೆಂದೂ ಈ ಬಗ್ಗೆ ಮಾತನಾಡಬಾರದು ಎಂದು ನಿರ್ದೇಶನ ನೀಡಲಾಗಿದೆ. ನಾವು ಕೊವಿಡ್​ನಿಂದ ಬದುಕಬಹುದು. ಆದರೆ, ಇಂಥವರಿಂದ ನಾವು ಬದುಕಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ.

ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ. ನಾವು ಈ ರೀತಿ ಮಾಡಿಲ್ಲ. ಒಂದೊಮ್ಮೆ ನಮ್ಮ ಕಾರ್ಯಕರ್ತರು ಈ ರೀತಿ ಮಾಡಿದ್ದರೆ ನಾವು ಇದನ್ನು ಖಂಡಿಸುತ್ತೇವೆ ಎಂದು ಹೇಳಿದೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 35,024 ಮಂದಿಗೆ ಕೊರೊನಾ ಸೋಂಕು, 270 ಸಾವು

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?