AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  

ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ. ನಾವು ಈ ರೀತಿ ಮಾಡಿಲ್ಲ. ಒಂದೊಮ್ಮೆ ನಮ್ಮ ಕಾರ್ಯಕರ್ತರು ಈ ರೀತಿ ಮಾಡಿದ್ದರೆ ನಾವು ಇದನ್ನು ಖಂಡಿಸುತ್ತೇವೆ ಎಂದು ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  
ರಾಜೇಶ್ ದುಗ್ಗುಮನೆ
|

Updated on: Apr 29, 2021 | 8:15 PM

Share

ಕಾಲಿವುಡ್​ ನಟ ಸಿದ್ಧಾರ್ಥ್​ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ಧಾರ್ಥ್​ ಹೇಳಿದ್ದರು. ಇದಾದ ಬೆನ್ನಲ್ಲೇ ಸಿದ್ಧಾರ್ಥ್​ ಅವರ ಮೊಬೈಲ್​ ಸಂಖ್ಯೆ ಲೀಕ್​ ಮಾಡಲಾಗಿದೆ. ಅಲ್ಲದೆ, ಅವರಿಗೆ ಸಾಕಷ್ಟು ಕೊಲೆ ಬೆದರಿಕೆ ಕೂಡ ಬರುತ್ತಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀರಿ ಹರಡುತ್ತಿದೆ. ನಿತ್ಯ ಸಾಕಷ್ಟು ಜನರು ಸಾಯುತ್ತಿದ್ದಾರೆ. ಅನೇಕರಿಗೆ ಬೆಡ್​ ಸಿಗುತ್ತಿಲ್ಲ. ಇದು ಕೂಡ ಹಲವರ ಸಾವಿಗೆ ಕಾರಣವಾಗುತ್ತಿದೆ. ಈ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಸಿದ್ಧಾರ್ಥ್​ ಹೇಳಿದ್ದರು. ಹೀಗಾಗಿ, ತಮಿಳು ನಾಡು ಬಿಜೆಪಿ ಘಟಕವು ತಮ್ಮ ​ ಮೊಬೈಲ್​ ಸಂಖ್ಯೆಯನ್ನು ಸೋರಿಕೆ ಮಾಡಿದೆ ಎಂಬುದು ಸಿದ್ಧಾರ್ಥ್​ ಆರೋಪ.

ಮೊಬೈಲ್​ ಸಂಖ್ಯೆ​ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಸಿದ್ಧಾರ್ಥ್​ ಟ್ವೀಟ್​ ಮಾಡಿದ್ದಾರೆ. ತಮಿಳುನಾಡು ಬಿಜೆಪಿ ಘಟಕ ನನ್ನ ಮೊಬೈಲ್​ ಸಂಖ್ಯೆಯನ್ನು ಹಂಚಿದೆ. ಕಳೆದ 24 ಗಂಟೆಗಳಲ್ಲಿ 500ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ. ಈ ಎಲ್ಲಾ ನಂಬರ್​ಗಳು ಬಿಜೆಪಿಗೆ ಸಂಬಂಧಿಸಿದ್ದಾಗಿವೆ. ನಾನು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಘಟಕಕ್ಕೆ ಸಂಬಂಧಿಸಿದ ಸಾಮಾಜಿಕ ಜಾಲತಾಣದಲ್ಲಿ ನನ್ನ ಸಂಖ್ಯೆಯನ್ನು ಹಂಚಿಕೊಳ್ಳಲಾಗಿದೆ. ಅಲ್ಲದೆ, ಇವರಿಗೆ ಕರೆ ಮಾಡಿ ಕಿರುಕುಳ ನೀಡಿ. ಅವರು ಮುಂದೆಂದೂ ಈ ಬಗ್ಗೆ ಮಾತನಾಡಬಾರದು ಎಂದು ನಿರ್ದೇಶನ ನೀಡಲಾಗಿದೆ. ನಾವು ಕೊವಿಡ್​ನಿಂದ ಬದುಕಬಹುದು. ಆದರೆ, ಇಂಥವರಿಂದ ನಾವು ಬದುಕಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ.

ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ. ನಾವು ಈ ರೀತಿ ಮಾಡಿಲ್ಲ. ಒಂದೊಮ್ಮೆ ನಮ್ಮ ಕಾರ್ಯಕರ್ತರು ಈ ರೀತಿ ಮಾಡಿದ್ದರೆ ನಾವು ಇದನ್ನು ಖಂಡಿಸುತ್ತೇವೆ ಎಂದು ಹೇಳಿದೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 35,024 ಮಂದಿಗೆ ಕೊರೊನಾ ಸೋಂಕು, 270 ಸಾವು

Follow Us
ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ
ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ
ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ
ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ
ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?
ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?
ಇಂದು ಈ ರಾಶಿಯವರ ಆಕಸ್ಮಿಕ ಪ್ರಯಾಣ ಯೋಗ
ಇಂದು ಈ ರಾಶಿಯವರ ಆಕಸ್ಮಿಕ ಪ್ರಯಾಣ ಯೋಗ
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ