ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  

ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ. ನಾವು ಈ ರೀತಿ ಮಾಡಿಲ್ಲ. ಒಂದೊಮ್ಮೆ ನಮ್ಮ ಕಾರ್ಯಕರ್ತರು ಈ ರೀತಿ ಮಾಡಿದ್ದರೆ ನಾವು ಇದನ್ನು ಖಂಡಿಸುತ್ತೇವೆ ಎಂದು ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  

Updated on: Apr 29, 2021 | 8:15 PM

ಕಾಲಿವುಡ್​ ನಟ ಸಿದ್ಧಾರ್ಥ್​ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ಧಾರ್ಥ್​ ಹೇಳಿದ್ದರು. ಇದಾದ ಬೆನ್ನಲ್ಲೇ ಸಿದ್ಧಾರ್ಥ್​ ಅವರ ಮೊಬೈಲ್​ ಸಂಖ್ಯೆ ಲೀಕ್​ ಮಾಡಲಾಗಿದೆ. ಅಲ್ಲದೆ, ಅವರಿಗೆ ಸಾಕಷ್ಟು ಕೊಲೆ ಬೆದರಿಕೆ ಕೂಡ ಬರುತ್ತಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀರಿ ಹರಡುತ್ತಿದೆ. ನಿತ್ಯ ಸಾಕಷ್ಟು ಜನರು ಸಾಯುತ್ತಿದ್ದಾರೆ. ಅನೇಕರಿಗೆ ಬೆಡ್​ ಸಿಗುತ್ತಿಲ್ಲ. ಇದು ಕೂಡ ಹಲವರ ಸಾವಿಗೆ ಕಾರಣವಾಗುತ್ತಿದೆ. ಈ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಸಿದ್ಧಾರ್ಥ್​ ಹೇಳಿದ್ದರು. ಹೀಗಾಗಿ, ತಮಿಳು ನಾಡು ಬಿಜೆಪಿ ಘಟಕವು ತಮ್ಮ ​ ಮೊಬೈಲ್​ ಸಂಖ್ಯೆಯನ್ನು ಸೋರಿಕೆ ಮಾಡಿದೆ ಎಂಬುದು ಸಿದ್ಧಾರ್ಥ್​ ಆರೋಪ.

ಮೊಬೈಲ್​ ಸಂಖ್ಯೆ​ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಸಿದ್ಧಾರ್ಥ್​ ಟ್ವೀಟ್​ ಮಾಡಿದ್ದಾರೆ. ತಮಿಳುನಾಡು ಬಿಜೆಪಿ ಘಟಕ ನನ್ನ ಮೊಬೈಲ್​ ಸಂಖ್ಯೆಯನ್ನು ಹಂಚಿದೆ. ಕಳೆದ 24 ಗಂಟೆಗಳಲ್ಲಿ 500ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ. ಈ ಎಲ್ಲಾ ನಂಬರ್​ಗಳು ಬಿಜೆಪಿಗೆ ಸಂಬಂಧಿಸಿದ್ದಾಗಿವೆ. ನಾನು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಘಟಕಕ್ಕೆ ಸಂಬಂಧಿಸಿದ ಸಾಮಾಜಿಕ ಜಾಲತಾಣದಲ್ಲಿ ನನ್ನ ಸಂಖ್ಯೆಯನ್ನು ಹಂಚಿಕೊಳ್ಳಲಾಗಿದೆ. ಅಲ್ಲದೆ, ಇವರಿಗೆ ಕರೆ ಮಾಡಿ ಕಿರುಕುಳ ನೀಡಿ. ಅವರು ಮುಂದೆಂದೂ ಈ ಬಗ್ಗೆ ಮಾತನಾಡಬಾರದು ಎಂದು ನಿರ್ದೇಶನ ನೀಡಲಾಗಿದೆ. ನಾವು ಕೊವಿಡ್​ನಿಂದ ಬದುಕಬಹುದು. ಆದರೆ, ಇಂಥವರಿಂದ ನಾವು ಬದುಕಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ.

ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ. ನಾವು ಈ ರೀತಿ ಮಾಡಿಲ್ಲ. ಒಂದೊಮ್ಮೆ ನಮ್ಮ ಕಾರ್ಯಕರ್ತರು ಈ ರೀತಿ ಮಾಡಿದ್ದರೆ ನಾವು ಇದನ್ನು ಖಂಡಿಸುತ್ತೇವೆ ಎಂದು ಹೇಳಿದೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 35,024 ಮಂದಿಗೆ ಕೊರೊನಾ ಸೋಂಕು, 270 ಸಾವು

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us