AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಫ್ಲಾಪ್, ನಾಲ್ಕು ಕೋಟಿ ಹಣ ಮರಳಿಸಿದ ನಾಯಕ ನಟ

Siddhu Jonnalagadda: ಸಿನಿಮಾ ನಟ-ನಟಿಯರ ಸಂಭಾವನೆಗಳಿಂದಾಗಿ ಸಿನಿಮಾಗಳ ಬಜೆಟ್​ಗಳು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಇದರಿಂದ ನಿರ್ಮಾಪಕರು ನಷ್ಟ ಅನುಭವಿಸುತ್ತಿದ್ದಾರೆ ಎಂಬ ದೂರುಗಳು ಇತ್ತೀಚೆಗೆ ನಿರ್ಮಾಪಕರಿಂದ ಕೇಳಿ ಬರುತ್ತಿವೆ. ಆದರೆ ಇಲ್ಲೊಬ್ಬ ನಾಯಕ ನಟ, ಸಿನಿಮಾ ಫ್ಲಾಪ್ ಆಗಿದ್ದಕ್ಕೆ ನಿರ್ಮಾಪಕರಿಗೆ ನಾಲ್ಕು ಕೋಟಿ ಹಣ ಮರಳಿಸಿದ್ದಾರೆ.

ಸಿನಿಮಾ ಫ್ಲಾಪ್, ನಾಲ್ಕು ಕೋಟಿ ಹಣ ಮರಳಿಸಿದ ನಾಯಕ ನಟ
Siddu Jonnalagadaa
Follow us
ಮಂಜುನಾಥ ಸಿ.
|

Updated on: Jun 04, 2025 | 5:34 PM

ಸಿನಿಮಾಗಳ (Cinema) ಬಜೆಟ್​ಗಳು ಮಿತಿ ಮೀರುತ್ತಿದೆ. ಸಿನಿಮಾದ ಒಟ್ಟು ಬಜೆಟ್​ಗಿಂತಲೂ ಹೆಚ್ಚು ಹಣವನ್ನು ನಟರು ಸಂಭಾವನೆಯಾಗಿ ಪಡೆಯುತ್ತಿರುವುದೂ ಇದೆ. ಸಿನಿಮಾ ನಟ-ನಟಿಯರ ಸಂಭಾವನೆ ಹೆಚ್ಚಳದ ಬಗ್ಗೆ ನಿರ್ಮಾಪಕ ಕರಣ್ ಜೋಹರ್ ಸೇರಿದಂತೆ ದಕ್ಷಿಣದ ಹಲವು ನಿರ್ಮಾಪಕರು ಈಗಾಗಲೇ ಮಾತನಾಡಿದ್ದಾರೆ. ಹೊಸ ನಟರುಗಳು ಸಹ ಈಗ ಹತ್ತಾರು ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ. ಸಿನಿಮಾ ಹಿಟ್ ಆಗಲಿ ಫ್ಲಾಪ್ ಆಗಲಿ ಅದಕ್ಕೂ ಅವರಿಗೂ ಸಂಬಂಧವಿಲ್ಲ. ಆದರೆ ಇಲ್ಲೊಬ್ಬ ನಾಯಕ ನಟ ಸಿನಿಮಾ ಫ್ಲಾಪ್ ಆಗಿದ್ದಕ್ಕೆ ಪಡೆದಿದ್ದ ಸಂಭಾವನೆಯನ್ನು ವಾಪಸ್ ಮಾಡಿದ್ದಾರೆ.

ಸಿದ್ದು ಜೊನ್ನಲಗಡ್ಡ ತೆಲುಗಿನ ಜನಪ್ರಿಯ ಮತ್ತು ಪ್ರತಿಭಾವಂತ ಯುವನಟ. ಇವರ ನಟನೆಯ ‘ಟಿಲ್ಲು’ ಸಿನಿಮಾ ಸಖತ್ ಹಿಟ್ ಆಗಿತ್ತು. ಇತ್ತೀಚೆಗೆ ‘ಟಿಲ್ಲು 2’ ಸಹ ಬಂದಿತ್ತು. ಆ ಸಿನಿಮಾ ಸಹ ಸೂಪರ್ ಹಿಟ್ ಆಯ್ತು. ಆ ಬಳಿಕ ಸಿದ್ದು ನಟಿಸಿದ ಸಿನಿಮಾ ಒಂದು ಇತ್ತೀಚೆಗಷ್ಟೆ ಬಿಡುಗಡೆ ಆಗಿತ್ತು. ಆ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಪ್ರದರ್ಶನ ಕಾಣಲಿಲ್ಲ. ನಿರ್ಮಾಪಕರಿಗೆ ಇದರಿಂದ ಭಾರಿ ನಷ್ಟ ಉಂಟಾಯ್ತು. ಇದೇ ಕಾರಣಕ್ಕೆ ಸಿನಿಮಾಕ್ಕೆ ತಾವು ಪಡೆದಿದ್ದ ಸಂಭಾವನೆಯನ್ನು ಮರಳಿಸಿದ್ದಾರೆ ಸಿದ್ದು.

ಸಿದ್ದು ಜೊನ್ನಲಗಡ್ಡ ‘ಜಾಕ್’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದರು. ಸಿನಿಮಾ ಏಪ್ರಿಲ್ 10 ರಂದು ಬಿಡುಗಡೆ ಆಗಿತ್ತು. ಸಿನಿಮಾನಲ್ಲಿ ಸಿದ್ದು ರಾ ಏಜೆಂಟ್ ಆಗುವ ಕನಸು ಕಾಣುತ್ತಿರುವ ಯುವಕನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದಲ್ಲಿ ನಾಯಕಿಯಾಗಿ ವೈಷ್ಣವಿ ಚೈತನ್ಯ ನಟಿಸಿದ್ದಾರೆ. ಸಿನಿಮಾಕ್ಕೆ ಸುಮಾರು 30 ಕೋಟಿ ಬಜೆಟ್ ಹಾಕಲಾಗಿತ್ತು. ಆದರೆ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಗಳಿಸಿದ್ದು 10 ಕೋಟಿಯಷ್ಟೆ.

ಇದನ್ನೂ ಓದಿ:ಪ್ರಭಾಸ್​ಗೆ 200 ಕೋಟಿ ರೂಪಾಯಿ ಸಂಭಾವನೆ ನೀಡಲು ರೆಡಿ ಇದ್ದಾರೆ ನಿರ್ಮಾಪಕರು

ಸಿನಿಮಾಕ್ಕಾಗಿ ಸಿದ್ದು ಪಡೆದಿದ್ದ ಸಂಭಾವನೆಯಲ್ಲಿ ನಾಲ್ಕು ಕೋಟಿ ಹಣವನ್ನು ಮರಳಿಸಿದ್ದಾರಂತೆ. ನಿರ್ಮಾಪಕರಗೆ ಆಗಿರುವ ಭಾರಿ ನಷ್ಟವನ್ನು ತುಂಬಿಕೊಡುವ ದೃಷ್ಟಿಯಿಂದಾಗಿ ಹೀಗೆ ಮಾಡಿದ್ದಾರೆ. ಸಿದ್ದು ಅವರ ಈ ನಡೆ ಸಿನಿಮಾ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಗಿದೆ. ಸಿದ್ದು ಜೊನ್ನಗಡ್ಡ ಹಲವು ಸಿನಿಮಾಗಳಲ್ಲಿ ಸಣ್ಣ-ಪುಟ್ಟ ಪಾತ್ರಗಳಲ್ಲಿ ನಟಿಸುತ್ತಾ ಬಂದು ನಾಯಕ ನಟ ಆದವರು. ಸಿದ್ದು ಪ್ರಸ್ತುತ, ‘ತೆಲುಸು ಕದಾ’ ಹಾಗೂ ‘ಟಿಲ್ಲು ಕ್ಯೂಬ್’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ತೆಲುಗು ಕದಾ’ ಸಿನಿಮಾನಲ್ಲಿ ಶ್ರೀನಿಧಿ ಶೆಟ್ಟಿ, ಸಿದ್ದು ಜೊತೆಗೆ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO