AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೂಂಗೆ ಕರೆದು..’; ಯುವ ನಟಿಗೆ ಲೈಂಗಿಕ ಕಿರುಕುಳ ನೀಡಿದ ಹಿರಿಯ ನಟ

ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಸ್ಥಿತಿ-ಗತಿ ಅರಿಯಲು ರಚಿಸಲಾಗಿದ್ದ ಹೇಮಾ ಸಮಿತಿಯ ವರದಿಯನ್ನು ಕೊನೆಗೂ ಕೇರಳ ಸರ್ಕಾರ ಪ್ರಕಟಿಸಿದ್ದು, ಕೆಲವು ಆಘಾತಕಾರಿ ಅಂಶಗಳು ಹೊರಬಂದಿವೆ. ಈ ಬೆನ್ನಲ್ಲೇ ಮಲಯಾಳಂನ ಹಿರಿಯ ನಟ ಸಿದ್ದಿಕಿ ಅವರ ವಿರುದ್ಧ ಯುವ ನಟಿ ರೇವತಿ ಸಂಪತ್ ಅವರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

‘ರೂಂಗೆ ಕರೆದು..’; ಯುವ ನಟಿಗೆ ಲೈಂಗಿಕ ಕಿರುಕುಳ ನೀಡಿದ ಹಿರಿಯ ನಟ
‘ರೂಂಗೆ ಕರೆದು..’; ಯುವ ನಟಿಗೆ ಲೈಂಗಿಕ ಕಿರುಕುಳ ನೀಡಿದ ಹಿರಿಯ ನಟ
ರಾಜೇಶ್ ದುಗ್ಗುಮನೆ
|

Updated on: Aug 26, 2024 | 7:32 AM

Share

ಮಲಯಾಳಂನ ಹಿರಿಯ ನಟ ಸಿದ್ದಿಕಿ ಅವರ ವಿರುದ್ಧ ಯುವ ನಟಿ ರೇವತಿ ಸಂಪತ್ ಅವರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಈ ವಿಚಾರ ಮಲಯಾಳಂ ಚಿತ್ರರಂಗದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದೆ. ಈ ಆರೋಪದ ಬೆನ್ನಲ್ಲೇ ಸಿದ್ದಿಕಿ ಅವರು ಮಲಯಾಳಂ ಕಲಾವಿದರ ಸಂಘದ (AMMA) ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಕ್ಕೆ ಇಳಿದಿದ್ದಾರೆ. ಇತ್ತೀಚೆಗೆ ಹೇಮಾ ಸಮಿತಿ ವರದಿ ಸಂಚಲನ ಸೃಷ್ಟಿಸಿತ್ತು. ಮಲಯಾಳಂ ಚಿತ್ರರಂಗದಲ್ಲಿ ನಟಿಯರಿಗೆ ಸುರಕ್ಷತೆ ಇಲ್ಲ ಎಂದೆಲ್ಲ ಹೇಳಲಾಗಿತ್ತು. ಈ ಪ್ರಕರಣದ ಬೆನ್ನಲ್ಲೇ ಈ ಆರೋಪ ಕೇಳಿ ಬಂದಿದೆ.

AMMA ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಕ್ಕೆ ಇಳಿದಿರುವ ಬಗ್ಗೆ ಅವರು ಅಧ್ಯಕ್ಷ ಮೋಹನ್​ಲಾಲ್ ಅವರಿಗೆ ಇಮೇಲ್ ಮೂಲಕ ತಿಳಿಸಿದ್ದಾರೆ. ‘ನನ್ನ ವಿರುದ್ಧ ಕೇಳಿ ಬಂದ ಆರೋಪದ ಕಾರಣಕ್ಕೆ ನಾನು ಈ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಅವರು ಹೇಳಿದ್ದಾರೆ. 2016ರಲ್ಲಿ ಸಿದ್ದಿಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ರೇವತಿ ಹೇಳಿದ್ದಾರೆ.

‘ಸಾಮಾಜಿಕ ಜಾಲತಾಣದ ಮೂಲಕ ಸಿದ್ದಿಕಿ ನನ್ನನ್ನು ಸಂಪರ್ಕಿಸಿದರು. ಮಗಳೇ ಎಂದು ಅವರು ಕರೆಯುತ್ತಿದ್ದರು. ನಾನು ದ್ವಿತೀಯ ಪಿಯುಸಿ ಮುಗಿಸಿದ ಬಳಿಕ ಅವರು ನನ್ನನ್ನು ಮತ್ತೆ ಸಂಪರ್ಕಿಸಿದರು. ಆಗಲೂ ಅವರು ಮಗಳೇ ಎನ್ನುತ್ತಿದ್ದರು. ಅವರ ಉದ್ದೇಶ ಕೆಟ್ಟದಿದೆ ಎಂದು ತಿಳಿಯುವ ವಯಸ್ಸು ನನ್ನದಾಗಿರಲಿಲ್ಲ. ನನಗೆ ನಟನೆಯಲ್ಲಿ ಆಸಕ್ತಿ ಇದೆಯೇ ಎಂದು ಕೇಳಿದ್ದರು’ ಎಂದು ರೇವತಿ ಸಂಪತ್ ಟಿವಿ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

‘21ನೇ ವಯಸ್ಸಿಗೆ ನಾನು ಸ್ಥಳೀಯ ಥಿಯೇಟರ್​ಗೆ ‘ಸುಖಮೈರಿಕ್ಕಟ್ಟೆ’ ಸಿನಿಮಾ ನೋಡಲು ಹೋಗಿದ್ದೆ. ನಂತರ ಸಿದ್ದಿಕಿ ಅವರು ಸಿನಿಮಾ ಬಗ್ಗೆ ಮಾತನಾಡಲು ಹೋಟೆಲ್ ಒಂದಕ್ಕೆ ಕರೆದರು. ನನ್ನನ್ನು ರೂಂನಲ್ಲಿ ಲಾಕ್ ಮಾಡಲಾಗಿತ್ತು. ನನ್ನನ್ನು ಅವರು ದೈಹಿಕವಾಗಿ ಬಳಸಿಕೊಂಡಿದ್ದಾರೆ. ಅವರು ಬಂದು ಅಪ್ಪಿದರು. ನಾನು ಬದುಕುತ್ತೀನಾ ಎಂದೆಲ್ಲ ಅನಿಸಿತ್ತು’ ಎಂದಿದ್ದಾರೆ ಅವರು.

ಇದನ್ನೂ ಓದಿ: ಮಲಯಾಳಂ ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಹೇಮಾ ಸಮಿತಿ ವರದಿ

‘ನಾನು ಕಷ್ಟಪಟ್ಟು ರೂಂನಿಂದ ಹೊರಬಂದೆ. ನಾನು ಈ ವಿಚಾರವನ್ನು ಸಾರ್ವಜನಿಕವಾಗಿ ಹೇಳುತ್ತೇನೆ ಎಂದು ಆಗಲೇ ಹೇಳಿದ್ದೆ.  ನಿನ್ನನ್ನು ಯಾರು ನಂಬುತ್ತಾರೆ? ನೀನು ಒಂದು ಸಿನಿಮಾದಲ್ಲಾದರೂ ನಟಿಸಿದ್ದೀಯಾ? ನಿನ್ನನ್ನು ಯಾರೂ ಗುರುತಿಸಲ್ಲ ಎಂದಿದ್ದರು. ನನಗೆ ಈ ನೋವು ಹಾಗೆಯೇ ಇದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!