ಸೆಟ್​ನಲ್ಲಿ ರಶ್ಮಿಕಾ ಮಂದಣ್ಣ ವರ್ತನೆ ಕಂಡು ಅಚ್ಚರಿಗೊಂಡಿದ್ದ ಸಿದ್ದಾರ್ಥ್​ ಮಲ್ಹೋತ್ರ

ರಶ್ಮಿಕಾ ಮಂದಣ್ಣ ಅವರು ಸಂದರ್ಶನ ನೀಡುವಾಗ, ಪಾಪರಾಜಿಗಳು ಎದುರಾದಾಗ ಕೈ ಸನ್ನೆ ಮೂಲಕ ತಮ್ಮ ಭಾವನೆ ಹೊರಹಾಕುತ್ತಾರೆ. ಹಾರ್ಟ್ ಮಾರ್ಕ್​ ಮತ್ತಿತ್ಯಾದಿ ಸನ್ನೆಗಳನ್ನು ತೋರಿಸುತ್ತಾರೆ.

ಸೆಟ್​ನಲ್ಲಿ ರಶ್ಮಿಕಾ ಮಂದಣ್ಣ ವರ್ತನೆ ಕಂಡು ಅಚ್ಚರಿಗೊಂಡಿದ್ದ ಸಿದ್ದಾರ್ಥ್​ ಮಲ್ಹೋತ್ರ
ರಶ್ಮಿಕಾ-ಸಿದ್ದಾರ್ಥ್
Follow us
| Updated By: ರಾಜೇಶ್ ದುಗ್ಗುಮನೆ

Updated on: Feb 08, 2023 | 1:08 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಬೇಡಿಕೆಯ ನಟಿ. ಅವರು ಹಲವು ಭಾಷೆಗಳಲ್ಲಿ ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಕಳೆದ ತಿಂಗಳು ರಶ್ಮಿಕಾ ಮಂದಣ್ಣ ಅವರು ಬ್ಯಾಕ್ ಟು ಬ್ಯಾಕ್ ಹಿಟ್ ನೀಡಿದ್ದಾರೆ. ಅವರ ನಟನೆಯ ‘ಅನಿಮಲ್​’ ಹಾಗೂ ‘ಪುಷ್ಪ 2’ ಚಿತ್ರದ ಕೆಲಸಗಳು ಭರದಿಂದ ಸಾಗಿವೆ. ‘ಮಿಷನ್​ ಮಜ್ನು’ (Mission Majnu Movie) ಸಿನಿಮಾದ ಸೆಟ್​​ನಲ್ಲಿ ರಶ್ಮಿಕಾ ಮಂದಣ್ಣ ಅವರು ಯಾವ ರೀತಿ ಇರುತ್ತಿದ್ದರು ಎನ್ನುವ ಬಗ್ಗೆ ಸಿದ್ದಾರ್ಥ್​ ಮಲ್ಹೋತ್ರ ಮಾಹಿತಿ ನೀಡಿದ್ದಾರೆ. ಅವರ ವರ್ತನೆ ಕಂಡು ಆರಂಭದಲ್ಲಿ ಸಿದ್ದಾರ್ಥ್ ಅಚ್ಚರಿಗೊಂಡಿದ್ದರಂತೆ.

ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದರು. ಕೆಲವೇ ವರ್ಷಗಳಲ್ಲಿ ಅವರು ಯಶಸ್ಸಿನ ಉತ್ತುಂಗಕ್ಕೆ ಹೋದರು. ತೆಲುಗು, ಬಾಲಿವುಡ್ ಹಾಗೂ ಕಾಲಿವುಡ್​ನಲ್ಲಿ ನೆಲೆ ಕಂಡುಕೊಂಡರು. ಜನವರಿ ತಿಂಗಳಲ್ಲಿ ಅವರ ನಟನೆಯ ‘ವಾರಿಸು’ ಹಾಗೂ ‘ಮಿಷನ್ ಮಜ್ನು’ ಸಿನಿಮಾಗಳು ರಿಲೀಸ್ ಆಗಿ ಯಶಸ್ಸು ಕಂಡಿವೆ. ‘ವಾರಿಸು’ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ಬಾಚಿಕೊಂಡರೆ, ‘ಮಿಷನ್​ ಮಜ್ನು’ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಗಿ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ರಶ್ಮಿಕಾ ‘ಮಿಷನ್ ಮಜ್ನು’ ಸೆಟ್​ನಲ್ಲಿ ಹೇಗಿರುತ್ತಿದ್ದರು ಎಂಬುದನ್ನು ಸಿದ್ದಾರ್ಥ್ ವಿವರಿಸಿದ್ದಾರೆ.

ಇದನ್ನೂ ಓದಿ
Image
Mili Twitter Review: ಜಾನ್ವಿ ಕಪೂರ್​ ಅಭಿನಯಕ್ಕೆ ಕೇಳಿಬರ್ತಿದೆ ಮೆಚ್ಚುಗೆ; ‘ಮಿಲಿ’ ನೋಡಿ ವಿಮರ್ಶೆ ತಿಳಿಸಿದ ಸಿನಿಪ್ರಿಯರು
Image
Gandhada Gudi Twitter Review: ಹೇಗಿದೆ ‘ಗಂಧದ ಗುಡಿ’?; ಪ್ರೀಮಿಯರ್​ ಶೋ ಬಳಿಕ ಟ್ವಿಟರ್​ ಮೂಲಕ ವಿಮರ್ಶೆ ತಿಳಿಸಿದ ಫ್ಯಾನ್ಸ್​
Image
Ram Setu Twitter Review: ‘ರಾಮ್​ ಸೇತು’ ಟ್ವಿಟರ್​ ವಿಮರ್ಶೆ: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಜನರಿಂದ ಸಿಕ್ತಾ ಪ್ರಶಂಸೆ?
Image
Goodbye Twitter Review: ರಶ್ಮಿಕಾ ಮೊದಲ ಹಿಂದಿ ಚಿತ್ರ ‘ಗುಡ್​ಬೈ’ ಹೇಗಿದೆ? ಜನರು ತಿಳಿಸಿದ ಟ್ವಿಟರ್ ವಿಮರ್ಶೆ ಇಲ್ಲಿದೆ ಓದಿ..

ರಶ್ಮಿಕಾ ಮಂದಣ್ಣ ಅವರು ಸಂದರ್ಶನ ನೀಡುವಾಗ, ಪಾಪರಾಜಿಗಳು ಎದುರಾದಾಗ ಕೈ ಸನ್ನೆ ಮೂಲಕ ತಮ್ಮ ಭಾವನೆ ಹೊರಹಾಕುತ್ತಾರೆ. ಹಾರ್ಟ್ ಮಾರ್ಕ್​ ಮತ್ತಿತ್ಯಾದಿ ಸನ್ನೆಗಳನ್ನು ತೋರಿಸುತ್ತಾರೆ. ಕೆಲವರಿಗೆ ಇದು ಓವರ್​ಆ್ಯಕ್ಟಿಂಗ್ ಎಂದನಿಸಿದ್ದಿದೆ. ರಶ್ಮಿಕಾ ಅವರು ಸೆಟ್​​ನಲ್ಲಿ ಬಂದಾಗ ಇದೇ ರೀತಿ ಮಾಡಿದ್ದರಂತೆ. ಈ ಬಗ್ಗೆ ಸಿದ್ದಾರ್ಥ್ ಮಾತನಾಡಿರುವ ವಿಡಿಯೋ ಈಗ ವೈರಲ್ ಆಗಿದೆ. ಕೆಲವರು ಈ ಹೇಳಿಕೆಯನ್ನು ಟ್ರೋಲ್ ಮಾಡಿದ್ದಾರೆ.

‘ರಶ್ಮಿಕಾ ಅವರು ಒಪ್ಪಿಕೊಂಡ ಮೊದಲು ಹಿಂದಿ ಸಿನಿಮಾ (ಮಿಷನ್ ಮಜ್ನು) ಇದು. ಅವರಿಂದ ಸಾಕಷ್ಟು ವಿಚಾರ ಕಲಿತೆ’ ಎಂದಿದ್ದಾರೆ ಸಿದ್ದಾರ್ಥ್ ಮಲ್ಹೋತ್ರ. ಈ ವೇಳೆ ರಶ್ಮಿಕಾ ಯಾವ ರೀತಿ ನಡೆದುಕೊಳ್ಳುತ್ತಿದ್ದರು ಎಂಬುದನ್ನು ಹೇಳಿದ್ದಾರೆ. ಅವರ ಕೈ ಸನ್ನೆಗಳು ಸಿದ್ದಾರ್ಥ್​ಗೆ ತುಂಬಾನೇ ವಿಚಿತ್ರ ಎನಿಸಿದ್ದವು.

View this post on Instagram

A post shared by Masoom Edits (@masoom.edits)

ಇದನ್ನೂ ಓದಿ: ಅಭಿಮಾನಿಗೆ ಪ್ರಪೋಸ್ ಮಾಡೋದು ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ; ವಿಡಿಯೋ ವೈರಲ್

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಹಾಗೂ ‘ಅನಿಮಲ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇನ್ನೂ ಅನೇಕ ಚಿತ್ರಗಳ ಕಥೆಯನ್ನು ಅವರು ಕೇಳುತ್ತಿದ್ದಾರೆ. ‘ವಾರಿಸು’ ಸಿನಿಮಾ ಹಿಟ್ ಆದ ಕಾರಣ ಅವರಿಗೆ ತಮಿಳಿನಲ್ಲಿ ಹಲವು ಆಫರ್​ಗಳು ಬರುತ್ತಿವೆ. ಎಲ್ಲವನ್ನೂ ಒಪ್ಪಿಕೊಂಡು ಅವರು ನಟಿಸುತ್ತಿಲ್ಲ. ಇನ್ನು ಸಿದ್ದಾರ್ಥ್ ಮಲ್ಹೋತ್ರ ಅವರು ಕಿಯಾರಾ ಜತೆ ಇತ್ತೀಚೆಗಷ್ಟೇ ಮದುವೆ ಆಗಿದ್ದಾರೆ. ಪತ್ನಿ ಜತೆ ಅವರು ಹನಿಮೂನ್​ಗೆ ತೆರಳಲಿದ್ದಾರೆ ಎನ್ನಲಾಗಿದೆ.

ಶ್ರೀಲಕ್ಷ್ಮಿ ಎಚ್​.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ