Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವೇದಿಕೆ ಮೇಲೆ ಸಿದ್ದಾರ್ಥ್​ ಶುಕ್ಲಾಗೆ ಬರ್ತ್​ಡೇ ವಿಶ್​ ತಿಳಿಸಿದ ಸಲ್ಮಾನ್​ ಖಾನ್​

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್​ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್​ ಬಾಸ್​ ಸೀಸನ್​ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಸೆಪ್ಟೆಂಬರ್ 1ರಂದು ಇವರು ನಿಧನ ಹೊಂದಿದ್ದರು.

ಬಿಗ್​ ಬಾಸ್​ ವೇದಿಕೆ ಮೇಲೆ ಸಿದ್ದಾರ್ಥ್​ ಶುಕ್ಲಾಗೆ ಬರ್ತ್​ಡೇ ವಿಶ್​ ತಿಳಿಸಿದ ಸಲ್ಮಾನ್​ ಖಾನ್​
ಸಿದ್ದಾರ್ಥ್​ ಶುಕ್ಲಾ-ಸಲ್ಮಾನ್​ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 13, 2021 | 3:07 PM

ಹಿಂದಿ ಬಿಗ್​ ಬಾಸ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ಅವರು ನಮ್ಮನ್ನು ಅಗಲಿ ಹಲವು ತಿಂಗಳು ಕಳೆದಿದೆ. ಅವರ ಅಕಾಲಿಕ ಮರಣದಿಂದ ಬಣ್ಣದ ಲೋಕಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ. ಈಗಲೂ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ಭಾನುವಾರ (ಡಿಸೆಂಬರ್ 12) ಸಿದ್ದಾರ್ಥ್​ ಶುಕ್ಲಾ ಬರ್ತ್​ಡೇ. ಈ ವೇಳೆ ಅವರನ್ನು ನೆನಪಿಸಿಕೊಳ್ಳುವ ಕಾರ್ಯವನ್ನು ಸಲ್ಮಾನ್​ ಖಾನ್​ ಮಾಡಿದ್ದಾರೆ. ಬಿಗ್​ ಬಾಸ್​ ವೇದಿಕೆ ಮೇಲೆಯೇ ಸಿದ್ದಾರ್ಥ್​ ಅವರನ್ನು ಸಲ್ಲು ನೆನೆದರು. ಈ ವೇಳೆ ಅವರು ಭಾವುಕರಾದರು.

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್​ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್​ ಬಾಸ್​ ಸೀಸನ್​ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಸೆಪ್ಟೆಂಬರ್ 1ರಂದು ಇವರು ನಿಧನ ಹೊಂದಿದ್ದರು. ಇದು ಅಭಿಮಾನಿಗಳಿಗೆ ಶಾಕ್​ ನೀಡಿತ್ತು. ಅಲ್ಲದೆ, ಅವರ ಕುಟುಂಬಕ್ಕೂ ಸಾಕಷ್ಟು ನೋವು ತಂದಿತ್ತು. ಸಿದ್ದಾರ್ಥ್​ ಸಾವು ಸಲ್ಮಾನ್​ ಖಾನ್​ಗೂ ಬೇಸರ ತಂದಿದೆ.

ಭಾನುವಾರ ವೇದಿಕೆ ಮೇಲೆ ಮಾತನಾಡಿದ ಸಲ್ಮಾನ್​ ಖಾನ್​, ‘ಇಂದು ಬಿಗ್​ ಬಾಸ್​ ವಿನ್ನರ್​ ಜನ್ಮದಿನ. ಆದರೆ, ಅವರು ನಮ್ಮೊಂದಿಗೆ ಇಲ್ಲ. ಅವರ ಜಾಗವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಸಿದ್ದಾರ್ಥ್​ ನಮ್ಮನ್ನು ಅಗಲಿ ತುಂಬಾನೇ ಬೇಗ ಹೋಗಿದ್ದಾರೆ. ಈ ವಿಶೇಷ ದಿನಕ್ಕೆ ನಾವು ಅವರಿಗೆ ಶುಭ ಕೋರುತ್ತಿದ್ದೇವೆ. ಈ ಎಪಿಸೋಡ್​ ಅವರಿಗಾಗಿ ಅರ್ಪರಣೆ​ ಮಾಡುತ್ತಿದ್ದೇವೆ’ ಎಂದಿದ್ದಾರೆ ಸಲ್ಮಾನ್​ ಖಾನ್​.

ಸಿದ್ದಾರ್ಥ್​ ಸಾವಿನ ಕುರಿತು ಕೆಲವು ಅಚ್ಚರಿಯ ಮಾಹಿತಿಗಳು ಹೊರಬಂದಿತ್ತು. ಹೃದಯಾಘಾತ ಆಗುವ ಸಂದರ್ಭದಲ್ಲಿ ಅವರ ಪ್ರೇಯಸಿ ಶೆಹನಾಜ್​ ಗಿಲ್​ ಕೂಡ ಜೊತೆಯಲ್ಲೇ ಇದ್ದರು ಎಂಬ ಸುದ್ದಿ ಕೇಳಿಬಂದಿತ್ತು. ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್ ಮತ್ತು ಸಿದ್ದಾರ್ಥ್​ ಶುಕ್ಲಾ ಸ್ಪರ್ಧಿಸಿದ್ದರು. ಆಗ ಇಬ್ಬರ ನಡುವೆ ಆಪ್ತತೆ ಬೆಳೆದಿತ್ತು.

ಇದನ್ನೂ ಓದಿ: ‘ನೀನೂ ಸತ್ತು ಹೋಗು’: ಸಿದ್ದಾರ್ಥ್​ ಶುಕ್ಲಾ ನಿಧನದ ಬಳಿಕ ಕಿಡಿಗೇಡಿಗಳಿಂದ ನಟಿಗೆ ಮೆಸೇಜ್​; ಆಸ್ಪತ್ರೆಗೆ ದಾಖಲು

ಮಾತಾಡುತ್ತಿದೆಯಾ ಸಿದ್ದಾರ್ಥ್​ ಶುಕ್ಲಾ ಆತ್ಮ? ವೈರಲ್​ ಆಗುತ್ತಿದೆ ವಿಚಿತ್ರ ಧ್ವನಿ ಇರುವ ವಿಡಿಯೋ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು