AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವೇದಿಕೆ ಮೇಲೆ ಸಿದ್ದಾರ್ಥ್​ ಶುಕ್ಲಾಗೆ ಬರ್ತ್​ಡೇ ವಿಶ್​ ತಿಳಿಸಿದ ಸಲ್ಮಾನ್​ ಖಾನ್​

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್​ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್​ ಬಾಸ್​ ಸೀಸನ್​ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಸೆಪ್ಟೆಂಬರ್ 1ರಂದು ಇವರು ನಿಧನ ಹೊಂದಿದ್ದರು.

ಬಿಗ್​ ಬಾಸ್​ ವೇದಿಕೆ ಮೇಲೆ ಸಿದ್ದಾರ್ಥ್​ ಶುಕ್ಲಾಗೆ ಬರ್ತ್​ಡೇ ವಿಶ್​ ತಿಳಿಸಿದ ಸಲ್ಮಾನ್​ ಖಾನ್​
ಸಿದ್ದಾರ್ಥ್​ ಶುಕ್ಲಾ-ಸಲ್ಮಾನ್​ ಖಾನ್​
TV9 Web
| Edited By: |

Updated on: Dec 13, 2021 | 3:07 PM

Share

ಹಿಂದಿ ಬಿಗ್​ ಬಾಸ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ಅವರು ನಮ್ಮನ್ನು ಅಗಲಿ ಹಲವು ತಿಂಗಳು ಕಳೆದಿದೆ. ಅವರ ಅಕಾಲಿಕ ಮರಣದಿಂದ ಬಣ್ಣದ ಲೋಕಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ. ಈಗಲೂ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ಭಾನುವಾರ (ಡಿಸೆಂಬರ್ 12) ಸಿದ್ದಾರ್ಥ್​ ಶುಕ್ಲಾ ಬರ್ತ್​ಡೇ. ಈ ವೇಳೆ ಅವರನ್ನು ನೆನಪಿಸಿಕೊಳ್ಳುವ ಕಾರ್ಯವನ್ನು ಸಲ್ಮಾನ್​ ಖಾನ್​ ಮಾಡಿದ್ದಾರೆ. ಬಿಗ್​ ಬಾಸ್​ ವೇದಿಕೆ ಮೇಲೆಯೇ ಸಿದ್ದಾರ್ಥ್​ ಅವರನ್ನು ಸಲ್ಲು ನೆನೆದರು. ಈ ವೇಳೆ ಅವರು ಭಾವುಕರಾದರು.

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್​ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್​ ಬಾಸ್​ ಸೀಸನ್​ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಸೆಪ್ಟೆಂಬರ್ 1ರಂದು ಇವರು ನಿಧನ ಹೊಂದಿದ್ದರು. ಇದು ಅಭಿಮಾನಿಗಳಿಗೆ ಶಾಕ್​ ನೀಡಿತ್ತು. ಅಲ್ಲದೆ, ಅವರ ಕುಟುಂಬಕ್ಕೂ ಸಾಕಷ್ಟು ನೋವು ತಂದಿತ್ತು. ಸಿದ್ದಾರ್ಥ್​ ಸಾವು ಸಲ್ಮಾನ್​ ಖಾನ್​ಗೂ ಬೇಸರ ತಂದಿದೆ.

ಭಾನುವಾರ ವೇದಿಕೆ ಮೇಲೆ ಮಾತನಾಡಿದ ಸಲ್ಮಾನ್​ ಖಾನ್​, ‘ಇಂದು ಬಿಗ್​ ಬಾಸ್​ ವಿನ್ನರ್​ ಜನ್ಮದಿನ. ಆದರೆ, ಅವರು ನಮ್ಮೊಂದಿಗೆ ಇಲ್ಲ. ಅವರ ಜಾಗವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಸಿದ್ದಾರ್ಥ್​ ನಮ್ಮನ್ನು ಅಗಲಿ ತುಂಬಾನೇ ಬೇಗ ಹೋಗಿದ್ದಾರೆ. ಈ ವಿಶೇಷ ದಿನಕ್ಕೆ ನಾವು ಅವರಿಗೆ ಶುಭ ಕೋರುತ್ತಿದ್ದೇವೆ. ಈ ಎಪಿಸೋಡ್​ ಅವರಿಗಾಗಿ ಅರ್ಪರಣೆ​ ಮಾಡುತ್ತಿದ್ದೇವೆ’ ಎಂದಿದ್ದಾರೆ ಸಲ್ಮಾನ್​ ಖಾನ್​.

ಸಿದ್ದಾರ್ಥ್​ ಸಾವಿನ ಕುರಿತು ಕೆಲವು ಅಚ್ಚರಿಯ ಮಾಹಿತಿಗಳು ಹೊರಬಂದಿತ್ತು. ಹೃದಯಾಘಾತ ಆಗುವ ಸಂದರ್ಭದಲ್ಲಿ ಅವರ ಪ್ರೇಯಸಿ ಶೆಹನಾಜ್​ ಗಿಲ್​ ಕೂಡ ಜೊತೆಯಲ್ಲೇ ಇದ್ದರು ಎಂಬ ಸುದ್ದಿ ಕೇಳಿಬಂದಿತ್ತು. ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್ ಮತ್ತು ಸಿದ್ದಾರ್ಥ್​ ಶುಕ್ಲಾ ಸ್ಪರ್ಧಿಸಿದ್ದರು. ಆಗ ಇಬ್ಬರ ನಡುವೆ ಆಪ್ತತೆ ಬೆಳೆದಿತ್ತು.

ಇದನ್ನೂ ಓದಿ: ‘ನೀನೂ ಸತ್ತು ಹೋಗು’: ಸಿದ್ದಾರ್ಥ್​ ಶುಕ್ಲಾ ನಿಧನದ ಬಳಿಕ ಕಿಡಿಗೇಡಿಗಳಿಂದ ನಟಿಗೆ ಮೆಸೇಜ್​; ಆಸ್ಪತ್ರೆಗೆ ದಾಖಲು

ಮಾತಾಡುತ್ತಿದೆಯಾ ಸಿದ್ದಾರ್ಥ್​ ಶುಕ್ಲಾ ಆತ್ಮ? ವೈರಲ್​ ಆಗುತ್ತಿದೆ ವಿಚಿತ್ರ ಧ್ವನಿ ಇರುವ ವಿಡಿಯೋ

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು