AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವೇದಿಕೆ ಮೇಲೆ ಸಿದ್ದಾರ್ಥ್​ ಶುಕ್ಲಾಗೆ ಬರ್ತ್​ಡೇ ವಿಶ್​ ತಿಳಿಸಿದ ಸಲ್ಮಾನ್​ ಖಾನ್​

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್​ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್​ ಬಾಸ್​ ಸೀಸನ್​ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಸೆಪ್ಟೆಂಬರ್ 1ರಂದು ಇವರು ನಿಧನ ಹೊಂದಿದ್ದರು.

ಬಿಗ್​ ಬಾಸ್​ ವೇದಿಕೆ ಮೇಲೆ ಸಿದ್ದಾರ್ಥ್​ ಶುಕ್ಲಾಗೆ ಬರ್ತ್​ಡೇ ವಿಶ್​ ತಿಳಿಸಿದ ಸಲ್ಮಾನ್​ ಖಾನ್​
ಸಿದ್ದಾರ್ಥ್​ ಶುಕ್ಲಾ-ಸಲ್ಮಾನ್​ ಖಾನ್​
TV9 Web
| Edited By: |

Updated on: Dec 13, 2021 | 3:07 PM

Share

ಹಿಂದಿ ಬಿಗ್​ ಬಾಸ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ಅವರು ನಮ್ಮನ್ನು ಅಗಲಿ ಹಲವು ತಿಂಗಳು ಕಳೆದಿದೆ. ಅವರ ಅಕಾಲಿಕ ಮರಣದಿಂದ ಬಣ್ಣದ ಲೋಕಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ. ಈಗಲೂ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ಭಾನುವಾರ (ಡಿಸೆಂಬರ್ 12) ಸಿದ್ದಾರ್ಥ್​ ಶುಕ್ಲಾ ಬರ್ತ್​ಡೇ. ಈ ವೇಳೆ ಅವರನ್ನು ನೆನಪಿಸಿಕೊಳ್ಳುವ ಕಾರ್ಯವನ್ನು ಸಲ್ಮಾನ್​ ಖಾನ್​ ಮಾಡಿದ್ದಾರೆ. ಬಿಗ್​ ಬಾಸ್​ ವೇದಿಕೆ ಮೇಲೆಯೇ ಸಿದ್ದಾರ್ಥ್​ ಅವರನ್ನು ಸಲ್ಲು ನೆನೆದರು. ಈ ವೇಳೆ ಅವರು ಭಾವುಕರಾದರು.

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್​ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್​ ಬಾಸ್​ ಸೀಸನ್​ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಸೆಪ್ಟೆಂಬರ್ 1ರಂದು ಇವರು ನಿಧನ ಹೊಂದಿದ್ದರು. ಇದು ಅಭಿಮಾನಿಗಳಿಗೆ ಶಾಕ್​ ನೀಡಿತ್ತು. ಅಲ್ಲದೆ, ಅವರ ಕುಟುಂಬಕ್ಕೂ ಸಾಕಷ್ಟು ನೋವು ತಂದಿತ್ತು. ಸಿದ್ದಾರ್ಥ್​ ಸಾವು ಸಲ್ಮಾನ್​ ಖಾನ್​ಗೂ ಬೇಸರ ತಂದಿದೆ.

ಭಾನುವಾರ ವೇದಿಕೆ ಮೇಲೆ ಮಾತನಾಡಿದ ಸಲ್ಮಾನ್​ ಖಾನ್​, ‘ಇಂದು ಬಿಗ್​ ಬಾಸ್​ ವಿನ್ನರ್​ ಜನ್ಮದಿನ. ಆದರೆ, ಅವರು ನಮ್ಮೊಂದಿಗೆ ಇಲ್ಲ. ಅವರ ಜಾಗವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಸಿದ್ದಾರ್ಥ್​ ನಮ್ಮನ್ನು ಅಗಲಿ ತುಂಬಾನೇ ಬೇಗ ಹೋಗಿದ್ದಾರೆ. ಈ ವಿಶೇಷ ದಿನಕ್ಕೆ ನಾವು ಅವರಿಗೆ ಶುಭ ಕೋರುತ್ತಿದ್ದೇವೆ. ಈ ಎಪಿಸೋಡ್​ ಅವರಿಗಾಗಿ ಅರ್ಪರಣೆ​ ಮಾಡುತ್ತಿದ್ದೇವೆ’ ಎಂದಿದ್ದಾರೆ ಸಲ್ಮಾನ್​ ಖಾನ್​.

ಸಿದ್ದಾರ್ಥ್​ ಸಾವಿನ ಕುರಿತು ಕೆಲವು ಅಚ್ಚರಿಯ ಮಾಹಿತಿಗಳು ಹೊರಬಂದಿತ್ತು. ಹೃದಯಾಘಾತ ಆಗುವ ಸಂದರ್ಭದಲ್ಲಿ ಅವರ ಪ್ರೇಯಸಿ ಶೆಹನಾಜ್​ ಗಿಲ್​ ಕೂಡ ಜೊತೆಯಲ್ಲೇ ಇದ್ದರು ಎಂಬ ಸುದ್ದಿ ಕೇಳಿಬಂದಿತ್ತು. ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್ ಮತ್ತು ಸಿದ್ದಾರ್ಥ್​ ಶುಕ್ಲಾ ಸ್ಪರ್ಧಿಸಿದ್ದರು. ಆಗ ಇಬ್ಬರ ನಡುವೆ ಆಪ್ತತೆ ಬೆಳೆದಿತ್ತು.

ಇದನ್ನೂ ಓದಿ: ‘ನೀನೂ ಸತ್ತು ಹೋಗು’: ಸಿದ್ದಾರ್ಥ್​ ಶುಕ್ಲಾ ನಿಧನದ ಬಳಿಕ ಕಿಡಿಗೇಡಿಗಳಿಂದ ನಟಿಗೆ ಮೆಸೇಜ್​; ಆಸ್ಪತ್ರೆಗೆ ದಾಖಲು

ಮಾತಾಡುತ್ತಿದೆಯಾ ಸಿದ್ದಾರ್ಥ್​ ಶುಕ್ಲಾ ಆತ್ಮ? ವೈರಲ್​ ಆಗುತ್ತಿದೆ ವಿಚಿತ್ರ ಧ್ವನಿ ಇರುವ ವಿಡಿಯೋ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ