AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವೇದಿಕೆ ಮೇಲೆ ಸಿದ್ದಾರ್ಥ್​ ಶುಕ್ಲಾಗೆ ಬರ್ತ್​ಡೇ ವಿಶ್​ ತಿಳಿಸಿದ ಸಲ್ಮಾನ್​ ಖಾನ್​

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್​ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್​ ಬಾಸ್​ ಸೀಸನ್​ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಸೆಪ್ಟೆಂಬರ್ 1ರಂದು ಇವರು ನಿಧನ ಹೊಂದಿದ್ದರು.

ಬಿಗ್​ ಬಾಸ್​ ವೇದಿಕೆ ಮೇಲೆ ಸಿದ್ದಾರ್ಥ್​ ಶುಕ್ಲಾಗೆ ಬರ್ತ್​ಡೇ ವಿಶ್​ ತಿಳಿಸಿದ ಸಲ್ಮಾನ್​ ಖಾನ್​
ಸಿದ್ದಾರ್ಥ್​ ಶುಕ್ಲಾ-ಸಲ್ಮಾನ್​ ಖಾನ್​
TV9 Web
| Edited By: |

Updated on: Dec 13, 2021 | 3:07 PM

Share

ಹಿಂದಿ ಬಿಗ್​ ಬಾಸ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ಅವರು ನಮ್ಮನ್ನು ಅಗಲಿ ಹಲವು ತಿಂಗಳು ಕಳೆದಿದೆ. ಅವರ ಅಕಾಲಿಕ ಮರಣದಿಂದ ಬಣ್ಣದ ಲೋಕಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ. ಈಗಲೂ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ಭಾನುವಾರ (ಡಿಸೆಂಬರ್ 12) ಸಿದ್ದಾರ್ಥ್​ ಶುಕ್ಲಾ ಬರ್ತ್​ಡೇ. ಈ ವೇಳೆ ಅವರನ್ನು ನೆನಪಿಸಿಕೊಳ್ಳುವ ಕಾರ್ಯವನ್ನು ಸಲ್ಮಾನ್​ ಖಾನ್​ ಮಾಡಿದ್ದಾರೆ. ಬಿಗ್​ ಬಾಸ್​ ವೇದಿಕೆ ಮೇಲೆಯೇ ಸಿದ್ದಾರ್ಥ್​ ಅವರನ್ನು ಸಲ್ಲು ನೆನೆದರು. ಈ ವೇಳೆ ಅವರು ಭಾವುಕರಾದರು.

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್​ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್​ ಬಾಸ್​ ಸೀಸನ್​ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಸೆಪ್ಟೆಂಬರ್ 1ರಂದು ಇವರು ನಿಧನ ಹೊಂದಿದ್ದರು. ಇದು ಅಭಿಮಾನಿಗಳಿಗೆ ಶಾಕ್​ ನೀಡಿತ್ತು. ಅಲ್ಲದೆ, ಅವರ ಕುಟುಂಬಕ್ಕೂ ಸಾಕಷ್ಟು ನೋವು ತಂದಿತ್ತು. ಸಿದ್ದಾರ್ಥ್​ ಸಾವು ಸಲ್ಮಾನ್​ ಖಾನ್​ಗೂ ಬೇಸರ ತಂದಿದೆ.

ಭಾನುವಾರ ವೇದಿಕೆ ಮೇಲೆ ಮಾತನಾಡಿದ ಸಲ್ಮಾನ್​ ಖಾನ್​, ‘ಇಂದು ಬಿಗ್​ ಬಾಸ್​ ವಿನ್ನರ್​ ಜನ್ಮದಿನ. ಆದರೆ, ಅವರು ನಮ್ಮೊಂದಿಗೆ ಇಲ್ಲ. ಅವರ ಜಾಗವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಸಿದ್ದಾರ್ಥ್​ ನಮ್ಮನ್ನು ಅಗಲಿ ತುಂಬಾನೇ ಬೇಗ ಹೋಗಿದ್ದಾರೆ. ಈ ವಿಶೇಷ ದಿನಕ್ಕೆ ನಾವು ಅವರಿಗೆ ಶುಭ ಕೋರುತ್ತಿದ್ದೇವೆ. ಈ ಎಪಿಸೋಡ್​ ಅವರಿಗಾಗಿ ಅರ್ಪರಣೆ​ ಮಾಡುತ್ತಿದ್ದೇವೆ’ ಎಂದಿದ್ದಾರೆ ಸಲ್ಮಾನ್​ ಖಾನ್​.

ಸಿದ್ದಾರ್ಥ್​ ಸಾವಿನ ಕುರಿತು ಕೆಲವು ಅಚ್ಚರಿಯ ಮಾಹಿತಿಗಳು ಹೊರಬಂದಿತ್ತು. ಹೃದಯಾಘಾತ ಆಗುವ ಸಂದರ್ಭದಲ್ಲಿ ಅವರ ಪ್ರೇಯಸಿ ಶೆಹನಾಜ್​ ಗಿಲ್​ ಕೂಡ ಜೊತೆಯಲ್ಲೇ ಇದ್ದರು ಎಂಬ ಸುದ್ದಿ ಕೇಳಿಬಂದಿತ್ತು. ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್ ಮತ್ತು ಸಿದ್ದಾರ್ಥ್​ ಶುಕ್ಲಾ ಸ್ಪರ್ಧಿಸಿದ್ದರು. ಆಗ ಇಬ್ಬರ ನಡುವೆ ಆಪ್ತತೆ ಬೆಳೆದಿತ್ತು.

ಇದನ್ನೂ ಓದಿ: ‘ನೀನೂ ಸತ್ತು ಹೋಗು’: ಸಿದ್ದಾರ್ಥ್​ ಶುಕ್ಲಾ ನಿಧನದ ಬಳಿಕ ಕಿಡಿಗೇಡಿಗಳಿಂದ ನಟಿಗೆ ಮೆಸೇಜ್​; ಆಸ್ಪತ್ರೆಗೆ ದಾಖಲು

ಮಾತಾಡುತ್ತಿದೆಯಾ ಸಿದ್ದಾರ್ಥ್​ ಶುಕ್ಲಾ ಆತ್ಮ? ವೈರಲ್​ ಆಗುತ್ತಿದೆ ವಿಚಿತ್ರ ಧ್ವನಿ ಇರುವ ವಿಡಿಯೋ

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!