AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸಿಂಬು ಕಾರು ಅಪಘಾತ; 70 ವರ್ಷದ ವ್ಯಕ್ತಿ ಸಾವು: ಆ್ಯಕ್ಸಿಡೆಂಟ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Simbu Car Accident: ಸಿಂಬು ಒಡೆತನದ ಕಾರು ಅಪಘಾತಕ್ಕೆ ಒಳಗಾಗಿ 70 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಸಿಂಬು ತಂದೆ ಟಿ. ರಾಜೇಂದರ್​ ಅವರ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ನಟ ಸಿಂಬು ಕಾರು ಅಪಘಾತ; 70 ವರ್ಷದ ವ್ಯಕ್ತಿ ಸಾವು: ಆ್ಯಕ್ಸಿಡೆಂಟ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸಿಂಬು ಕಾರು ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on:Mar 24, 2022 | 9:04 AM

Share

ಸೆಲೆಬ್ರಿಟಿಗಳ ಕಾರು ಅಪಘಾತಕ್ಕೆ ಜನಸಾಮಾನ್ಯರು ಬಲಿ ಆದ ಘಟನೆಗಳು ಪದೇಪದೇ ಮರುಕಳಿಸುತ್ತಲೇ ಇವೆ. ಈಗ ಖ್ಯಾತ ಕಾಲಿವುಡ್​ ನಟ ಸಿಂಬು (Actor Simbu) ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ಮಾ.18ರಂದು ಈ ಘಟನೆ ನೆಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಮಿಳು ಚಿತ್ರರಂಗದಲ್ಲಿ ಸಿಂಬು (Silambarasan) ಅವರು ತುಂಬ ಫೇಮಸ್​ ಆಗಿದ್ದಾರೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಕಳೆದ ವರ್ಷ ‘ಮಾನಾಡು’ ಸಿನಿಮಾದ ಯಶಸ್ಸಿನಿಂದ ಖುಷಿ ಆಗಿದ್ದರು. ಈಗ ಅವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಿಂಬು ಹೆಸರಿನಲ್ಲಿ ನೋಂದಣಿ ಆಗಿರುವ ಕಾರು ಅಪಘಾತಕ್ಕೆ ಈಡಾಗಿದ್ದು, ಈ ಆ್ಯಕ್ಸಿಡೆಂಟ್​ನಲ್ಲಿ 70 ವರ್ಷದ ವ್ಯಕ್ತಿ ಮೃತರಾಗಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ಘಟನೆಯ ವಿವರಗಳು ಹೊರಬರಲಾರಂಭಿಸಿವೆ. ಅಪಘಾತಕ್ಕೆ (Simbu Car Accident) ಸಂಬಂಧಿಸಿದಂತೆ ಕಾರು ಚಾಲಕನನ್ನು ಬಂಧಿಸಲಾಗಿದೆ. ಇನ್ನಷ್ಟು ವಿವರಗಳು ಬಹಿರಂಗ ಆಗಬೇಕಿದೆ. ನಿಧನರಾದ ವ್ಯಕ್ತಿಯನ್ನು ಮುನುಸ್ವಾಮಿ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುನುಸ್ವಾಮಿ ಅವರು ಬೀದಿ ಬದಿಯಲ್ಲಿ ವಾಸಿಸುತ್ತಿದ್ದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ತೇನಂಪೇಟ್​ ಪ್ರದೇಶದ ಸುತ್ತಮುತ್ತ ಸಣ್ಣ-ಪುಟ್ಟ ಕೆಲಸಗಳನ್ನು ಮಾಡಿಕೊಂಡು ಅವರು ಜೀವನ ಸಾಗಿಸುತ್ತಿದ್ದರು. ಒಂದು ವಾರದ ಹಿಂದೆ ಚರಂಡಿ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದ ವೇಳೆ ಅವರ ಕಾಲಿಗೆ ಪೆಟ್ಟಾಗಿತ್ತು. ಆದ್ದರಿಂದ ಅವರಿಗೆ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ತೆವಳುತ್ತ ರಸ್ತೆ ದಾಟುತ್ತಿದ್ದ ಮುನುಸ್ವಾಮಿ ಮೇಲೆ ಸಿಂಬು ಒಡೆತನದ ಕಾರು ಹರಿದಿದೆ.

ಅಪಘಾತ ನಡೆದ ಕೂಡಲೇ ಕಾರಿನಲ್ಲಿ ಇದ್ದವರು ಪರಾರಿ ಆಗಿದ್ದಾರೆ. ಸ್ಥಳೀಯರು ಮುನುಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತಪಟ್ಟರು ಎಂಬುದು ತಿಳಿದುಬಂದಿದೆ. ಸಿಂಬು ತಂದೆ ಟಿ. ರಾಜೇಂದ್ರ ಅವರ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕನ ಹೆಸರು ಸೆಲ್ವಂ ಎಂದು ತಿಳಿದುಬಂದಿದೆ. ಆ ಕಾರು ಎಲ್ಲಿಂದ ಬರುತ್ತಿತ್ತು? ಕಾರಿನಲ್ಲಿ ಯಾರೆಲ್ಲ ಇದ್ದರು? ಸಿಂಬು ಹೆಸರಿನಲ್ಲಿ ರಿಜಿಸ್ಟರ್​ ಆಗಿರುವ ಈ ಕಾರಿನಲ್ಲಿ ಸಿಂಬು ಪ್ರಯಾಣ ಮಾಡುತ್ತಿರಲಿಲ್ಲವಾ ಎಂಬಿತ್ಯಾದಿ ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ನಟ ಸಿಂಬು ಹಿನ್ನೆಲೆ:

ಬಾಲನಟನಾಗಿಯೇ ಚಿತ್ರರಂಗಕ್ಕೆ ಸಿಂಬು ಕಾಲಿಟ್ಟರು. ಸಿನಿಮಾ ಕ್ಷೇತ್ರದಲ್ಲಿ ಅವರು ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. 1980ರ ದಶಕದಿಂದಲೂ ಅವರು ಬಣ್ಣದ ಲೋಕದ ನಂಟು ಹೊಂದಿದ್ದಾರೆ. ನಿರ್ದೇಶಕನಾಗಿ, ಚಿತ್ರಕಥೆ ಬರಹಗಾರನಾಗಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ. 20ರ ಪ್ರಾಯಕ್ಕೂ ಮುನ್ನವೇ ಅವರು ಹೀರೋ ಆದರು. 21ನೇ ವಯಸ್ಸಿಗೆ ‘ಮನ್ಮಥಂ’ ಚಿತ್ರದ ಸ್ಕ್ರಿಪ್ಟ್​ ಬರೆದು, ನಿರ್ದೇಶನ ವಿಭಾಗದ ಮೇಲ್ವಿಚಾರಣೆ ನೋಡಿಕೊಂಡರು. ಆ ಚಿತ್ರ ಸೂಪರ್​ ಹಿಟ್​ ಆಯಿತು. ನಟನಾಗಿ ಅವರ ವೃತ್ತಿಜೀವನಕ್ಕೆ ದೊಡ್ಡ ಯಶಸ್ಸು ತಂದುಕೊಟ್ಟಿತು. ಕೈತುಂಬ ಆಫರ್​ ಇಟ್ಟುಕೊಂಡು, ಬಹುಬೇಡಿಕೆಯ ನಟನಾಗಿ ಅವರು ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ:

 ಶೀಘ್ರವೇ ಸಿಂಬು-ನಿಧಿ ಅಗರ್​ವಾಲ್​ ಮದುವೆ? ಹೊರ ಬಿತ್ತು ಹೊಸ ಸುದ್ದಿ

‘ಮಾನಾಡು’ ನಟ ಸಿಂಬುಗೆ ಗೌರವ ಡಾಕ್ಟರೇಟ್​; ಚಿತ್ರರಂಗದಲ್ಲಿ ಈ ಕಲಾವಿದನ ಸಾಧನೆ ಏನು?

Published On - 9:02 am, Thu, 24 March 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ