AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಗಪುರ ಪೊಲೀಸರನ್ನೂ ಬಿಟ್ಟಿಲ್ಲ ರಜನೀಕಾಂತ್​ರ ‘ಕೂಲಿ’ ಕ್ರೇಜು

Rajinikanth: ಭಾರತೀಯ ಸಿನಿಮಾಗಳಿಗೆ ಅಮೆರಿಕ, ಜಪಾನ್, ಯುಎಇ ಇನ್ನೂ ಕೆಲ ದೇಶಗಳಲ್ಲಿ ಭಾರಿ ಬೇಡಿಕೆ ಇರುವುದು ಗೊತ್ತಿರುವುದೇ ಆದರೆ ಸಿಂಗಪುರದಂಥಹಾ, ಅತಿಯಾದ ಸಿನಿಮಾ ಸಂಸ್ಕೃತಿ ಇಲ್ಲದ ದೇಶಗಳಲ್ಲಿಯೂ ಹವಾ ಎಬ್ಬಿಸಿದೆ ರಜನೀಕಾಂತ್​ರ ‘ಕೂಲಿ’ ಸಿನಿಮಾ. ಹೌದು, ರಜನೀಕಾಂತ್​ ನಟನೆಯ ‘ಕೂಲಿ’ ಸಿನಿಮಾದ ಹಾಡೊಂದಕ್ಕೆ ಸಿಂಗಪುರದ ಪೊಲೀಸರು ರೀಲ್ಸ್ ಮಾಡಿದ್ದಾರೆ.

ಸಿಂಗಪುರ ಪೊಲೀಸರನ್ನೂ ಬಿಟ್ಟಿಲ್ಲ ರಜನೀಕಾಂತ್​ರ ‘ಕೂಲಿ’ ಕ್ರೇಜು
Rajinikanth
ಮಂಜುನಾಥ ಸಿ.
|

Updated on:Aug 10, 2025 | 7:07 PM

Share

ರಜನೀಕಾಂತ್ (Rajinikanth) ನಟನೆಯ ‘ಕೂಲಿ’ ಸಿನಿಮಾ ಬಿಡುಗಡೆಗೆ ಇನ್ನು ನಾಲ್ಕು ದಿನಗಳಷ್ಟೆ ಬಾಕಿ ಇದೆ. ಸಿನಿಮಾದ ಹವಾ ಭಾರತದಲ್ಲಿ ಬಲು ಜೋರಾಗಿ ಹರಡಿದೆ. ಅಂದಹಾಗೆ ಭಾರತದಲ್ಲಿ ಮಾತ್ರವಲ್ಲ ಹೊರದೇಶಗಳಲ್ಲಿಯೂ ಸಿನಿಮಾದ ಹವಾ ಬಲು ಜೋರಾಗಿದೆ. ವಿದೇಶಗಳಲ್ಲಿ ಸಹ ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾ ಹವಾ ಎಬ್ಬಿಸಿದೆ.

ಭಾರತೀಯ ಸಿನಿಮಾಗಳಿಗೆ ಅಮೆರಿಕ, ಜಪಾನ್, ಯುಎಇ ಇನ್ನೂ ಕೆಲ ದೇಶಗಳಲ್ಲಿ ಭಾರಿ ಬೇಡಿಕೆ ಇರುವುದು ಗೊತ್ತಿರುವುದೇ ಆದರೆ ಸಿಂಗಪುರದಂಥಹಾ, ಅತಿಯಾದ ಸಿನಿಮಾ ಸಂಸ್ಕೃತಿ ಇಲ್ಲದ ದೇಶಗಳಲ್ಲಿಯೂ ಹವಾ ಎಬ್ಬಿಸಿದೆ ರಜನೀಕಾಂತ್​ರ ‘ಕೂಲಿ’ ಸಿನಿಮಾ. ಹೌದು, ರಜನೀಕಾಂತ್​ ನಟನೆಯ ‘ಕೂಲಿ’ ಸಿನಿಮಾದ ಹಾಡೊಂದಕ್ಕೆ ಸಿಂಗಪುರದ ಪೊಲೀಸರು ರೀಲ್ಸ್ ಮಾಡಿದ್ದಾರೆ.

ಸಿಂಗಪುರ ಪೊಲೀಸ್ ಪಡೆ ವಿಶ್ವದ ಅತ್ಯುತ್ತಮ ಪೊಲೀಸ್ ಪಡೆಗಳಲ್ಲಿ ಒಂದು. ಇದೀಗ ಸಿಂಗಪುರ ಪೊಲೀಸರು ‘ಕೂಲಿ’ ಸಿನಿಮಾದ ಮಾಸ್ ಹಾಡನ್ನು ಹಿನ್ನೆಲೆಯಾಗಿ ಬಳಸಿಕೊಂಡು ಸ್ಲೋ ಮೋಷನ್​​ನಲ್ಲಿ ತಮ್ಮ ಪೊಲೀಸ್ ಪಡೆಯ ವಿವಿಧ ವಿಭಾಗಗಳನ್ನು ತೋರಿಸುವ ವಿಡಿಯೋ ಒಂದನ್ನು ಮಾಡಿ ತಮ್ಮ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಂದಹಾಗೆ ಸಿಂಗಪುರದಲ್ಲಿ ರಜನೀಕಾಂತ್​ಗೆ ದೊಡ್ಡ ಸಂಖ್ಯೆಯ ಅಭಿಮಾನಿ ವರ್ಗವಿದೆ. ಸಿಂಗಪುರದಲ್ಲಿ ಭಾರತೀಯರ ಸಂಖ್ಯೆ ಹೆಚ್ಚಿದೆ. ಈ ಹಿಂದೆ ಸಹ ರಜನೀಕಾಂತ್​ ಅವರ ಹಲವು ಸಿನಿಮಾಗಳು ಸಿಂಗಪುರದಲ್ಲಿ ಉತ್ತಮ ಪ್ರದರ್ಶನ ಕಂಡಿದ್ದವು. ಸಿಂಗಪುರ ಮಾತ್ರವೇ ಅಲ್ಲದೆ ಮಲೇಷ್ಯಾನಲ್ಲೂ ಸಹ ರಜನೀಕಾಂತ್ ಅವರಿಗೆ ಭಾರಿ ದೊಡ್ಡ ಅಭಿಮಾನಿ ವರ್ಗವಿದೆ. ಜಪಾನ್​ನಲ್ಲಿ ಅಂತೂ ದಶಕಗಳಿಂದಲೂ ರಜನೀಕಾಂತ್ ಅವರ ಸಿನಿಮಾಗಳು ಬ್ಲಾಕ್ ಬಸ್ಟರ್ ಪ್ರದರ್ಶನ ಕಾಣುತ್ತಲೇ ಬರುತ್ತಿವೆ.

ಇದನ್ನೂ ಓದಿ:‘ವಾರ್ 2’ Vs ‘ಕೂಲಿ’: ಬುಕ್​ ಮೈ ಶೋನಲ್ಲಿ ಯಾರಿಗೆ ಹೆಚ್ಚಿದೆ ಬೆಂಬಲ?

ಇನ್ನು ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾ ಆಗಸ್ಟ್ 14 ರಂದು ಬಿಡುಗಡೆ ಆಗಲಿದೆ. ಸಿನಿಮಾ ಅನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಆಮಿರ್ ಖಾನ್, ಉಪೇಂದ್ರ, ವಿಲನ್ ಪಾತ್ರದಲ್ಲಿ ಅಕ್ಕಿನೇನಿ ನಾಗಾರ್ಜುನ, ಸೋಬಿನ್, ಶ್ರುತಿ ಹಾಸನ್, ಪೂಜಾ ಹೆಗ್ಡೆ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Sun, 10 August 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ