AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಗಪುರ ಪೊಲೀಸರನ್ನೂ ಬಿಟ್ಟಿಲ್ಲ ರಜನೀಕಾಂತ್​ರ ‘ಕೂಲಿ’ ಕ್ರೇಜು

Rajinikanth: ಭಾರತೀಯ ಸಿನಿಮಾಗಳಿಗೆ ಅಮೆರಿಕ, ಜಪಾನ್, ಯುಎಇ ಇನ್ನೂ ಕೆಲ ದೇಶಗಳಲ್ಲಿ ಭಾರಿ ಬೇಡಿಕೆ ಇರುವುದು ಗೊತ್ತಿರುವುದೇ ಆದರೆ ಸಿಂಗಪುರದಂಥಹಾ, ಅತಿಯಾದ ಸಿನಿಮಾ ಸಂಸ್ಕೃತಿ ಇಲ್ಲದ ದೇಶಗಳಲ್ಲಿಯೂ ಹವಾ ಎಬ್ಬಿಸಿದೆ ರಜನೀಕಾಂತ್​ರ ‘ಕೂಲಿ’ ಸಿನಿಮಾ. ಹೌದು, ರಜನೀಕಾಂತ್​ ನಟನೆಯ ‘ಕೂಲಿ’ ಸಿನಿಮಾದ ಹಾಡೊಂದಕ್ಕೆ ಸಿಂಗಪುರದ ಪೊಲೀಸರು ರೀಲ್ಸ್ ಮಾಡಿದ್ದಾರೆ.

ಸಿಂಗಪುರ ಪೊಲೀಸರನ್ನೂ ಬಿಟ್ಟಿಲ್ಲ ರಜನೀಕಾಂತ್​ರ ‘ಕೂಲಿ’ ಕ್ರೇಜು
Rajinikanth
ಮಂಜುನಾಥ ಸಿ.
|

Updated on:Aug 10, 2025 | 7:07 PM

Share

ರಜನೀಕಾಂತ್ (Rajinikanth) ನಟನೆಯ ‘ಕೂಲಿ’ ಸಿನಿಮಾ ಬಿಡುಗಡೆಗೆ ಇನ್ನು ನಾಲ್ಕು ದಿನಗಳಷ್ಟೆ ಬಾಕಿ ಇದೆ. ಸಿನಿಮಾದ ಹವಾ ಭಾರತದಲ್ಲಿ ಬಲು ಜೋರಾಗಿ ಹರಡಿದೆ. ಅಂದಹಾಗೆ ಭಾರತದಲ್ಲಿ ಮಾತ್ರವಲ್ಲ ಹೊರದೇಶಗಳಲ್ಲಿಯೂ ಸಿನಿಮಾದ ಹವಾ ಬಲು ಜೋರಾಗಿದೆ. ವಿದೇಶಗಳಲ್ಲಿ ಸಹ ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾ ಹವಾ ಎಬ್ಬಿಸಿದೆ.

ಭಾರತೀಯ ಸಿನಿಮಾಗಳಿಗೆ ಅಮೆರಿಕ, ಜಪಾನ್, ಯುಎಇ ಇನ್ನೂ ಕೆಲ ದೇಶಗಳಲ್ಲಿ ಭಾರಿ ಬೇಡಿಕೆ ಇರುವುದು ಗೊತ್ತಿರುವುದೇ ಆದರೆ ಸಿಂಗಪುರದಂಥಹಾ, ಅತಿಯಾದ ಸಿನಿಮಾ ಸಂಸ್ಕೃತಿ ಇಲ್ಲದ ದೇಶಗಳಲ್ಲಿಯೂ ಹವಾ ಎಬ್ಬಿಸಿದೆ ರಜನೀಕಾಂತ್​ರ ‘ಕೂಲಿ’ ಸಿನಿಮಾ. ಹೌದು, ರಜನೀಕಾಂತ್​ ನಟನೆಯ ‘ಕೂಲಿ’ ಸಿನಿಮಾದ ಹಾಡೊಂದಕ್ಕೆ ಸಿಂಗಪುರದ ಪೊಲೀಸರು ರೀಲ್ಸ್ ಮಾಡಿದ್ದಾರೆ.

ಸಿಂಗಪುರ ಪೊಲೀಸ್ ಪಡೆ ವಿಶ್ವದ ಅತ್ಯುತ್ತಮ ಪೊಲೀಸ್ ಪಡೆಗಳಲ್ಲಿ ಒಂದು. ಇದೀಗ ಸಿಂಗಪುರ ಪೊಲೀಸರು ‘ಕೂಲಿ’ ಸಿನಿಮಾದ ಮಾಸ್ ಹಾಡನ್ನು ಹಿನ್ನೆಲೆಯಾಗಿ ಬಳಸಿಕೊಂಡು ಸ್ಲೋ ಮೋಷನ್​​ನಲ್ಲಿ ತಮ್ಮ ಪೊಲೀಸ್ ಪಡೆಯ ವಿವಿಧ ವಿಭಾಗಗಳನ್ನು ತೋರಿಸುವ ವಿಡಿಯೋ ಒಂದನ್ನು ಮಾಡಿ ತಮ್ಮ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಂದಹಾಗೆ ಸಿಂಗಪುರದಲ್ಲಿ ರಜನೀಕಾಂತ್​ಗೆ ದೊಡ್ಡ ಸಂಖ್ಯೆಯ ಅಭಿಮಾನಿ ವರ್ಗವಿದೆ. ಸಿಂಗಪುರದಲ್ಲಿ ಭಾರತೀಯರ ಸಂಖ್ಯೆ ಹೆಚ್ಚಿದೆ. ಈ ಹಿಂದೆ ಸಹ ರಜನೀಕಾಂತ್​ ಅವರ ಹಲವು ಸಿನಿಮಾಗಳು ಸಿಂಗಪುರದಲ್ಲಿ ಉತ್ತಮ ಪ್ರದರ್ಶನ ಕಂಡಿದ್ದವು. ಸಿಂಗಪುರ ಮಾತ್ರವೇ ಅಲ್ಲದೆ ಮಲೇಷ್ಯಾನಲ್ಲೂ ಸಹ ರಜನೀಕಾಂತ್ ಅವರಿಗೆ ಭಾರಿ ದೊಡ್ಡ ಅಭಿಮಾನಿ ವರ್ಗವಿದೆ. ಜಪಾನ್​ನಲ್ಲಿ ಅಂತೂ ದಶಕಗಳಿಂದಲೂ ರಜನೀಕಾಂತ್ ಅವರ ಸಿನಿಮಾಗಳು ಬ್ಲಾಕ್ ಬಸ್ಟರ್ ಪ್ರದರ್ಶನ ಕಾಣುತ್ತಲೇ ಬರುತ್ತಿವೆ.

ಇದನ್ನೂ ಓದಿ:‘ವಾರ್ 2’ Vs ‘ಕೂಲಿ’: ಬುಕ್​ ಮೈ ಶೋನಲ್ಲಿ ಯಾರಿಗೆ ಹೆಚ್ಚಿದೆ ಬೆಂಬಲ?

ಇನ್ನು ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾ ಆಗಸ್ಟ್ 14 ರಂದು ಬಿಡುಗಡೆ ಆಗಲಿದೆ. ಸಿನಿಮಾ ಅನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಆಮಿರ್ ಖಾನ್, ಉಪೇಂದ್ರ, ವಿಲನ್ ಪಾತ್ರದಲ್ಲಿ ಅಕ್ಕಿನೇನಿ ನಾಗಾರ್ಜುನ, ಸೋಬಿನ್, ಶ್ರುತಿ ಹಾಸನ್, ಪೂಜಾ ಹೆಗ್ಡೆ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Sun, 10 August 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು