AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರ್ಫಾರ್ಮೆನ್ಸ್ ವೇಳೆ ಅಭಿಮಾನಿಯ ಮೊಬೈಲ್​ನ ಕಸಿದು ಎಸೆದ ಆದಿತ್ಯ ನಾರಾಯಣ್; ಗಾಯಕನಿಗೆ ಛೀಮಾರಿ

ಗಾಯಕ ಆದಿತ್ಯ ನಾರಾಯಣ್ ಚತ್ತೀಸಗಢದ ಕಾಲೇಜೊಂದರಲ್ಲಿ ಪ್ರೋಗ್ರಾಂ ಆಯೋಜನೆ ಮಾಡಿದ್ದರು. ಈ ವೇಳೆ ಸಂಗೀತ ಪ್ರೇಮಿಗಳು ನೆರೆದಿದ್ದರು. ಆದಿತ್ಯ ಅವರ ಧ್ವನಿಯಲ್ಲಿ ಸಾಂಗ್ ಕೇಳುತ್ತಾ ಫ್ಯಾನ್ಸ್ ಖುಷಿಯ ಅಲೆಯಲ್ಲಿ ತೇಲುತ್ತಿದ್ದರು. ಈ ವೇಳೆ ಓರ್ವ ಅಭಿಮಾನಿ ಆದಿತ್ಯ ಪರ್ಫಾರ್ಮೆನ್ಸ್​ನ ಮೊಬೈಲ್​​ನಲ್ಲಿ ಶೂಟ್ ಮಾಡುತ್ತಿದ್ದ. ಇದು ಆದಿತ್ಯ ಕೋಪಕ್ಕೆ ಕಾರಣ ಆಗಿದೆ.

ಪರ್ಫಾರ್ಮೆನ್ಸ್ ವೇಳೆ ಅಭಿಮಾನಿಯ ಮೊಬೈಲ್​ನ ಕಸಿದು ಎಸೆದ ಆದಿತ್ಯ ನಾರಾಯಣ್; ಗಾಯಕನಿಗೆ ಛೀಮಾರಿ
ಆದಿತ್ಯ ನಾರಾಯಣ್
ರಾಜೇಶ್ ದುಗ್ಗುಮನೆ
|

Updated on: Feb 12, 2024 | 11:15 AM

Share

ಗಾಯಕ ಆದಿತ್ಯ ನಾರಯಣ್ (Aditya Narayan) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಹಾಗಂತ ಅವರ ಹಾಡು ಸೆನ್ಸೇಷನ್ ಸೃಷ್ಟಿ ಮಾಡಿಲ್ಲ. ಸಂಗೀತ ಕಾರ್ಯಕ್ರಮದ ವೇಳೆ ಆದಿತ್ಯ ಅವರು ಅಭಿಮಾನಿಯ ಫೋನ್​ನ ಕಸಿದು ಎಸೆದಿದ್ದಾರೆ. ಅವರು ಈ ರೀತಿ ವರ್ತನೆ ತೋರಿಸಿರುವುದಕ್ಕೆ ಅನೇಕರು ಆದಿತ್ಯ ಅವರಿಗೆ ಛೀಮಾರಿ ಹಾಕುತ್ತಿದ್ದಾರೆ. ಈ ರೀತಿ ಅವರು ನಡೆದುಕೊಳ್ಳಬಾರದಿತ್ತು ಎಂದು ಅನೇಕರು ಹೇಳಿದ್ದಾರೆ. ಸದ್ಯ ಈ ವಿಡಿಯೋ ಸೆನ್ಸೇಷನ್ ಸೃಷ್ಟಿ ಮಾಡಿದೆ.

ಖ್ಯಾತ ಗಾಯಕರು ಸ್ಟೇಜ್ ಪರ್ಫಾರ್ಮೆನ್ಸ್ ನೀಡುತ್ತಾರೆ. ಇದಕ್ಕಾಗಿ ಅವರು ಸಾಕಷ್ಟು ಹಣ ಪಡೆಯುತ್ತಾರೆ. ಚತ್ತೀಸಗಢದ ಕಾಲೇಜೊಂದರಲ್ಲಿ ಆದಿತ್ಯ ನಾರಾಯಣ್ ಅವರು ಪ್ರೋಗ್ರಾಂ ಆಯೋಜನೆ ಮಾಡಿದ್ದರು. ಈ ವೇಳೆ ಸಂಗೀತ ಪ್ರೇಮಿಗಳು ನೆರೆದಿದ್ದರು. ಆದಿತ್ಯ ಅವರ ಧ್ವನಿಯಲ್ಲಿ ಸಾಂಗ್ ಕೇಳುತ್ತಾ ಫ್ಯಾನ್ಸ್ ಖುಷಿಯ ಅಲೆಯಲ್ಲಿ ತೇಲುತ್ತಿದ್ದರು. ಈ ವೇಳೆ ಓರ್ವ ಅಭಿಮಾನಿ ಆದಿತ್ಯ ಅವರ ಪರ್ಫಾರ್ಮೆನ್ಸ್​ನ ಮೊಬೈಲ್​​ನಲ್ಲಿ ಶೂಟ್ ಮಾಡುತ್ತಿದ್ದ. ಇದು ಆದಿತ್ಯ ಕೋಪಕ್ಕೆ ಕಾರಣ ಆಗಿದೆ.

ಶಾರುಖ್ ಖಾನ್ ನಟನೆಯ ‘ಡಾನ್’ ಚಿತ್ರದ ‘ಆಜ್ ಕಿ ರಾತ್..’ ಹಾಡನ್ನು ಆದಿತ್ಯ ಹಾಡುತ್ತಿದ್ದರು. ಏಕಾಏಕಿ ಸಿಟ್ಟಾದ ಅವರು ಅಭಿಮಾನಿಯ ಮೊಬೈಲ್​ನ ಕಸಿದು ಜನರತ್ತ ಎಸೆದಿದ್ದಾರೆ. ಅವರ ವರ್ತನೆ ಅನೇಕರಿಗೆ ಸಿಟ್ಟು ಥರಿಸಿದೆ. ಅವರು ಈ ರೀತಿ ಮಾಡಬಾರದಿತ್ತು ಎಂದು ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಹೇಳಿದ್ದಾರೆ.

‘ಆದಿತ್ಯ ಅವರೇ ಅಷ್ಟೊಂದು ಸಿಟ್ಟು ಏಕೆ? ಈ ರೀತಿ ಅಗೌರಯುತವಾಗಿ ನಡೆದುಕೊಳ್ಳೋದು ಎಷ್ಟು ಸರಿ? ಅವರು ನಿಮ್ಮ ಅಭಿಮಾನಿ. ಅವರಿಗೆ ಗೌರವ ನೀಡಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಅಭಿಮಾನಿಗಳು ಬರದೇ ಇದ್ದರೆ ನೀವು ವೇದಿಕೆ ಕಾರ್ಯಕ್ರಮ ಹೇಗೆ ನೀಡುತ್ತೀರಿ? ನಿಮ್ಮಿಂದಲೇ ನಾವು’ ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ: ಸಂಗೀತಾ ಶೃಂಗೇರಿ ಮೇಲಿರೋ ಅಭಿಮಾನ ಎಂಥದ್ದು? ಅದಕ್ಕೆ ಈ ವಿಡಿಯೋನೆ ಸಾಕ್ಷಿ 

ಅಸಲಿಗೆ ಆದಿತ್ಯ ನಾರಾಯಣ್ ಅವರಿಗೆ ಸಿಟ್ಟು ತರಿಸಿದ ವಿಚಾರ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಆದಿತ್ಯ ಅವರು ಈ ರೀತಿ ವಿವಾದ ಮಾಡಿಕೊಳ್ಳುತ್ತಿರುವುದು ಇದೇ ಮೊದಲೇನು ಅಲ್ಲ. 2017ರಲ್ಲಿ ರಾಯಪುರ ವಿಮಾನ ನಿಲ್ದಾಣದಲ್ಲಿ ಅವರು ಸ್ಟಾಪ್​ಗಳ ಜೊತೆ ಫೈಟ್​ಗೆ ಇಳಿದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!
ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!
ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್
ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು