AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಗುಣಮುಖರಾದ ಎರಡೇ ದಿನಕ್ಕೆ ಗಾಯಕ ಅರಿಜೀತ್​​ ಸಿಂಗ್​ ತಾಯಿ ನಿಧನ

Arjit Singh Mother Passed Away: ಅದಿತಿ ಸಿಂಗ್​ ಅವರಿಗೆ ಇತ್ತೀಚೆಗೆ ಕೊವಿಡ್​ ಸೋಂಕು ದೃಢಪಟ್ಟಿತ್ತು. ಹೀಗಾಗಿ, ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಇತ್ತೀಚೆಗೆ ಗುಣಮುಖರಾಗಿದ್ದರಿಂದ ಕುಟುಂಬದವರು ನಿಟ್ಟುಸಿರು ಬಿಟ್ಟಿದ್ದರು

ಕೊವಿಡ್​ನಿಂದ ಗುಣಮುಖರಾದ ಎರಡೇ ದಿನಕ್ಕೆ ಗಾಯಕ ಅರಿಜೀತ್​​ ಸಿಂಗ್​ ತಾಯಿ ನಿಧನ
ತಾಯಿ ಜತೆ ಅರ್ಜಿತ್​ ಸಿಂಗ್​
ರಾಜೇಶ್ ದುಗ್ಗುಮನೆ
|

Updated on:May 20, 2021 | 8:39 PM

Share

ಕೊವಿಡ್​ನಿಂದ ಮೃತಪಡುವ ಸೆಲೆಬ್ರಿಟಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಬಾಲಿವುಡ್​, ಸ್ಯಾಂಡಲ್​ವುಡ್, ಕಾಲಿವುಡ್​ ನಟ,ನಟಿಯರು, ನಿರ್ಮಾಪಕರು ಹಾಗೂ ನಿರ್ದೇಶಕರು ಕೊವಿಡ್​ಗೆ ಬಲಿಯಾಗುತ್ತಿದ್ದಾರೆ. ಈಗ ಖ್ಯಾತ ಗಾಯಕ ಅರಿಜೀತ್​​ ಸಿಂಗ್​ ತಾಯಿ ಅದಿತಿ ಸಿಂಗ್​ ಕೂಡ ನಿಧನ ಹೊಂದಿದ್ದಾರೆ. ವಿಚಿತ್ರ ಎಂದರೆ, ಕೊವಿಡ್​ನಿಂದ ಗುಣಮುಖರಾದ ಕೆಲವೇ ದಿನದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಅದಿತಿ ಸಿಂಗ್​ ಅವರಿಗೆ ಇತ್ತೀಚೆಗೆ ಕೊವಿಡ್​ ಸೋಂಕು ದೃಢಪಟ್ಟಿತ್ತು. ಹೀಗಾಗಿ, ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಇತ್ತೀಚೆಗೆ ಗುಣಮುಖರಾಗಿದ್ದರಿಂದ ಕುಟುಂಬದವರು ನಿಟ್ಟುಸಿರು ಬಿಟ್ಟಿದ್ದರು. ಆದಾಗ್ಯೂ, ಅವರು ಬದುಕಲು ಸಾಧ್ಯವಾಗಿಲ್ಲ.

ಅದಿತಿ ಸಿಂಗ್​ ಅವರಿಗೆ 52 ವರ್ಷ ವಯಸ್ಸಾಗಿತ್ತು. ಸೋಮವಾರ ಪರೀಕ್ಷೆಗೆ ಒಳಗಾದಾಗ ಅವರಿಗೆ ಕೊವಿಡ್​ ನೆಗೆಟಿವ್​ ಬಂದಿತ್ತು. ಈಗ ಸೆರೆಬ್ರಲ್ ಸ್ಟ್ರೋಕ್ ಉಂಟಾದ ಹಿನ್ನೆಲೆಯಲ್ಲಿ ಅವರು ಬುಧವಾರ ನಿಧನಕ್ಕೆ ಒಳಗಾಗಿದ್ದಾರೆ. ಬುಧವಾರ ರಾತ್ರಿ 11 ಗಂಟೆಗೆ ಅದಿತಿ ಮೃತಪಟ್ಟಿದ್ದಾರೆ. ಅವರ ಸಾವಿಗೆ ಸೆರೆಬ್ರಲ್ ಸ್ಟ್ರೋಕ್ ಕಾರಣ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್ಗೆ ಬಲಿಯಾದರು. ತಮಿಳು ನಟ ಪಾಂಡು ಅವರು ಮೇ 6ರಂದು ನಿಧನರಾದರು. ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಇದನ್ನೂ ಓದಿ: ‘ಸರಿಗಮಪ’ ಸುಬ್ರಮಣಿ ಪತ್ನಿ ಸಾವಿನ ಕೇಸ್​​ಗೆ ಟ್ವಿಸ್ಟ್​; ಕೊರೊನಾ ಅಲ್ಲ, ಆತ್ಮಹತ್ಯೆಯಿಂದ ನಿಧನ?

ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ

Published On - 8:17 pm, Thu, 20 May 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!